ಮಿಂಚು ಪ್ರತಿಬಂಧಕ ಅಳವಡಿಕೆ ಮಂಜೂರಾತಿಗೆ ಮೀನ-ಮೇಷ
ನಾಲ್ಕು ವರ್ಷಗಳ ಹಿಂದಿನ ಪ್ರಸ್ತಾವನೆ ಕಡತದಲ್ಲೇ ಬಾಕಿ!
Team Udayavani, May 18, 2019, 5:50 AM IST
ಪುತ್ತೂರು: ಪ್ರತಿ ವರ್ಷವೂ ಜಿಲ್ಲೆಯಲ್ಲಿ ಮಿಂಚು, ಸಿಡಿಲಿನ ಆರ್ಭಟದಿಂದ ಜೀವಹಾನಿ ಸಹಿತ ಅಪಾರ ನಷ್ಟ ಸಂಭವಿಸುತ್ತಿದೆ. ಆದರೆ ಮಿಂಚು ಪ್ರತಿಬಂಧಕ ಅಳವಡಿಕೆಯ ಕುರಿತು ನಾಲ್ಕೂವರೆ ವರ್ಷ ಗಳ ಹಿಂದೆ ಜಿಲ್ಲಾಡಳಿತವು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಇನ್ನೂ ಮಂಜೂರಾತಿ ಸಿಕ್ಕಿಲ್ಲ.
ಪುತ್ತೂರು ತಾಲೂಕಿನ ಎರಡು ಕಡೆ ಪ್ರಾಯೋಗಿಕ ಅನುಷ್ಠಾನದ ಜತೆಗೆ ಜಿಲ್ಲೆಯ 11 ಕಡೆಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಕೆಗೆ 25 ಲಕ್ಷ ರೂ.ಗಳ ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಮಿಂಚು-ಸಿಡಿಲಿನ ತೀವ್ರತೆ ಹೆಚ್ಚಿರುವಲ್ಲಿ ಮಿಂಚು ಪ್ರತಿಬಂಧಕ ಅಳವಡಿಸಿದಾಗ ಅಲ್ಲಿ ಸಿಡಿಲಿನ ಆಘಾತ ಕಡಿಮೆಯಾಗುತ್ತದೆ. ಹೀಗಾಗಿ ತಂತ್ರಜ್ಞರ ಮಾಹಿತಿ ಪಡೆದೇ ಜಿಲ್ಲಾಡಳಿತವು ನಿರ್ಧಾರಕ್ಕೆ ಬಂದಿತ್ತು. ಆದರೆ ಸರಕಾರ ಮಾತ್ರ ಇದಕ್ಕೆ ಇನ್ನೂ ಅವಕಾಶ ನೀಡಿಲ್ಲ.
2014ರ ಪ್ರಸ್ತಾವನೆ
2014ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಎ.ಬಿ. ಇಬ್ರಾಹಿಂ ಅವರು ತಂತ್ರಜ್ಞರು ಮತ್ತು ಅಧಿಕಾರಿಗಳ ಸಭೆ ನಡೆಸಿ, 11 ಕಡೆ ಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಸುವ ನಿಟ್ಟಿನಲ್ಲಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ನೀಡಿದ್ದರು.
11 ಕಡೆಗಳಿಗೆ ಅನುಷ್ಠಾನ
ಪುತ್ತೂರು ತಾಲೂಕಿನ ಒಳ ಮೊಗರು ಗ್ರಾ.ಪಂ. ಕಚೇರಿ ಬಳಿ ಮತ್ತು ಪ್ರಸ್ತುತ ಕಡಬ ತಾಲೂಕಿ ನಲ್ಲಿರುವ ಕೋಡಿಂಬಾಳ ದೊಡ್ಡಕೊಪ್ಪ ಪ್ರದೇಶ ಸೇರಿದಂತೆ ಸುಳ್ಯದ ಜಾಲ್ಸೂರು ಗ್ರಾ.ಪಂ. ಕಚೇರಿ ಬಳಿ, ದೇವಚಳ್ಳ ಗ್ರಾ.ಪಂ. ವ್ಯಾಪ್ತಿ, ಮಂಗಳೂರಿನ ಅಂಬ್ಲಿಮೊಗರು ಗ್ರಾ.ಪಂ. ಗಡಿಪ್ರದೇಶ, ಮಂಜನಾಡಿ ಗ್ರಾ.ಪಂ. ವ್ಯಾಪ್ತಿಯ ಉರುಮನೆ, ಮೆನ್ನಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಮಶಾನ ಪರಿಸರ, ಗುರುಪುರ ಗ್ರಾ.ಪಂ. ಕಚೇರಿ ಬಳಿ, ಪೆರ್ಮುದೆ ಗ್ರಾ.ಪಂ. ವ್ಯಾಪ್ತಿ, ಮೂಡುಬಿದಿರೆ ಶಿರ್ತಾಡಿ ಅಂಚೆ ಕಚೇರಿಯ ಬಳಿ, ಬೆಳ್ತಂಗಡಿಯ ಪುದುವೆಟ್ಟು ಗ್ರಾ.ಪಂ. ವ್ಯಾಪ್ತಿಯ ಬೊಳ್ಮನಾರಿನಲ್ಲಿ ಮಿಂಚು ಪ್ರತಿಬಂಧಕ ಅಳವಡಿಕೆಗೆ ಜಿಲ್ಲಾಡಳಿತ ಸ್ಥಳ ನಿಗದಿ ಮಾಡಿತ್ತು. ಇದಕ್ಕೆ ಮಂಜೂರಾತಿ ದೊರೆತರೆ ಪುತ್ತೂರಿನಲ್ಲಿ 2 ಕಡೆ ಪ್ರಾಯೋಗಿಕ ಅನುಷ್ಠಾನದ ಕುರಿತು ಮಾತುಕತೆ ನಡೆದಿತ್ತು.
10 ಲಕ್ಷ ರೂ. ಹೆಚ್ಚಳ
ಮಂಜೂರಾತಿಯ ಬಳಿಕ ಮಿಂಚು ಪ್ರತಿಬಂಧಕಗಳ ಅನುಷ್ಠಾನದ ಜವಾಬ್ದಾರಿ ಯನ್ನು ಜಿಲ್ಲಾಡಳಿತವು ಖಾಸಗಿ ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯವರು ವಿಚಾರಣೆ ನಡೆಸುವ ಸಂದರ್ಭ ಪ್ರಸ್ತಾವನೆಗೆ ತಾಂತ್ರಿಕ ಮಂಜೂರಾತಿ ಲಭಿಸಿಲ್ಲ ಎನ್ನುವ ಉತ್ತರ ನೀಡುತ್ತಿದ್ದಾರೆ. ಪ್ರಾರಂಭದ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು 35 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ನಾಲ್ಕೂವರೆ ವರ್ಷ ಕಳೆದರೂ ಅನುಷ್ಠಾನಗೊಳ್ಳುವ ಲಕ್ಷಣಗಳು ಮಾತ್ರ ಕಾಣುತ್ತಿಲ್ಲ.
ಮಾಹಿತಿ ಪಡೆದುಕೊಳ್ಳುವೆ
ಜಿಲ್ಲೆಯಲ್ಲಿ ಮಿಂಚು ಪ್ರತಿಬಂಧಕ ಅಳವಡಿಸುವ ಪ್ರಸ್ತಾವನೆಯ ಕುರಿತು ನನಗೆ ಮಾಹಿತಿ ಇಲ್ಲ. ಹೀಗಾಗಿ ಮುಂದೆ ಅದರ ಕುರಿತು ಮಾಹಿತಿ ಪಡೆದುಕೊಂಡು ವಿಚಾರಣೆ ನಡೆಸಿ ಸ್ಪಷ್ಟ ಮಾಹಿತಿಯನ್ನು ನೀಡಲಾಗುವುದು.
– ಶಶಿಕಾಂತ ಸೆಂಥಿಲ್ ದ.ಕ. ಜಿಲ್ಲಾಧಿಕಾರಿ
ಕಿರಣ್ ಸರಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ