ಪಿಲಿಕುಳ ಜೈವಿಕ ಉದ್ಯಾನವನ ಹಸುರೀಕರಣ


Team Udayavani, Oct 9, 2017, 9:54 AM IST

9-Mng-1.jpg

ಪಿಲಿಕುಳ: ಇಲ್ಲಿನ ಜೈವಿಕ ಉದ್ಯಾನವನದಲ್ಲಿ ಎಂಆರ್‌ಪಿಎಲ್‌ನ ಪರಿಸರ (ಎಚ್‌ಎಸ್‌ಇ) ವಿಭಾಗದ ವತಿಯಿಂದ ಅನುಷ್ಠಾನಗೊಳಿಸಲಾದ ಒಂದನೇ ಹಂತದ ಹಸುರೀಕರಣ ಕಾರ್ಯಕ್ರಮ ಉದ್ಘಾಟನೆ ಹಾಗೂ 2ನೇ ಹಂತದ ಯೋಜನೆಗೆ ರವಿವಾರ ಚಾಲನೆ ನೀಡಲಾಯಿತು.

ಎಂಆರ್‌ಪಿಎಲ್‌ ಹಾಗೂ ಪಿಲಿಕುಳ ಅಧಿಕಾರಿಗಳ ಸಮ್ಮುಖದಲ್ಲಿ ಸಚಿವ ಬಿ. ರಮಾನಾಥ ರೈ ಅವರು ಉದ್ಘಾಟನೆ ನೆರವೇರಿಸಿದರು.

ಯಾವುದೇ ಒಂದು ಕೈಗಾರಿಕೆ ಸ್ಥಾಪನೆಗೊಂಡ ಸಂದರ್ಭದಲ್ಲಿ ಅದರ ವ್ಯಾಪ್ತಿಯ 3ನೇ ಒಂದು ಭಾಗದಲ್ಲಿ ಹಸುರೀಕರಣ ಯೋಜನೆ ಅನುಷ್ಠಾನಗೊಳಿಸಬೇಕು ಎಂಬ ನಿಯಮವಿದ್ದು, ಅದರಂತೆ ಎಂಆರ್‌ಪಿಎಲ್‌ ವತಿಯಿಂದ ಪಿಲಿಕುಳದಲ್ಲಿ 2016ರ ಜೂನ್‌ನಲ್ಲಿ 20 ಎಕರೆ ವಿಸ್ತೀರ್ಣದಲ್ಲಿ ಹಸುರೀಕರಣ ಯೋಜನೆ ಆರಂಭಿಸಲಾಗಿತ್ತು.

ಅದಕ್ಕಾಗಿ 30 ಲಕ್ಷ ರೂ.ಅನುದಾನ ವನ್ನು ನೀಡಿ ಸಾವಿರಾರು ಸಸಿಗಳನ್ನು ನೆಡಲಾಗಿತ್ತು. ಇದರಲ್ಲಿ ಪಶ್ಚಿಮ ಘಟ್ಟಗಳ ಸಸ್ಯಗಳು, ಔಷಧೀಯ ಸಸ್ಯಗಳು, ಜಲ ಸಸ್ಯಗಳು ಹಾಗೂ ಮೇವು ಹುಲ್ಲುಗಳಿವೆ. ಪಶ್ಚಿಮ ಘಟ್ಟಗಳ ಸಸ್ಯಗಳಲ್ಲಿ 52 ಜಾತಿಯ 2 ಸಾವಿರ ಗಿಡಗಳು, ಔಷಧೀಯ ಸಸ್ಯಗಳಲ್ಲಿ 50 ಜಾತಿಯ ಸಾವಿರ ಗಿಡಗಳು, ಜಲ ಸಸ್ಯಗಳಲ್ಲಿ 10 ಜಾತಿಯ 100 ಗಿಡಗಳನ್ನು ನೆಡಲಾಗಿದೆ.

60 ಹುಲ್ಲುಗಳ ಸಾಲು 
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲ್ಲು ತಿನ್ನುವ ನೂರಾರು ಪ್ರಾಣಿಗಳಿದ್ದು, ಯಥೇತ್ಛವಾಗಿ ಹುಲ್ಲುಗಳ ಆವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಇಲ್ಲಿ ನೆಟ್ಟಿರುವ ಸಾವಿರಾರು ಗಿಡಗಳ ಮಧ್ಯೆ ಹುಲ್ಲುಗಳ ಸಾಲನ್ನು ಬೆಳೆಸಲಾಗಿದೆ. ಇಂತಹ ಸುಮಾರು 60 ಸಾಲುಗಳಿದ್ದು, ದಿನಕ್ಕೆ ಒಂದು ಸಾಲು ಹುಲ್ಲಿನ ಆವಶ್ಯಕತೆ ಇರುತ್ತದೆ. ಒಮ್ಮೆ ಕಟಾವು ಮಾಡಿದ ಹುಲ್ಲು 40 ದಿನಗಳಲ್ಲಿ ಮತ್ತೂಮ್ಮೆ ಕಟಾವಿಗೆ ಸಿದ್ಧವಾಗುತ್ತದೆ ಎಂದು ಪಿಲಿಕುಳದ ಅಧಿಕಾರಿಗಳು ವಿವರಿಸುತ್ತಾರೆ.

ಚಿಟ್ಟೆ ಆಕರ್ಷಣೆಯ ಗಿಡಗಳು
ಜೈವಿಕ ಉದ್ಯಾನವನದಲ್ಲಿ ಚಿಟ್ಟೆಗಳನ್ನು ಆಕರ್ಷಿಸುವುದಕ್ಕಾಗಿ ಸುಮಾರು 150 ಜಾತಿಯ ಸಾವಿರ ಗಿಡಗಳನ್ನು ನೆಡಲಾಗಿದೆ. ಅವುಗಳಲ್ಲಿ ಹೋಸ್ಟ್‌ ಹಾಗೂ ಮಕರಂದ ಎಂಬ ಎರಡು ಪ್ರಮುಖ ವಿಧಗಳಿವೆ. ಅಗ್ನಿಮಂತ್ರ, ಕುಂಟಾಲು, ನೆಡಿಲ್‌, ಹೆಮೆಲಿಯಾ, ಕಾಡು ರುದ್ರಾಕ್ಷಿ, ಬೊಳಂಟೆ, ನೇರಳೆ ಮೊದಲಾದ ಗಿಡಗಳನ್ನು ಚಿಟ್ಟೆಗಳ ಆಕರ್ಷಣೆಗಾಗಿಯೇ ಬೆಳೆಸಲಾಗಿದೆ.

2ನೇ ಹಂತದ ಹಸುರೀಕರಣ
ಎಂಆರ್‌ಪಿಎಲ್‌ ಪ್ರಾಯೋಜಕತ್ವದ 2ನೇ ಹಂತದ ಹಸುರೀಕರಣ ಯೋಜನೆಯಲ್ಲಿ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ 40 ಲಕ್ಷ ರೂ. ಅನುದಾನದಲ್ಲಿ ಪಶ್ಚಿಮ ಘಟ್ಟಗಳ ಸಸ್ಯಗಳನ್ನು ಬೆಳೆಸಲಾಗುತ್ತದೆ. ಜೈವಿಕ ಉದ್ಯಾನವನದ ರಸ್ತೆ ಬದಿಗಳಲ್ಲಿ 5 ಮೀ.ವ್ಯಾಪ್ತಿಯಲ್ಲಿ ಗಿಡ ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ.

ಅಕೇಶಿಯಾ ತೆರವು ಕಾರ್ಯ
ಪಿಲಿಕುಳದಲ್ಲಿ ಆರಂಭದಲ್ಲಿ ಅಕೇಶಿಯಾ ಗಿಡಗಳನ್ನು ನೆಡಲಾಗಿದ್ದರೂ, ಅದು ಪರಿಸರಕ್ಕೆ ಹಾನಿ ಎಂಬ ಕಾರಣಕ್ಕೆ ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಇಲ್ಲಿನ ಪ್ರಾಣಿಗಳಿಗೆ ನೆರಳಿನ ಆವಶ್ಯಕತೆ ಇರುವುದರಿಂದ ಅದನ್ನು ಒಮ್ಮೆಲೆ ತೆಗೆಯುವಂತಿಲ್ಲ. ಹಿಂದೆ ನೆಟ್ಟ ಗಿಡಗಳಿಗಿಂತ ಅಧಿಕ ಗಿಡಗಳು ಈಗ ಹುಟ್ಟಿಕೊಂಡಿದ್ದು, ಅದರ ತರಗೆಲೆಗಳ
ಮೇಲೆ ನೀರು ಬಿದ್ದರೆ ಇಂಗದಂತಹ ಪರಿಸ್ಥಿತಿ ಇದೆ.

ಪ್ರಥಮ ಹಂತ ಹಸುರೀಕರಣದ ಸಂದರ್ಭದಲ್ಲೂ ಅಕೇಶಿಯಾವನ್ನು ತೆಗೆಯಲಾಗಿದೆ. ಈಗ 2ನೇ ಹಂತದಲ್ಲೂ
ರಸ್ತೆ ಬದಿಯ ಅಕೇಶಿಯಾವನ್ನು ತೆಗೆದು ಪಶ್ಚಿಮ ಘಟ್ಟದ ಗಿಡಗಳನ್ನು ನೆಡಲಾಗುತ್ತದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್‌ ಭಂಡಾರಿ ತಿಳಿಸುತ್ತಾರೆ. 

ಜೋಕಟ್ಟೆ: ಹಸುರೀಕರಣ?
ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ಜೋಕಟ್ಟೆಯಲ್ಲೂ ಸುಮಾರು 27 ಎಕರೆ ವ್ಯಾಪ್ತಿಯಲ್ಲಿ ಹಸುರೀಕರಣ
ಯೋಜನೆ ಅರಂಭಿಸಲು ಮಾತುಕತೆ ನಡೆಯುತ್ತದೆ. ಜಿಲ್ಲಾಧಿಕಾರಿಗಳ ಅನುಮತಿ ಸಿಕ್ಕಿದರೆ ಅಲ್ಲೂ ಹಸುರೀ ಕರಣ
ಯೋಜನೆಯಲ್ಲಿ ಗಿಡಗಳನ್ನು ನೆಡಲಾಗುತ್ತದೆ ಎಂದು ಎಂಆರ್‌ಪಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.