ಪೈಲಟ್‌ ಸಮಯ ಪ್ರಜ್ಞೆ; ತಪ್ಪಿತು ವಿಮಾನ ದುರಂತ !


Team Udayavani, Sep 23, 2017, 8:32 AM IST

23-STATE–7.jpg

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಗುರುವಾರ ಸಂಜೆ 173 ಪ್ರಯಾಣಿಕರನ್ನು ಹೊತ್ತು ದೋಹಾಕ್ಕೆ ಹೊರಟಿದ್ದ ಏರ್‌ಇಂಡಿಯಾದ ವಿಮಾನ ದೊಡ್ಡ ಮಟ್ಟದ ತಾಂತ್ರಿಕ ದೋಷದಿಂದಾಗಿಯೇ ತುರ್ತು ಭೂಸ್ಪರ್ಶ ಮಾಡಿದೆ ಎನ್ನುವ ಗಂಭೀರ ವಿಚಾರ ಮೇಲ್ನೋಟಕ್ಕೆ ಕಂಡುಬಂದಿದೆ. 

ಆದರೆ ಪೈಲಟ್‌ ಸಮಯ ಪ್ರಜ್ಞೆ, ಚಾಣಾಕ್ಷತನ ಹಾಗೂ ಆತ್ಮಸ್ಥೈರ್ಯದಿಂದ ಒಂದು ಎಂಜಿನ್‌ನಿಂದಲೇ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದ್ದು ಪ್ರಯಾಣಿಕರ ಪ್ರಾಣ ಉಳಿಸಿದೆ. ಇದು ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಪೈಲಟ್‌ ಸೂಕ್ತ ಸಂದರ್ಭ ತಾಂತ್ರಿಕ ಕೌಶಲ ಬಳಸದೇ ಇದ್ದರೆ, ವಿಮಾನ ದುರಂತಕ್ಕೀಡಾಗುವ ಎಲ್ಲ ಸಾಧ್ಯತೆಗಳಿದ್ದವು. ವಿಮಾನ ತುರ್ತು ಭೂಸ್ಪರ್ಶದಿಂದ ಉಂಟಾದ ಆಘಾತದಿಂದ ಸಿಬಂದಿ ಇನ್ನೂ ಹೊರಬಂದಿಲ್ಲ ಎನ್ನಲಾಗುತ್ತಿದೆ.

ವಿಮಾನವು ಟೇಕ್‌ಆಫ್ ಆದ ಅರ್ಧಗಂಟೆ ಯಲ್ಲೇ ಒಂದು ಎಂಜಿನ್‌ ಕಾರ್ಯ ಸ್ಥಗಿತಗೊಡ ಬಗ್ಗೆ ಪೈಲಟ್‌ನಿಂದ ನಿಲ್ದಾಣದ ಎಟಿಎಸ್‌ ಕೇಂದ್ರಕ್ಕೆ ತುರ್ತು ಮಾಹಿತಿ ರವಾನೆಯಾಗಿತ್ತು. ಕೂಡಲೇ ಇಡೀ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು. ಅಧಿಕಾರಿ ಗಳು ಬಜಪೆ ಪೊಲೀಸ್‌ ಠಾಣೆ ಸೇರಿದಂತೆ ಸಂಬಂಧಪಟ್ಟವರಿಗೆ ಮಾಹಿತಿ ರವಾನಿಸಿದ್ದಾರೆ. ಸಂಜೆ ಸುಮಾರು 6.20ಕ್ಕೆ ಬಜಪೆ ಪೊಲೀಸರಿಗೆ ವಿಮಾನ ತುರ್ತು ಭೂಸ್ಪರ್ಶ ಮಾಡಲಿರುವ ಸಂದೇಶ ಬಂದಿದ್ದು, ಪೊಲೀಸರು ತತ್‌ಕ್ಷಣ ನಿಲ್ದಾಣದತ್ತ ದೌಡಾಯಿಸಿದ್ದಾರೆ. ಜತೆಗೆ ನಗರದ ಉನ್ನತ ಮಟ್ಟದ ಅಧಿಕಾರಿಗಳು ಇಡೀ ಪರಿಸ್ಥಿತಿ ಮೇಲೆ ನಿಗಾ ವಹಿಸಿದ್ದರು.

ಏನೇ ಪರಿಸ್ಥಿತಿಗೂ ಸಿದ್ಧ: ವಿಮಾನ ತುರ್ತು ಭೂಸ್ಪರ್ಶ ಮಾಡುವ ವಿಷಯ ಘೋಷಣೆ ಯಾಗುತ್ತಿದ್ದಂತೆ ಮಂಗಳೂರು ನಿಲ್ದಾಣದಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೂ ಬೇಕಾದ ಸಿದ್ಧತೆ ಮಾಡಿ ಕೊಳ್ಳಲಾಯಿತು. ವಿಮಾನ ಪರಿಣತರ ಪ್ರಕಾರ ಒಂದು ಎಂಜಿನ್‌ ಕೈಕೊಟ್ಟ ಸಂದರ್ಭದಲ್ಲಿ ಸುಮಾರು 173 ಪ್ರಯಾಣಿಕರು, ಲಗೇಜ್‌ ಹಾಗೂ ಸಿಬಂದಿಯನ್ನು ಒಳಗೊಂಡಿರುವ ಇಷ್ಟು ದೊಡ್ಡ ಗಾತ್ರದ ವಿಮಾನವನ್ನು ತುರ್ತು ಲ್ಯಾಂಡಿಂಗ್‌ ಮಾಡುವುದು ಅತ್ಯಂತ ಅಪಾಯಕಾರಿ. ಕೇವಲ ಒಂದೇ ಎಂಜಿನ್‌ನ ಕಾರ್ಯಾಚರಣೆ ಪೈಲಟ್‌ನ ವೃತ್ತಿ ಅನುಭವ ಹಾಗೂ ತಾಂತ್ರಿಕ ಕೌಶಲವನ್ನು ಅವಲಂಬಿಸಿರು ತ್ತದೆ. ಈ ಸಂದರ್ಭವನ್ನು ಮುಂಬಯಿ ಮೂಲದ ಪೈಲಟ್‌ ಅತೀಶ್‌ ಸಿಂಘೆ  ಚಾಣಾಕ್ಷತೆ ಹಾಗೂ ಎಚ್ಚರಿಕೆಯಿಂದ ನಿಭಾಯಿಸಿದ್ದಾರೆ ಎನ್ನುವುದು ವಿಮಾನ ತಂತ್ರಜ್ಞರ ಅಭಿಪ್ರಾಯ.

ನಿಲ್ದಾಣದಲ್ಲಿದ್ದ ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿಮಾನವನ್ನು ಪೈಲಟ್‌ ಇನ್ನೇನು ತುರ್ತು ಭೂಸ್ಪರ್ಶ ಮಾಡಿಸಬೇಕು ಎನ್ನು ವಷ್ಟರಲ್ಲಿ ಗ್ರೀನ್‌ ಸಿಗ್ನಲ್‌ ಬದಲಿಗೆ ತಾಂತ್ರಿಕ ದೋಷದ ಸಿಗ್ನಲ್‌ ತೋರಿಸಿದೆ. (ಎರರ್‌ ಸಿಗ್ನಲ್‌). ಅಷ್ಟೇಅಲ್ಲ, ವಿಮಾನ ಕೂಡ ಕೊಂಚ ವಾಲಿಕೊಂಡು ನಿಯಂತ್ರಣ ಕಳೆದುಕೊಂಡಿರುವಂತೆ ಕಾಣುತ್ತಿತ್ತು. ಕೆಲವು ಪ್ರಯಾಣಿಕರು ಕೂಡ ಜೀವಭಯದಿಂದ ಕಿರುಚಾಡುತ್ತಿದ್ದ ಕಾರಣ ಗೊಂದಲ ಹಾಗೂ ಆತಂಕ ನಿರ್ಮಾಣವಾಗಿತ್ತು. ಇದ್ಯಾವುದನ್ನೂ ಲೆಕ್ಕಿಸದ ಪೈಲಟ್‌ ಕೇವಲ ಎಮರ್ಜೆನ್ಸಿ ಲ್ಯಾಂಡಿಂಗ್‌ ಆಗಬೇಕು ಎನ್ನುವ ಒಂದೇ ಗುರಿಯನ್ನಿಟ್ಟಿದ್ದರು ಹಾಗೂ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಂಜಿನ್‌ ಫೈಲ್‌ ದೊಡ್ಡ ಅಪಾಯ
ದೇಶದ ಪ್ರತಿಷ್ಠಿತ ವಿಮಾನ ತಯಾರಿಕಾ ಕಂಪೆನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರು ಹೇಳುವಂತೆ, “ಯಾವುದೇ ನಾಗರಿಕಯಾನ ವಿಮಾನ ಹಾರಾಟದಲ್ಲಿರಬೇಕಾದರೆ ಎರಡು ಎಂಜಿನ್‌ಗಳ ಪೈಕಿ ಒಂದು ತಾಂತ್ರಿಕವಾಗಿ ನಿಷ್ಕ್ರಿಯಗೊಳ್ಳುವುದು ಅಂದರೆ ತಾಂತ್ರಿಕ ಭಾಷೆಯಲ್ಲಿ ದೊಡ್ಡ ಮಟ್ಟದ ಅಪಾಯದ ಪರಿಸ್ಥಿತಿಯಾಗಿರುತ್ತದೆ. ಏಕೆಂದರೆ, ಒಂದು ಎಂಜಿನ್‌ ಕೈಕೊಟ್ಟ ಮೇಲೆ ಕೇವಲ ಒಂದೇ ಎಂಜಿನ್‌ ಮೇಲೆ ಇಡೀ ವಿಮಾನದ ಹಾರಾಟ ಅವಲಂಬಿಸಿಕೊಂಡಿರುತ್ತದೆ. ಮತ್ತೂಂದು ಎಂಜಿನ್‌ನ ಭವಿಷ್ಯ ಕೂಡ ಡೋಲಾಯ ಮಾನವಾಗಬಹುದು. ಒಂದು ಎಂಜಿನ್‌ ವಿಫ‌ಲವಾದ ತತ್‌ಕ್ಷಣ ಅದರಿಂದ ಆಯಿಲ್‌ ಸೋರಿಕೆ, ಮತ್ತೇನೋ ತಾಂತ್ರಿಕ ದೋಷವೂ ಕಾಣಿಸಿಕೊಳ್ಳಬಹುದು. ಒಂದೇ ಎಂಜಿನ್‌ನಲ್ಲಿ ಆ ವಿಮಾನವನ್ನು ಎಷ್ಟು ದೂರಕ್ಕೆ, ಎಷ್ಟು ಹೊತ್ತು ಚಲಾಯಿಸಬಹುದು ಎನ್ನುವುದು ಆ ವಿಮಾನದ ಕಾರ್ಯಕ್ಷಮತೆ, ಈಗಾಗಲೇ ಎಷ್ಟು ಹಾರಾಟ ನಡೆಸಿದೆ ಹಾಗೂ ಎಷ್ಟು ಭಾರ ಹೊಂದಿದೆ ಎಂಬಿತ್ಯಾದಿ ಅಂಶಗಳ ಮೇಲೆ ಅವಲಂಬಿಸಿರುತ್ತದೆ. ಒಂದು ಎಂಜಿನ್‌ ಕೈಕೊಟ್ಟ ಕಾರಣ ಮತ್ತೂಂದು ಎಂಜಿನ್‌ನಲ್ಲೇ ಪೂರ್ಣವಾಗಿ ಮೇಲೆ ಚಲಾಯಿಸಬಹುದು ಎನ್ನಲು ಸಾಧ್ಯವಿಲ್ಲ’ ಎಂದು ಹೆಸರು ಹೇಳಲು ಇಚ್ಛಿಸದ ತಾಂತ್ರಿಕ ಪರಿಣತರು ವಿವರಿಸಿದ್ದಾರೆ.

ಏರ್‌ ಇಂಡಿಯಾವೇ ಹೊಣೆ
ಮಂಗಳೂರು ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಆದ ಘಟನೆ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ವಾಯುಸೇನೆಯ ನಿವೃತ್ತ ವಿಂಗ್‌ ಕಮಾಂಡರ್‌ ಜಿ.ಬಿ. ಅತ್ರಿ ಪ್ರಕಾರ, “ವಿಮಾನ ಹಾರಾಡುತ್ತಿರಬೇಕಾದರೆ, ಎಂಜಿನ್‌ ಆಫ್‌ ಆಗಿರುವುದು ಸಣ್ಣ ವಿಚಾರವೇನು ಅಲ್ಲ. ಯಾವುದೇ ವಿಮಾನ ಟೇಕ್‌ಅಫ್ ಆಗಬೇಕಾದರೆ, ತಾಂತ್ರಿಕವಾಗಿ ಚೆಕ್‌ಲಿಸ್ಟ್‌ ಆಗಬೇಕಾಗುತ್ತದೆ. ಒಂದುವೇಳೆ ಸರಿಯಾದ ತಾಂತ್ರಿಕ ಪರಿಶೀಲನೆ ನಡೆಸದಿದ್ದರೆ ಈ ರೀತಿಯ ಅಪಾಯ ಆಗುವ ಸಾಧ್ಯತೆಯೂ ಇರುತ್ತದೆ. ಸಾಮಾನ್ಯವಾಗಿ ದೊಡ್ಡ ಮಟ್ಟದ ತೊಂದರೆ ಕಾಣಿಸಿಕೊಂಡಾಗ ಮಾತ್ರ ಎಂಜಿನ್‌ ಕೆಟ್ಟು ಹೋಗುತ್ತದೆ. ಏರ್‌ಇಂಡಿಯಾವೇ ಈ ಘಟನೆಗೆ ಸಂಪೂರ್ಣ ಹೊಣೆಯಾಗಿದ್ದು, ಕೇವಲ ಪೈಲಟ್‌ನ ವೃತ್ತಿ ಕೌಶಲದಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡಿಂಗ್‌ ಆಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ದೋಷಕ್ಕೆ ಕಾರಣ ನಿಗೂಢ
ಎಂಜಿನ್‌ ವೈಫ‌ಲ್ಯ ಬಗ್ಗೆ ಏರ್‌ಇಂಡಿಯಾ ಸಂಸ್ಥೆಯಾಗಲಿ ಅಥವಾ ಮಂಗಳೂರು ವಿಮಾಣ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದಕ್ಕೆ ಕಾರಣವೂ ಉನ್ನತ ಮಟ್ಟದ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ. ಇನ್ನು ವಿಮಾನ ಹಾರಾಟ ರದ್ದುಗೊಂಡು, ನಗರದ ಖಾಸಗಿ ಹೊಟೇಲ್‌ನಲ್ಲಿ ಉಳಿದುಕೊಂಡಿದ್ದ ಎಲ್ಲ 173 ಪ್ರಯಾಣಿಕರನ್ನು ಶುಕ್ರವಾರ ಬೆಳಗ್ಗೆ ಎರಡು ವಿಮಾನಗಳಲ್ಲಿ ದೋಹಾಕ್ಕೆ ಕಳುಹಿಸಲಾಗಿದೆ. ಈ ನಡುವೆ, ತಾಂತ್ರಿಕ ವೈಫಲ್ಯದ ವಿಮಾನವನ್ನು ಸದ್ಯ ಯಥಾಸ್ಥಿತಿಯಲ್ಲಿ ನಿಲ್ದಾಣದಲ್ಲೇ ಇಡಲಾಗಿದ್ದು, ಅದಕ್ಕೆ ಹೊಸ ಎಂಜಿನ್‌ ಅನ್ನು ತಿರುವನಂತಪುರದಿಂದ ತರಿಸಿ ಅಳವಡಿಸಿಕೊಂಡು, ಸೆ. 28ರೊಳಗೆ ಮತ್ತೆ ಕಾರ್ಯಾರಂಭಿಸುವ ಸಾಧ್ಯತೆಯಿದೆ. ಈ ಘಟನೆ ಬಗೆಗಿನ ತನಿಖೆ ಮುಂಬಯಿ ನಾಗರಿಕ ವಿಮಾನಯಾನ ನಿರ್ದೇಶ
ನಾಲಯ ನಡೆಯಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. 

ವಾಪಸ್‌ ಬಂದಿದ್ದ ಸಂಬಂಧಿಕರು ವಿಮಾನ ತಾಂತ್ರಿಕ ವೈಫಲ್ಯಕ್ಕೊಳಗಾಗಿ ತುರ್ತು ಭೂಸ್ಪರ್ಶ  ಆಗುವ ವಿಚಾರ ನಿಲ್ದಾಣಕ್ಕೆ ಕರೆತಂದು ಬಿಟ್ಟಿದ್ದ ಸಂಬಂಧಿಕರಿಗೂ ಗೊತ್ತಾಗಿತ್ತು. ವಿಮಾನ ಲ್ಯಾಂಡಿಂಗ್‌ ಆಗುವುದಕ್ಕೂ ಮೊದಲೇ ವಿಮಾನದಲ್ಲಿದ್ದ ಪ್ರಯಾಣಿಕರೇ ತಮ್ಮ ತಮ್ಮ ಸಂಬಂಧಿಕರಿಗೆ ಮೊಬೈಲ್‌ ಕರೆ ಮಾಡಿ ಅಪಾಯದಲ್ಲಿರುವ ವಿಷಯವನ್ನು ತಿಳಿಸಿದ್ದರು. ಹೀಗಾಗಿ ನಿಲ್ದಾಣಕ್ಕೆ ಬಿಟ್ಟು ಹೋಗಿದ್ದ ಕೆಲವು ಸಂಬಂಧಿಕರು ಮತ್ತೆ ನಿಲ್ದಾಣಕ್ಕೆ ದೌಡಾಯಿಸಿ ಬಂದಿದ್ದರು. ಈ ನಡುವೆ ವಿಮಾನದೊಳಗೆ ಪ್ರಯಾಣಿಕರು ಪ್ರಾಣ ಒತ್ತೆಯಿಟ್ಟು ದೇವರಲ್ಲಿ ಮೊರೆಯಿಡು ತ್ತಿದ್ದರು ಎನ್ನಲಾದ ಆಡಿಯೋ ತುಣಕು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ.

ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.