ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿ: ಪಿಜಿ, ಹೋಂ ಸ್ಟೇ ನಿಯಮ ಕಟ್ಟುನಿಟ್ಟುಗೊಳಿಸಿ ಆದೇಶ
Team Udayavani, Dec 24, 2022, 7:55 AM IST
ಮಂಗಳೂರು: ಮಂಗಳೂರು ಪೊಲೀಸ್ ಕಮಿಷ ನರೆಟ್ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಂ ಸ್ಟೇ ಮೊದಲಾದವುಗಳಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸು ತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯವರು ಕಡ್ಡಾಯ ವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು, ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು. ಸ್ಥಳೀಯ ಪೊಲೀಸ್ ಠಾಣೆಗೂ ನೀಡಬೇಕು.
ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯವಿದ್ದರೆ ಅವರು ಬಂದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವಗೊಳಿಸಿದರೂ ಮಾಹಿತಿ ನೀಡಬೇಕು. ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಅವುಗಳಲ್ಲಿ ಒಂದು ಕೆಮರಾ ಮುಖ್ಯ ದ್ವಾರಕ್ಕೆ/ ರಸ್ತೆಗೆ ಮುಖ ಮಾಡಿರಬೇಕು. ಸಿಸಿ ಕೆಮರಾಗಳ ಫೂಟೇಜ್ಗಳು ಕನಿಷ್ಠ 30 ದಿನಗಳವರೆಗೆ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು, ಠಾಣಾಧಿಕಾರಿಗಳು ಕೇಳಿದಾಗ ಮಾಹಿತಿ ಸಲ್ಲಿಸಬೇಕು. ಯಾವುದೇ ಅಪರಾಧ ಘಟನೆಗಳು, ಮಾದಕ ದ್ರವ್ಯ ಚಟುವಟಿಕೆ, ಅನೈತಿಕ ಚಟುವಟಿಕೆ ಮತ್ತು ಯಾವುದೆ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಲ್ಲ ಪೇಯಿಂಗ್ ಗೆಸ್ಟ್ ಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯ ಅತಿಥಿಗಳನ್ನು ಹೊರತುಪಡಿಸಿ ಉಳಿದ ಅತಿಥಿಗಳಿಗೆ ಅವರ ಮೂಲವಿಳಾಸಕ್ಕೆ ಸಂಬಂಧಿಸಿದ ಪೊಲೀಸ್ ಕಚೇರಿ ಯಿಂದ ಕಡ್ಡಾಯವಾಗಿ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಪಡೆದು ಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷೆ, ಭದ್ರತೆಯ ಜವಾಬ್ದಾರಿಯನ್ನು ಸಂಬಂಧಪಟ್ಟವರೆ ವಹಿಸಿಕೊಂಡು ಈ ಬಗ್ಗೆ ಮುಚ್ಚಳಿಕೆ ಪ್ರಮಾಣಪತ್ರವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸ ಬೇಕು ಮೊದಲಾದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯು ಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್
ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ವಿದೇಶ/ಹೊರ ಜಿಲ್ಲೆ, ರಾಜ್ಯಗಳಿಂದ ಅನೇಕ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ವಾಸ್ತವ್ಯ ಮಾಡಿಕೊಂಡಿದ್ದು, ಅನೈತಿಕ/ ಅಕ್ರಮ ಚಟು ವಟಿಕೆಗಳನ್ನು ತಡೆಗಟ್ಟುವ ಸಲು ವಾಗಿ, ಇತ್ತೀಚೆಗೆ ನಗರದಲ್ಲಿ ಸಂಭ ವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ಗುರುತು ಕಾರ್ಡ್ ನೀಡಿ ವಾಸ್ತವ್ಯವಿದ್ದ. ಬಳಿಕ ಅಲ್ಲಿ ನಿಯಮ ಕಟ್ಟುನಿಟ್ಟು ಮಾಡಲಾಗಿದೆ. ಅದೇ ರೀತಿ ಮಂಗಳೂರಿನಲ್ಲಿಯೂ ಆದೇಶ ಹೊರಡಿಸಿದ್ದೇನೆ.
– ಎನ್. ಶಶಿಕುಮಾರ್,
ಪೊಲೀಸ್ ಆಯುಕ್ತರು, ಮಂಗಳೂರು
“ಉದಯವಾಣಿ’ ಜಾಗೃತಿ ಮೂಡಿಸಿತ್ತು
ಮಂಗಳೂರಿನಲ್ಲಿಯೂ ಪಿಜಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸುವ ಸಾಧ್ಯತೆ ಬಗ್ಗೆ ಉದಯವಾಣಿ ಡಿ. 5ರಂದು ವಿಶೇಷ ವರದಿ ಪ್ರಕಟಿಸಿ ಪಿಜಿ ಮಾಲಕರಲ್ಲಿ ಜಾಗೃತಿ ಮೂಡಿಸಿತ್ತು. ಆ ಬಳಿಕ ಅನೇಕ ಮಂದಿ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿದ್ದರು. ಇದೀಗ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ