ಮಡಪ್ಪಾಡಿ: ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ದೂರು


Team Udayavani, Jul 14, 2017, 2:20 AM IST

137upg1a.jpg

ಉಪ್ಪಿನಂಗಡಿ: ತಣ್ಣೀರು ಪಂಥ ಗ್ರಾಮದ ಮಡಪ್ಪಾಡಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಸ್ಫೋಟಕ ಸಿಡಿಸಿ, ಕಲ್ಲು ಕೋರೆಯ ಆಳದ ಮಧ್ಯ ದಲ್ಲಿ ಹಿಟಾಚಿ ಬಳಸುತ್ತಿರುವುದು ಸುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ.

ಈ ಗಣಿಗಾರಿಕೆಯಿಂದ ಮಡೆಪ್ಪಾಡಿ, ಮಂದಿಲ, ಮಾನ್ಯ, ಪಾಲೇದು, ಬಾಳಿಂಜ, ಹೊಸಮನೆ, ಪೆಜಕೊಡಂಗೆ, ಆಚಾರಿಬೆಟ್ಟು ಮೊದಲಾದ ಪ್ರದೇಶದ ನಿವಾಸಿಗಳ ಮನೆಗಳು ಬಿರುಕು ಬಿಡ ಲಾರಂಭಿಸಿವೆ. ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಗ್ರಾಮಸ್ಥರು ದ.ಕ. ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ತಣ್ಣೀರುಪಂಥ ಗ್ರಾಮದ ಮಡಪ್ಪಾಡಿ ಪ್ರದೇಶವು ಭಾಗಶಃ ಮೀಸಲು ಅರಣ್ಯ ಭೂಮಿಯಾಗಿದೆ. ಇಲ್ಲಿ ಗಣಿಗಾರಿಕೆ ನಡೆ ಯುತ್ತಿರುವ ಸಂದರ್ಭದಲ್ಲಿ ನ್ಪೋಟದ ಶಬ್ಧಕ್ಕೆ ಸನಿಹದಲ್ಲೇ ಇರುವ ಕಾಡಿನಲ್ಲಿನ ಪ್ರಾಣಿಗಳು ಭಯ ಪಡುತ್ತಿವೆ ಎಂದೂ ಗ್ರಾಮಸ್ಥರು ದೂರಿನಲ್ಲಿ ತಿಳಿಸಿದ್ದಾರೆ. 

ಬಾಯ್ದೆರೆದ ಹೊಂಡ
ಗಣಿಗಾರಿಕೆಯಿಂದಾಗಿ ಸುಮಾರು 1 ಎಕ್ರೆ ಪ್ರದೇಶದಲ್ಲಿ ಸುಮಾರು 300 ಅಡಿ ಆಳಕ್ಕೆ ಬೃಹತ್‌ ಹೊಂಡ ವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಳ್ಳುತ್ತಿದೆ. ಇದರ ಸನಿಹದಲ್ಲೇ ಗ್ರಾಮಸ್ಥರು, ಶಾಲಾ ಮಕ್ಕಳು, ಜಾನುವಾರುಗಳು ಓಡಾಡು ತ್ತಿದ್ದು, ಯಾವ ಕ್ಷಣದಲ್ಲಿ ದುರಂತ ಸಂಭವಿಸುತ್ತದೋ ಎಂಬ ಭಯ ಗ್ರಾಮಸ್ಥರದ್ದು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮದ ಪ್ರಕಾರ ಕಲ್ಲು ಗಣಿಗಾರಿಕೆ ನಡೆಯುವ ಸುತ್ತ  ಕಡ್ಡಾಯವಾಗಿ ಸುರಕ್ಷತಾ ಕ್ರಮವಾಗಿ 6 ಅಡಿ ತಡೆ ಗೋಡೆ ಯನ್ನು ನಿರ್ಮಿಸಬೇಕು. ಆದರೆ ಇಲ್ಲಿ ಅಂತಹ ಯಾವುದೇ ಅಡೆ ತಡೆಗಳಿಲ್ಲ.
ಕಲ್ಲು ಗಣಿಗಾರಿಕೆ ನಡೆಯುವಲ್ಲಿ ಅತ್ಯಂತ ಅಪಾಯಕಾರಿಯಾಗಿ ಯಂತ್ರದ ಮೂಲಕ ಕಲ್ಲು ಸಿಡಿಸಲಾಗುತ್ತಿದೆ. ಇದರ ಕಾರ್ಮಿಕರು ನೆಲದಿಂದ ಸುಮಾರು 200 ಅಡಿ ಎತ್ತರದಲ್ಲಿ ಕಲ್ಲು ಬಂಡೆಯ ಮಧ್ಯೆ ಕುಳಿತು ಕಲ್ಲು ಸಿಡಿಸುವುದು ಕಂಡು ಬಂದಿದ್ದು, ಇವರಿಗೆ ಯಾವುದೇ ಸುರûಾ ವ್ಯವಸ್ಥೆ ಕಲ್ಪಿಸಿಲ್ಲ. ಇಲ್ಲಿ ಎಲ್ಲ ಸುರûಾ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆಪಾದಿಸ ಲಾಗಿದೆ.

ಕಲ್ಲು ಗಣಿಗಾರಿಕೆ ನಡೆಯುವ ಜಮೀನಿಂದ 40 ಮೀಟರ್‌ ಅಂತರದಲ್ಲಿ ಕುದ್ರಡ್ಕ-ಪಾಲೇದು-ಲಿಂಗಸ್ಥಳ- ಕಕ್ಕೆಪದವು ರಸ್ತೆ ಸಂಪರ್ಕ ಇದ್ದು, ಗಣಿಗಾರಿಕೆಯ ಸ್ಫೋಟಕ್ಕೆ ರಸ್ತೆ ಬಿರುಕು ಬಿಡುತ್ತಿದೆ. ಅ ಧಿಕ ಭಾರದ ಕಲ್ಲು ಹೇರಿಕೊಂಡು ಹೋಗುವ ಲಾರಿಗಳಿಂದಾಗಿ ರಸ್ತೆಯ ಉದ್ದಕ್ಕೂ ಹೊಂಡಗಳು ನಿರ್ಮಾಣ ಆಗುತ್ತಿದ್ದು, ರಸ್ತೆ ಡಾಮರು ಕಾಮಗಾರಿ ನಡೆಸಿದ್ದರೂ ಪ್ರಯೋಜನಕ್ಕೆ ಬಾರದಂತಾಗಿದೆ ಎಂದು ದೂರಲಾಗಿದೆ. ಪರಿಸರದ ಸುಮಾರು 50ಕ್ಕೂ ಮಿಕ್ಕಿ ಗ್ರಾಮಸ್ಥರು ದೂರಿನಲ್ಲಿ ಸಹಿ ಮಾಡಿದ್ದಾರೆ. ಜಿಲ್ಲಾ ಧಿಕಾರಿಗಳು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.

ಅರಣ್ಯದೊಳಗೆ ಅಕ್ರಮ ರಸ್ತೆ; ಇಲಾಖೆಯಿಂದ ಬಂದ್‌
ಆಪಾದಿತರು ಕಲ್ಲು ಕೋರೆಯಿಂದ ಕ್ರಶರ್‌ ಮಧ್ಯೆ ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ರಸ್ತೆ ನಿರ್ಮಿಸಿಕೊಂಡಿದ್ದರು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಅದರಂತೆ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬಂದಿ ಆ ರಸ್ತೆಯನ್ನು ಮಂಗಳವಾರ ಹಿಟಾಚಿ ಮೂಲಕ ಹೊಂಡ ತೋಡಿ ಬಂದ್‌ ಮಾಡಿದ್ದಾರೆ.

ಪರವಾನಿಗೆ ಹೊಂದಿದ್ದೇವೆ
ಕಲ್ಲು ಗಣಿಗಾರಿಕೆಗೆ ಪರವಾನಗಿ ಹೊಂದಿದ್ದು, ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ ಎನ್ನುತ್ತಾರೆ ಕಲ್ಲು ಗಣಿಗಾರಿಕೆ ಮಾಲಕಿ ಸುನೀತಾ ಅವರ ಪರವಾಗಿ ಅವರ ಪತಿ ತಣ್ಣೀರುಪಂಥ ಗ್ರಾ.ಪಂ. ಸದಸ್ಯ ಸದಾನಂದ ಶೆಟ್ಟಿ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.