ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭ 


Team Udayavani, Mar 23, 2018, 11:16 AM IST

23-March-5.jpg

ಮಹಾನಗರ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಅವರ ಹೆಸರಿನಲ್ಲಿ ಉತ್ತಮ ಗ್ರಾಮೀಣ ವರದಿಗಾರಿಕೆಗಾಗಿ ನೀಡಲಾಗುವ 2017ನೇ ಸಾಲಿನ ಪ.ಗೋ. ಪ್ರಶಸ್ತಿ ಯನ್ನು ಪತ್ರಕರ್ತ ಪ್ರಶಾಂತ್‌ ಎಸ್‌. ಸುವರ್ಣ ಅವರಿಗೆ ಗುರುವಾರ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಾಂತ್‌ ಎಸ್‌. ಸುವರ್ಣ ಅವರ ಎಂಡೋಸಲ್ಫಾನ್‌ ಪೀಡಿತರ ಸಮಸ್ಯೆಗೆ ಸಂಬಂಧಿಸಿದ ‘ಕೇಳಿಸದೇ ಈ ಕರುಳಿನ ಕೂಗು’ ಲೇಖನಕ್ಕೆ 2017ನೇ ಸಾಲಿನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿಯು 10,000 ರೂ. ನಗದು, ಶಾಲು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.

ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ಅವರು ಪ್ರಶಸ್ತಿ ವಿತರಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು. ಪತ್ರಕರ್ತರಿಂದ ಸಮಾಜ ಮುಖಿಯಾದ, ಪರಸ್ಪರ ಸಂಬಂಧ-ಭಾವನೆಗಳನ್ನು ಬೆಳೆಸುವ ಉತ್ತಮ ವರದಿಗಳು ಬರಬೇಕು. ಮೌಲ್ಯ ಭರಿತವಾದ ವರದಿಗಳು ಸಮಾಜಕ್ಕೆ ಹೊಸ ದಿಕ್ಕು ತೋರಬಲ್ಲವು. ಆದ್ದರಿಂದ ಮೌಲಿಕ ವರದಿಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ವರದಿ ಸಮಾಜದ ಅಭಿವೃದ್ಧಿಗೆ ಪೂರಕ
ಪತ್ರಕರ್ತರು ಸೈನಿಕರು ಇದ್ದ ಹಾಗೆ. ಒಳ್ಳೆಯ ಸುದ್ದಿಗಾಗಿ ಎಲ್ಲ ಕಡೆ ಸುತ್ತಾಡುತ್ತಲೇ ಇರಬೇಕಾಗುತ್ತದೆ. ಪತ್ರಕರ್ತನ ಜಾಣ್ಮೆಯಿಂದ ಒಂದು ವರದಿ ಹೊಸ ಆಯಾಮವನ್ನು ಪಡೆದುಕೊಳ್ಳಬಲ್ಲುದು. ಸಮಾಜದ ಅಭಿವೃದ್ಧಿಗೆ ಪೂರಕವಾದ ವರದಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕಟವಾಗಬೇಕು. ಯುವ ಪತ್ರಕರ್ತರಲ್ಲಿ ಸಹಜವಾಗಿಯೇ ಉತ್ಸಾಹ ಹೆಚ್ಚಿರುತ್ತದೆ. ಅವರನ್ನು ಪ್ರೋತ್ಸಾಹಿಸುವಂತಹ ಕಾರ್ಯ ನಡೆದಾಗ ಇತರರಿಗೂ ಪ್ರೇರಣೆ ಲಭಿಸುತ್ತದೆ. ಪ್ರಶಾಂತ್‌ ಸುವರ್ಣ ಅವರು ಪತ್ರಿಕೋದ್ಯಮದ ತಮ್ಮ ಎಳೆಯ ವಯಸ್ಸಿನಲ್ಲಿ ಪ್ರಶಸ್ತಿಗೆ ಪಾತ್ರರಾಗಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.ಪ್ರಶಸ್ತಿ ಸ್ವೀಕರಿಸಿದ ಪ್ರಶಾಂತ್‌ ಸುವರ್ಣ ಪ್ರತಿಕ್ರಿಯಿಸಿ, ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ನನ್ನ ವರದಿಗಾರಿಕೆಯಲ್ಲಿ ತೃಪ್ತಿ ನೀಡಿದ ವರದಿಗೆ ಪ.ಗೋ. ಪ್ರಶಸ್ತಿ ದೊರೆತಿರುವುದಕ್ಕೆ ಖುಶಿ ಇದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರಸ್‌ಕ್ಲಬ್‌ ಅಧ್ಯಕ್ಷ ಡಾ| ರೊನಾಲ್ಡ್‌ ಅನಿಲ್‌ ಫೆರ್ನಾಂಡಿಸ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಪುಷ್ಟರಾಜ್‌ ಬಿ.ಎನ್‌. ಸ್ವಾಗತಿಸಿ, ಶ್ರೀನಿವಾಸ ಇಂದಾಜೆ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ನಿರೂಪಿಸಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.