ಗ್ರಾಮದ ಸ್ವಾವಲಂಬನೆ, ಅಭಿವೃದ್ಧಿಗೆ ಕಾರಣವಾದ ನರೇಗಾ ಯೋಜನೆ- ಪೆರ್ಮುದೆ ಗ್ರಾಮ ಪಂಚಾಯತ್‌


Team Udayavani, Jul 10, 2022, 1:12 PM IST

5

ಬಜಪೆ: ಗ್ರಾಮದ ಅಭಿವೃದ್ಧಿಗಾಗಿ ಜನರು ಸದಾ ಸರಕಾರ, ಜನಪ್ರತಿನಿಧಿಗಳನ್ನೇ ಅವಲಂಬಿಸಬೇಕಾಗಿಲ್ಲ. ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಂಡು ಗ್ರಾಮ ಅಭಿವೃದ್ಧಿಯಲ್ಲಿ ಜನರ ಭಾಗಿಯಾಗಬಹುದು ಎನ್ನುವುದಕ್ಕೆ ಉದಾಹರಣೆ ಪೆರ್ಮುದೆ ಗ್ರಾಮದ ಅಭಿವೃದ್ಧಿ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ಜನರು ತೊಡಗಿಸಿಕೊಂಡಿದ್ದಾರೆ.

ಪೆರ್ಮುದೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೆಚ್ಚಿನ ಜಾಗ ಕೈಗಾರಿಕೆಗೆ ಭೂಸ್ವಾಧೀನತೆಗೊಂಡಿದೆ. ಆದರೂ ಕೂಡ ಜಗ್ಗದೇ ಕಾಮಗಾರಿ ಕೈಗೊಂಡಿರುವ ಇಲ್ಲಿನ ಗ್ರಾಮಸ್ಥರ ಸ್ವಾಭಿಮಾನ ಬದುಕಿಗೆ ನಿದರ್ಶನವಾಗಿದೆ.

13 ವರ್ಷಗಳಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ ನಲ್ಲಿ 92 ಕಾಮಗಾರಿಗಳು ನಡೆದ ಒಟ್ಟು 50,90,408.52 ರೂ.ಗಳ ಅನುದಾನ ವಿನಿಯೋಗವಾಗಿದೆ. ಇದರಲ್ಲಿ ಕೂಲಿ ಮೊತ್ತ ಹಾಗೂ ಸಾಮಗ್ರಿಗಳ ಮೊತ್ತವೂ ಸೇರಿದೆ.

ನರೇಗಾ ಯೋಜನೆಯಡಿಯಲ್ಲಿ 451 ಕುಟುಂಬಗಳು ನೋಂದಣಿ ಮಾಡಿದ್ದು, 274 ಕುಟುಂಬಗಳು ಉದ್ಯೋಗ ಚೀಟಿಯನ್ನು ಪಡೆದಿದೆ. ಯೋಜನೆಯಡಿ 73 ಕುಟುಂಬಗಳು ಕ್ರೀಯಾಶೀಲರಾಗಿದ್ದಾರೆ.

ನರೇಗಾ ಯೋಜನೆಯ ದಾಪುಗಾಲು

ದ್ರವ ತ್ಯಾಜ್ಯ ಗುಂಡಿ, ಎರೆಹುಳ ಗೊಬ್ಬರ ತೊಟ್ಟಿ, ತೆರೆದ ಬಾವಿ ರಚನೆ, ಕೃಷಿ ಹೊಂಡ, ಇಂಗು ಗುಂಡಿ ರಚನೆ, ಕೋಳಿ ಶೆಡ್‌, ಮೀನು ಸಾಕಾಣಿಕೆ ಹೊಂಡ, ಕೊಳವೆ ಬಾವಿ ಮರಪೂರಣ ಘಟಕ, ದನದ ಹಟ್ಟಿ, ಗೊಬ್ಬರ ಗುಂಡಿ, ಗೋಬರ್‌ ಗ್ಯಾಸ್‌ ಗುಂಡಿ, ಅಡಿಕೆ, ತೆಂಗು, ಕಾಳುಮೆಣಸು, ಕೋಕೋ, ವೀಳ್ಯದೆಲೆ, ಗೇರು, ಮಲ್ಲಿಗೆ, ತಾಳೆ, ಮಾವು, ಪಪ್ಪಾಯ, ನುಗ್ಗೆ, ಅಂಗಾಂಶ ಬಾಳೆ ಕೃಷಿ, ಪೌಷ್ಟಿಕ ಕೈ ತೋಟ, ವೈಯಕ್ತಿಕ ಹಾಗೂ ಸಾರ್ವಜನಿಕವಾಗಿ ಕಾಮಗಾರಿ ಮಾಡಲು ನರೇಗಾ ಯೋಜನೆಯಲ್ಲಿ ಅವಕಾಶವಿದೆ.

ಸರಕಾರಿ ಶಾಲೆ ಅಭಿವೃದ್ಧಿ ನರೇಗಾ ಬಳಕೆ

ನರೇಗಾ ಯೋಜನೆ ಮೂಲಕ ಸರಕಾರಿ ಶಾಲೆ, ಕಾಲೇಜು, ವಸತಿಗಳ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ಕ್ರೀಡಾಂಗಣಗಳನ್ನು ನಿರ್ಮಿಸಲು ಈಗಾಗಲೇ ಸುತ್ತೋಲೆ ಬಂದಿದೆ. ರನ್ನಿಂಗ್‌ ಟ್ರಾಕ್ಸ್‌, ಕಬಡ್ಡಿ, ಖೋಖೋ, ವಾಲಿಬಾಲ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಿದೆ.

ಪಾರದರ್ಶಕತೆ ಮುಖ್ಯ: ಕೃಷಿಗೆ ಹೆಚ್ಚು ಮಹತ್ವವನ್ನು ನೀಡಿ ಸ್ವಾವಲಂಬನೆ ಬದುಕಿಗೆ ಹಾದಿ ಮಾಡಿದೆ. ಮನಸ್ಸಿದ್ದರೆ ಎಲ್ಲವೂ ಸಾಧ್ಯ. ಅವಕಾಶಗಳು ಅನೇಕ. ಗ್ರಾಮದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರದ ಬಗ್ಗೆ ಪರಿಚರಿಸಲು ನರೇಗಾ ಯೋಜನೆ ಹೆಚ್ಚು ಸಹಕಾರಿಯಾಗಿದೆ. ಇಲ್ಲಿನ ಕಾಮಗಾರಿಗೆ ಶಿಸ್ತು ಮುಖ್ಯ, ಪಾರದರ್ಶಕ ಮುಖ್ಯ ಅದು ಇದ್ದಲ್ಲಿ ನರೇಗಾ ಹಣ ಬರುವುದರಲ್ಲಿ ತೊಂದರೆಯಾಗದು. – ಪೀಟಾರ್‌ ಸೆರಾವೋ, ನರೇಗಾ ಫ‌ಲಾನುಭವಿ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.