ಕೇರಳದಲ್ಲಿನ ಕಠಿನ ಕ್ರಮ; ಸಮುದಾಯದಿಂದ ಸಿಗದ ಬೆಂಬಲ! ಮೌನಕ್ಕೆ ಶರಣಾದ ಪಿಎಫ್‌ಐ


Team Udayavani, Oct 2, 2022, 9:03 AM IST

ಕೇರಳದಲ್ಲಿನ ಕಠಿನ ಕ್ರಮ; ಸಮುದಾಯದಿಂದ ಸಿಗದ ಬೆಂಬಲ! ಮೌನಕ್ಕೆ ಶರಣಾದ ಪಿಎಫ್‌ಐ

ಮಂಗಳೂರು: ಕೇರಳದಲ್ಲಿ ಪ್ರಬಲ ನೆಲೆ ಹೊಂದಿದ್ದು, ಅಲ್ಲಿಯೇ ಕಠಿನ ಕ್ರಮಗಳಿಂದ ತತ್ತರಿಸಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ತನ್ನ ಸಮುದಾಯದಿಂದಲೂ ನಿರೀಕ್ಷಿತ ಬೆಂಬಲ ವ್ಯಕ್ತವಾಗದ ಕಾರಣ ಸದ್ಯ ಮೌನಕ್ಕೆ ಶರಣಾದಂತಿದೆ.

ಏಕಕಾಲಕ್ಕೆ ಹಲವು ರಾಜ್ಯಗಳಲ್ಲಿ ಪಿಎಫ್‌ಐ ಮೇಲೆ ನಡೆದ ಎನ್‌ಐಎ, ಪೊಲೀಸರ ಸಂಘಟಿತ ಕಾರ್ಯಾಚರಣೆ, ಆ ಬಳಿಕ ಸರಕಾರ ಸದ್ದಿಲ್ಲದೆ ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಘಟನೆಗಳ ನಿಷೇಧಕ್ಕೆ ಮುಂದಾಗಿರುವುದು ಹಾಗೂ ಅದರ ಪೂರ್ವಭಾವಿಯಾಗಿ ಗಲಭೆ ಎಬ್ಬಿಸುವಂತಹ ಅದರ ನಾಯಕರನ್ನು ವಶಕ್ಕೆ ಪಡೆದಿರುವುದು ಎಲ್ಲವೂ ವ್ಯವಸ್ಥಿತ ವಾಗಿ ನಡೆದಿವೆ.

5.2 ಕೋ.ರೂ. ನಷ್ಟ ಪಾವತಿಗೆ ಆದೇಶ
ಇದರೊಂದಿಗೆ ಕೇರಳದಲ್ಲಿ ಬಂದ್‌ ಮೂಲಕ ಗಲಭೆಗೆ ಪ್ರೇರಣೆ ನೀಡಿದ್ದ ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಎಂಬಾತನನ್ನು ಬಂಧಿಸಲಾಗಿದೆ. ಬಂದ್‌ ವೇಳೆ ಉಂಟಾದ ಎಲ್ಲ ಗಲಭೆಯ ಪ್ರಕರಣದಲ್ಲೂ ಆತನನ್ನು ಆರೋಪಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ ಬಂಧಿಸಲ್ಪಟ್ಟ ನಾಯಕರನ್ನು ಬಿಡುಗಡೆ ಮಾಡಬೇಕಾದರೆ ಪಿಎಫ್‌ಐ ಹರತಾಳದಿಂದ ಉಂಟಾದ ನಾಶನಷ್ಟಕ್ಕೆ ಪರಿಹಾರವಾಗಿ 5.2 ಕೋಟಿ ರೂ. ಪಾವತಿ ಮಾಡುವಂತೆಯೂ ಆದೇಶಿಸಿರುವುದು ಸಂಘಟನೆಗೆ ಹಿನ್ನಡೆಯುಂಟು ಮಾಡಿದೆ.

ಗುಪ್ತಚರ ಮೂಲಗಳ ಪ್ರಕಾರ ಪಿಎಫ್‌ಐ ನಿರೀಕ್ಷಿಸಿದ್ದ ಮಟ್ಟಿಗೆ ತಮ್ಮದೇ ಸಮುದಾಯದಿಂದಲೂ ಬೆಂಬಲ ಸಿಕ್ಕಿಲ್ಲ. ಹಾಗಾಗಿ ಯಾವುದೇ ರೀತಿಯ ಬಂಡಾಯದ ಕ್ರಮಗಳಿಗೆ ಮುಂದಾಗಿಲ್ಲ.

ನಾಯಕರ ಮೇಲೆ ನಿಗಾ
ಸದ್ಯ ಬ್ಯಾನ್‌ ಆಗಿರುವ ಪಿಎಫ್‌ಐ ಹಾಗೂ ಸಹವರ್ತಿ ಸಂಘಟನೆಗಳ ನಾಯಕರ ಮೇಲೆ ಪೊಲೀಸ್‌ ಹದ್ದಿನಕಣ್ಣು ಇಡಲಿದೆ. ಅವರ ಚಟುವಟಿಕೆಗಳನ್ನು ಗಮನಿಸಲಾಗುತ್ತದೆ. ಒಂದು ವೇಳೆ ದೇಶವಿರೋಧಿ ಕೃತ್ಯಗಳಿಗೆ ಮುಂದಾದಲ್ಲಿ ಅವರನ್ನೂ ಬಂಧಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

ಎಸ್‌ಡಿಪಿಐ ಮೇಲೂ ಕ್ರಮ?
ದ.ಕ. ಜಿಲ್ಲೆ ಸೇರಿದಂತೆ ದೇಶದ ಹಲವೆಡೆ ಎಸ್‌ಡಿಪಿಐ ಕಚೇರಿಗೂ ಬೀಗಮುದ್ರೆ ಹಾಕಲಾಗಿದೆ. ಸದ್ಯ ಎಸ್‌ಡಿಪಿಐ ರಾಜಕೀಯ ಪಕ್ಷ ಎಂಬ ಕಾರಣಕ್ಕಾಗಿ ಅದನ್ನು ನಿಷೇಧಿಸಿಲ್ಲವಾದರೂ ಮುಂದೆ ಅದರ ಮೇಲೆ ನಿಗಾ ವಹಿಸುವ ಸಾಧ್ಯತೆ ಇದೆ. ಅಲ್ಲದೆ ರಾಜಕೀಯ ಪಕ್ಷದ ಮಾನ್ಯತೆ ರದ್ದುಗೊಳಿಸುವಂತೆ ಕೇಂದ್ರ ಚುನಾವಣ ಆಯೋಗಕ್ಕೆ ಗೃಹ ಇಲಾಖೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎನ್ನುತ್ತವೆ ಮೂಲಗಳು. ಪಕ್ಷದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯುತ್ತಿರುವುದು ಸಾಬೀತಾದರೆ ಅದರ ವಿರುದ್ಧವೂ ಸೂಕ್ತ ನಿರ್ಧಾರಕ್ಕೆ ಕೇಂದ್ರ ಸರಕಾರ ಬರಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಕಳದಲ್ಲಿ ಹೇಳಿರುವುದೂ ಉಲ್ಲೇಖನೀಯ.

ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷರ ಮನೆ ಪರಿಶೀಲನೆ
ಉಡುಪಿ : ಕಿನ್ನಿಮೂಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯಿರುವ ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ನಜೀರ್‌ ಅಹಮ್ಮದ್‌ ಅವರ ಮನೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸಿತು.

ಕೆಲವೊಂದು ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿ ದ್ದಾರೆ. ನಜೀರ್‌ ಅವರ ಸಹೋದರ ಬಶೀರ್‌ ಅವರ ಅಂಬಾಗಿಲಿನ ಮನೆಗೆ ದಾಳಿ ನಡೆಸಿದ್ದು ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ ಡಿವೈಎಸ್‌ಪಿ ಸುಧಾಕರ್‌ ನಾಯ್ಕ, ನಗರ ಠಾಣಾಧಿಕಾರಿ ಪ್ರಮೋದ್‌ ಕುಮಾರ್‌ ಸೇರಿದಂತೆ ಸಿಬಂದಿ ಉಪಸ್ಥಿತರಿದ್ದರು. ನಜೀರ್‌ ಮತ್ತು ಬಶೀರ್‌ ಅವರ ಮನೆಯನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸ್‌ ಸಿಬಂದಿ ಮತ್ತು ಅಧಿಕಾರಿ ಗಳನ್ನು ಮನೆಯವರ ಸಮ್ಮುಖದಲ್ಲಿ ಸಹಾ ಯಕ ಕಮಿಷನರ್‌ ರಾಜು ಅವರು ಪರಿಶೀಲನೆ ನಡೆಸಿ, ಮನೆಯ ಒಳಗೆ ಪರಿಶೀಲನೆಗೆ ಕಳುಹಿಸಿದರು. ಪೊಲೀಸರು ಹೊರಗಿನಿಂದ ತಂದು ಇಟ್ಟಿದ್ದಾರೆ ಎಂಬ ಆರೋಪ ಬರಬಾರದೆಂದು ಈ ನಿಯಮ ಪಾಲಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.