ಪಿಕಪ್ ಢಿಕ್ಕಿ: ಬೈಕ್ ಸವಾರರು ಗಂಭೀರ
Team Udayavani, Jun 24, 2019, 9:29 AM IST
ವಿಟ್ಲ: ಪೆರುವಾಯಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಬೈಕಿಗೆ ಢಿಕ್ಕಿ ಹೊಡೆದು ಸವಾರರು ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.
ಸವಾರ ಪೆರುವಾಯಿ ನಿವಾಸಿ ಕೃಷ್ಣಪ್ಪ ಪೂಜಾರಿ (38) ಮತ್ತು ಸಹ ಸವಾರ ಮಾಂಬಾಡಿ ನಿವಾಸಿ ಕುಡ್ತಮುಗೇರು ಸರಕಾರಿ ಶಾಲಾ ಶಿಕ್ಷಕ ಅಶೋಕ್ (32) ಗಾಯಗೊಂಡವರು. ಅವರು ವಿಟ್ಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೆರುವಾಯಿ ಜಂಕ್ಷನ್ ಕಡೆಯಿಂದ ಮಾಣಿಲಕ್ಕೆ ಹೋಗುತ್ತಿದ್ದ ಪಿಕಪ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಢಿಕ್ಕಿ ಹೊಡೆದ ಪರಿಣಾಮ ಮುಂದಿನಿಂದ ಬೈಕ್ ರಸ್ತೆಯ ಬದಿಯ ಚರಂಡಿಗೆ ಎಸೆಯಲ್ಪಟ್ಟಿದೆ. ಪಿಕಪ್ ಸ್ವಲ್ಪ ಮುಂದೆ ಸಾಗಿ ಸೇತುವೆಯ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ಚಕ್ರ ಒಡೆದು ಹೋಗಿದೆಯಲ್ಲದೆ, ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಶಿಕ್ಷಕ ಅಶೋಕ್ ಅವರು ಪೆರುವಾಯಿಯಲ್ಲಿರುವ ಮಾವನ ಮನೆಗೆ ಬಂದಿದ್ದು, ಪೇಟೆಯ ಕಡೆಗೆ ಹೊರಟ ಸಮಯದಲ್ಲಿ ಈ ಘಟನೆ ನಡೆದಿದೆ. ಪಿಕಪ್ ಅನ್ನು ಗಿರೀಶ್ ಚಲಾಯಿಸುತ್ತಿದ್ದರೆನ್ನಲಾಗಿದೆ. ವಿಟ್ಲದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ಸಂಚಾರ ಸುಗಮಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ