ಪಿಲಿಕುಳ: ವಾರಾಂತ್ಯ ದಿನಗಳಲ್ಲಿ ಕಂಬಳ-ಪ್ರವಾಸೋದ್ಯಮಕ್ಕೆ ಮೆರುಗು

ಪ್ರವಾಸೋದ್ಯಮಕ್ಕೆ ಮೆರುಗು: ಜಿಲ್ಲಾಡಳಿತ ಚಿಂತನೆ

Team Udayavani, Nov 23, 2021, 10:15 AM IST

jhkhjhg

ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಪ್ರವಾಸೋದ್ಯಮದಲ್ಲಿ ಒತ್ತು ನೀಡುವ ನಿಟ್ಟಿನಲ್ಲಿ ಪಿಲಿಕುಳದಲ್ಲಿರುವ ಗುತ್ತಿನ ಮನೆಯ ಮುಂಭಾಗದ “ನೇತ್ರಾವತಿ – ಫಲ್ಗುಣಿ’ ಜೋಡುಕರೆಯಲ್ಲಿ ವಾರಾಂತ್ಯ ದಿನಗಳಲ್ಲಿ ಸೀಮಿತ ಸಂಖ್ಯೆಯ ಕೋಣಗಳೊಂದಿಗೆ ಕಂಬಳ ಪ್ರದರ್ಶನಕ್ಕೆ ಜಿಲ್ಲಾಡಳಿತ ಚಿಂತಿಸಿದೆ.

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಜಿಲ್ಲಾ ಕಂಬಳ ಸಮಿತಿಯ ಪ್ರತಿನಿಧಿಗಳ ಜತೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಬಗ್ಗೆ ಪ್ರಸ್ತಾವಿಸಿದ್ದು, ಪೂರಕ ರೂಪರೇಷೆ ಸಿದ್ಧಪಡಿಸು ಪ್ರವಾಸೋದ್ಯಮ ಇಲಾಖೆ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.

ಪೂರ್ವಸಿದ್ಧತೆ, ಕೋಣಗಳ ಆರೈಕೆ, ತರಬೇತಿ ಮುಂತಾದವುಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡುವುದೂ ಇದರಲ್ಲಿ ಒಳಗೊಂಡಿದೆ. ಕಲಾಗ್ರಾಮದ ಭಾಗವಾಗಿ ಇದನ್ನು ಜೋಡಿಸಲಾಗುತ್ತದೆ. ಪ್ರದರ್ಶನಕ್ಕೆ ಪ್ರವೇಶ ಶುಲ್ಕವನ್ನು ಸಂಗ್ರಹಿಸಲು ಉದ್ದೇಶಿಸಲಾಗಿದೆ.

ಕಂಬಳವನ್ನು ಪ್ರವಾಸೋದ್ಯಮ ಪಟ್ಟಿಯಲ್ಲಿ ಸೇರಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಗಳು ಈ ಹಿಂದೆ ವ್ಯಕ್ತವಾಗಿದ್ದವು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಕಾರ್ಯೋನ್ಮುಖವಾಗಿದೆ.

ಇದನ್ನೂ ಓದಿ:ಮರೆಗುಳಿ ಕಾಯಿಲೆ ಮೂಲ ಪತ್ತೆ; ಐಐಟಿ ಮಂಡಿ ಸಂಶೋಧಕರಿಂದ ಮಹತ್ವದ ಸಂಶೋಧನೆ

2014ರಲ್ಲಿ ಕೊನೆಯ ಕಂಬಳ
ಪಿಲಿಕುಳದಲ್ಲಿ 2014ರಲ್ಲಿ ಕೊನೆಯ ಕಂಬಳ ನಡೆದಿತ್ತು. 85 ಜೊತೆ ಕೋಣಗಳು ಪಾಲ್ಗೊಂಡಿದ್ದವು. ಆದರೆ ಪೆಟಾ ಸಂಸ್ಥೆಯ ಕಾನೂನು ಸಮರದ ಪರಿಣಾಮ ಜಿಲ್ಲಾಡಳಿತ ಈ ಕಂಬಳವನ್ನು ಸ್ಥಗಿತಗೊಳಿಸಿತ್ತು. 2018ರ ಕಂಬಳ ಋತುವಿನಲ್ಲೂ ನಡೆಸಲು ನಿರ್ಧರಿಸಿದ್ದರೂ ಅನುದಾನ ದೊರೆಯದ್ದರಿಂದ ಕೈಬಿಡಲಾಗಿತ್ತು.

ಏಳು ವರ್ಷಗಳಿಂದ ಕಂಬಳ ನಡೆಸದೆ ಇರುವುದರಿಂದ ಕರೆಗಳಲ್ಲಿ ಹೂಳು ತುಂಬಿದೆ, ಗಿಡ-ಗಂಟಿ ಬೆಳೆದಿವೆ. ಕರೆಯ ಮರು ನಿರ್ಮಾಣ, ನೀರು ಹಾಗೂ ಇತರ ಸೌಲಭ್ಯಗಳ ವ್ಯವಸ್ಥೆ ಮುಂತಾದ ಕೆಲಸಗಳು ನಡೆಯಬೇಕಾಗಿವೆ.

ಪಿಲಿಕುಳದಲ್ಲಿ ವರ್ಷಕ್ಕೆ ಒಂದು ಬಾರಿ ಕಂಬಳ ನಡೆಸುವ ಬದಲು ಪ್ರವಾಸಿಗರಿಗೆ ಕಂಬಳ ಕ್ರೀಡೆಯ ಸಂಪೂರ್ಣ ಚಿತ್ರಣವನ್ನು ನೀಡುವ ನಿಟ್ಟಿನಲ್ಲಿ ವರ್ಷಪೂರ್ತಿ ಆಯೋಜಿಸಲು ಜಿಲ್ಲಾಡಳಿತ ಚಿಂತಿಸಿದೆ. ಕಂಬಳ ಸಮಿತಿಯಿಂದ ಪೂರಕ ಸ್ಪಂದನೆ ವ್ಯಕ್ತವಾಗಿದೆ.
– ಡಾ| ಕೆ.ವಿ. ರಾಜೇಂದ್ರ,
ದ.ಕ. ಜಿಲ್ಲಾಧಿಕಾರಿ

 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.