ಬಾಕಿ 10 ದಿಬ್ಬಗಳಲ್ಲಿಯೂ ಮರಳುಗಾರಿಕೆಗೆ ಅನುಮತಿ


Team Udayavani, Mar 12, 2019, 1:00 AM IST

sand.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಬಾಕಿಯಾಗಿದ್ದ 10 ಬ್ಲಾಕ್‌ಗಳಲ್ಲಿಯೂ ಮರಳುಗಾರಿಕೆ ನಡೆಸಲು 21 ಮಂದಿಗೆ ಪರವಾನಿಗೆ ನೀಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎಲ್ಲ 22 ಮರಳು ದಿಬ್ಬಗಳಲ್ಲೂ (ಬ್ಲಾಕ್‌) ಅನುಮತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಮರಳುಗಾರಿಕೆ ಚಟುವಟಿಕೆಗಳು ಪ್ರಾರಂಭಗೊಳ್ಳುವ ನಿರೀಕ್ಷೆಯಿದೆ.

12 ದಿಬ್ಬಗಳಲ್ಲಿ 72 ಮಂದಿ ಗುತ್ತಿಗೆದಾರರಿಂದ ಈಗಾಗಲೇ ಮರಳುಗಾರಿಕೆ ನಡೆಯುತ್ತಿದೆ. ಉಳಿದ 10 ದಿಬ್ಬಗಳಲ್ಲೂ ಮರಳು ತೆಗೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ದೊರಕಿದ್ದು ಪ್ರಥಮ ಹಂತದಲ್ಲಿ ಬಾಕಿಯುಳಿದಿರುವ ಅರ್ಹ ಗುತ್ತಿಗೆದಾರರಿಗೆ ಇದನ್ನು ವಹಿಸಿಕೊಡಲು ನಿರ್ಧರಿಸ ಲಾಗಿತ್ತು. ಅದರಂತೆ 21 ಮಂದಿಗೆ ಪರವಾನಿಗೆ ನೀಡಲಾಗಿದ್ದು ಮುಂದಿನ ಹಂತದಲ್ಲಿ ಇನ್ನಷ್ಟು ಮಂದಿ ಆರ್ಹ ಗುತ್ತಿಗೆದಾರರನ್ನು ಗುರುತಿಸಿ ಪರವಾನಿಗೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. 

ನಾನ್‌ಸಿಆರ್‌ಝಡ್‌ ವಲಯ
ನಾನ್‌ ಸಿಆರ್‌ಝಡ್‌ ವಲಯದಲ್ಲಿ ಸುಳ್ಯದಲ್ಲಿ 2, ಪುತ್ತೂರಿನಲ್ಲಿ 4, ಬಂಟ್ವಾಳ ದಲ್ಲಿ 1 ಸೇರಿ 7 ಬ್ಲಾಕ್‌ಗಳಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಫೈನಾನ್ಶಿಯಲ್‌ ಬಿಡ್‌ ಆಗಿದ್ದು ಶೀಘ್ರದಲ್ಲೇ ಮರಳುಗಾರಿಕೆ ಆರಂಭಗೊಳ್ಳಲಿದೆ. ಈಗಾಗಲೇ ಎರಡು ಬ್ಲಾಕ್‌ಗಳಲ್ಲಿ ಈ ಹಿಂದೆಯೇ ಅನುಮತಿ ದೊರಕಿ ಮರಳುಗಾರಿಕೆ ನಡೆಯುತ್ತಿದೆ.ನಾನ್‌ಸಿಆರ್‌ ಝಡ್‌ ವಲಯದಲ್ಲಿ 5 ವರ್ಷಗಳವರೆಗೆ ಮರಳು ತೆಗೆಯಲು ಅನುಮತಿ ನೀಡಲಾಗುತ್ತಿದೆ. ನಾನ್‌ ಸಿಆರ್‌ಝಡ್‌ ವಲಯದ ನೇತ್ರಾವತಿ, ಕುಮಾರಧಾರಾ ಹಾಗೂ ಗುಂಡ್ಯ ನದಿ ಪಾತ್ರಗಳಲ್ಲಿನ 15 ಬ್ಲಾಕ್‌ಗಳಿಗೆ ಮರಳುಗಾರಿಕೆಗೆ ನ. 15ರಂದು ಟೆಂಡರ್‌ ಪ್ರಕಟನೆ ಹೊರಡಿಸಲಾಗಿತ್ತು.

ನಿಯಮ ಸಡಿಲಿಕೆ
ನಾನ್‌ ಸಿಆರ್‌ಝಡ್‌ ವಲಯದ‌ಲ್ಲಿ ಗುತ್ತಿಗೆ ಅನುಮೋದನೆಗೆ ಸಾಂಪ್ರದಾಯಿಕ ಮರಳುಗಾರಿಕೆಯಲ್ಲಿ ಗುತ್ತಿಗೆದಾರರು ಕನಿಷ್ಠ 5 ವರ್ಷ ನಿರತರಾಗಿರಬೇಕು ಎಂಬ ಷರತ್ತಿನಿಂದ ಹಿನ್ನಡೆಯಾಗಿತ್ತು. ಇದೀಗ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು 3 ವರ್ಷಕ್ಕಿಳಿಸಲಾಗಿದೆ. ನ. 15ರಂದು ಮೂರನೇ ಬಾರಿಗೆ ಕರೆದಿರುವ ಟೆಂಡರ್‌ನಲ್ಲಿ ಗುತ್ತಿಗೆ ಕೋರಿ 15 ಮಂದಿ ಟೆಂಡರ್‌ ಸಲ್ಲಿಸಿದ್ದರು.ಇದರಲ್ಲಿ ಕೇವಲ 6 ಮಂದಿ ಮಾತ್ರ 5 ವರ್ಷ ಸಾಂಪ್ರದಾಯಿಕ ಮರಳುಗಾರಿಕೆ ನಡೆಸಿದ್ದು ಗುತ್ತಿಗೆ ಅರ್ಹತೆ ಹೊಂದಿದ್ದರು. ಉಳಿದ 9 ಮಂದಿ 4 ವರ್ಷವಷ್ಟೇ ಸಾಂಪ್ರದಾಯಿಕ ಮರಳು ಗಾರಿಕೆ ನಡೆಸಿರುವುದರಿಂದ ಗುತ್ತಿಗೆ ವಹಿಸಿಕೊಳ್ಳಲು ಅರ್ಹರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಸಡಿಲ ಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಲ್ಲಿಸಿತ್ತು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.