ಆಟೋ ಚಾಲಕರಿಗೆ ಪಿ.ಎಫ್., ಇ.ಎಸ್‌.ಐ.


Team Udayavani, Aug 14, 2018, 3:50 AM IST

auto-13-8.jpg

ಮಂಗಳೂರು: ಆಟೋ ರಿಕ್ಷಾ ಚಾಲಕರಿಗೂ ಭವಿಷ್ಯ ನಿಧಿ ಮತ್ತು ಇ.ಎಸ್‌.ಐ. ಸೌಲಭ್ಯ ಕಲ್ಪಿಸುವ ಯೋಜನೆ ನಗರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳಲಿದೆ. ಇದು ಯಶಸ್ವಿಯಾದರೆ ದೇಶಕ್ಕೇ ಮಾದರಿ ಎನಿಸಲಿದೆ. ಮಂಗಳೂರಿನ ಹಲವು ಪ್ರಥಮಗಳ ಸಾಲಿಗೆ ಸೇರ್ಪಡೆಗೊಳ್ಳಲಿದೆ. ಪ್ರಸ್ತುತ ಆಟೋ ಚಾಲಕರು ಅಸಂಘಟಿತ ವಲಯದವರು. ಸಂಘಟಿತ ವಲಯದ ಕಾರ್ಮಿಕರಿಗಿರುವ ಪಿ.ಎಫ್‌., ಇ.ಎಸ್‌.ಐ. ಮತ್ತಿತರ ಸವಲತ್ತುಗಳಿಲ್ಲ. ಅವರ ಕುಟುಂಬಕ್ಕೂ ಸಾಮಾಜಿಕ ಭದ್ರತೆ ಇಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಮತ್ತು ರಿಕ್ಷಾ ಚಾಲಕರ ಸಂಘಟನೆಗಳು ಜತೆಗೂಡಿ ಭವಿಷ್ಯ ನಿಧಿ ಮತ್ತು ಇ.ಎಸ್‌.ಐ. ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಈ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿವೆ.

ಟ್ರಸ್ಟ್‌ ಸ್ಥಾಪನೆ
ಈ ಸೌಲಭ್ಯಗಳನ್ನು ಒದಗಿಸಲು ಕಂಪೆನಿ/ಸಂಸ್ಥೆ/ಮಾಲಕ-ಕಾರ್ಮಿಕ ಪರಿಕಲ್ಪನೆಯೊಂದಿಗೆ ಮಾಲಕರ ಮತ್ತು ಕಾರ್ಮಿಕರ ವಂತಿಗೆ ಅಗತ್ಯ. ಹಾಗಾಗಿ ರಿಕ್ಷಾ ಚಾಲಕರು ಟ್ರಸ್ಟ್‌ ರಚಿಸಲಿದ್ದು, ಅದರಲ್ಲಿ ನೋಂದಣಿಯಾದವರನ್ನು ಟ್ರಸ್ಟ್‌ನ ಕಾರ್ಮಿಕರೆಂದು ಪರಿಗಣಿಸಿ ಸೌಲಭ್ಯ ಒದಗಿಸಲಾಗುವುದು.

ಇಪ್ಪತ್ತಕ್ಕೂ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಕಂಪೆನಿ ಕಡ್ಡಾಯವಾಗಿ ತನ್ನ ಕಾರ್ಮಿಕರನ್ನು ಪಿ.ಎಫ್. ಮತ್ತು ಇ.ಎಸ್‌.ಐ. ವ್ಯಾಪ್ತಿಗೆ ತರಬೇಕೆನ್ನುತ್ತದೆ ಕಾನೂನು. ಕಾರ್ಮಿಕರು ಮತ್ತು ಕಂಪೆನಿ ತಲಾ ಶೇ.12ನ್ನು ಪಿ.ಎಫ್. ಸಂಸ್ಥೆಗೆ ಪಾವತಿಸಬೇಕು. ಅದೇ ರೀತಿ ಇ.ಎಸ್‌.ಐ. ವಂತಿಗೆಯಾಗಿ ಕಾರ್ಮಿಕರಿಂದ ಶೇ. 1.50, ಉದ್ಯೋಗದಾತರಿಂದ ಶೇ. 4.50ರಷ್ಟನ್ನು ಇ.ಎಸ್‌.ಐ. ಇಲಾಖೆಗೆ ಪ್ರತಿ ತಿಂಗಳ ನಿರ್ದಿಷ್ಟ ದಿನದೊಳಗೆ ಪಾವತಿಸಬೇಕು. ಪಿ.ಎಫ್. ಫಲಾನುಭವಿ 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ನಿರ್ವಹಿಸಿದಲ್ಲಿ ಪಿಂಚಣಿಗೆ ಅರ್ಹ ಎನ್ನುತ್ತದೆ ನಿಯಮ. ಹಾಗಾಗಿ ಮೊದಲಿಗೆ 20 ಮಂದಿಯನ್ನು ನೋಂದಾಯಿಸಿಕೊಂಡು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಸುಮಾರು 5 ಸಾವಿರ ರಿಕ್ಷಾಗಳಿದ್ದು, ಯೋಜನೆ ಯಶಸ್ವಿಯಾದರೆ ಉಳಿದವರಿಗೂ ಅನ್ವಯವಾಗಬಹುದು. 

ಉದ್ದೇಶಿತ ಟ್ರಸ್ಟ್‌ನ್ನು ಆಟೋ ರಿಕ್ಷಾ ಡ್ರೈವರ್ ವೆಲ್‌ಫೇರ್‌ ಟ್ರಸ್ಟ್‌ ಎಂಬುದಾಗಿ ಹೆಸರಿಸಲಾಗಿದೆ. ಅದಕ್ಕೊಂದು ಕಚೇರಿ ಇರಲಿದ್ದು, ನೋಂದಾಯಿತರು ಪ್ರತಿ ದಿನ ನಿಗದಿತ ಮೊತ್ತವನ್ನು (100 ರೂ. ಎಂದು ಅಂದಾಜು) ಟ್ರಸ್ಟ್‌ಗೆ ಪಾವತಿಸಬೇಕು. ಟ್ರಸ್ಟ್‌ ತಿಂಗಳಿಗೆ ಒಬ್ಬ ಚಾಲಕನಿಗೆ 2,500 ರೂ.ನಂತೆ ಪಿ.ಎಫ್. ಗೆ ಹಾಗೂ 300 ರೂ. ಗಳನ್ನು ಇ.ಎಸ್‌.ಐ. ಸಂಸ್ಥೆಗೆ ವಂತಿಗೆಯಾಗಿ ಪಾವತಿಸಲಿದೆ. 

ಪ್ರಾಯೋಗಿಕ ಪ್ರಯತ್ನ
ರಿಕ್ಷಾ ಚಾಲಕರಿಗೆ ಸಾಮಾಜಿಕ ಭದ್ರತೆೆ ಒದಗಿಸಲು ಈ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸ‌ಲಾಗುತ್ತಿದೆ. ಈ ಯೋಜನೆಗೆ ಕೆಲವು ಸಂಘ ಸಂಸ್ಥೆಗಳು ಸಲಹೆ ನೀಡಿವೆ. ಪಿ.ಎಫ್‌. ಮತ್ತು ಇ.ಎಸ್‌.ಐ. ಸಂಸ್ಥೆಗಳ ಅಧಿಕಾರಿಗಳ ಜತೆ ಮಾತನಾಡಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು. 
– ಸುದನ್‌ ಕುಮಾರ್‌ಉರ್ವ, ರಿಕ್ಷಾ ಚಾಲಕರ ಸಂಘಟನೆಯ ಮುಖಂಡ.

— ಹಿಲರಿ ಕ್ರಾಸ್ತಾ 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.