ಪೈಪ್‌ಲೈನ್‌ ಹಾನಿಗೊಂಡು ಪುತ್ತೂರಿಗೆ ನೀರು ಸರಬರಾಜು ಸ್ಥಗಿತ


Team Udayavani, Jul 5, 2017, 3:35 AM IST

Pipeline-3-7.jpg

ಉಪ್ಪಿನಂಗಡಿ: ಪುತ್ತೂರು- ಕೋಡಿಂಬಾಡಿ ಹೆದ್ದಾರಿಯ ಕೋಡಿಂಬಾಡಿ ಬಳಿ ಹೆದ್ದಾರಿ ಅಗಲೀಕರಣ ಹಾಗೂ ಡಾಮರೀಕರಣ ಕಾಮಗಾರಿ ಇನ್ನೂ ಅಪೂರ್ಣ ಹಂತದಲ್ಲಿದ್ದು, ಪಲ್ಲತ್ತಾರು ಎಂಬಲ್ಲಿ ಈಗಾಗಲೇ ರಸ್ತೆ ಕುಸಿದಿದ್ದು, ಪುತ್ತೂರು ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಕೋಡಿಂಬಾಡಿಯಲ್ಲಿ 900 ಮೀಟರ್‌ ಪುತ್ತೂರು – ಉಪ್ಪಿನಂಗಡಿ ಹೆದ್ದಾರಿಯ ಅಗಲೀಕ ರಣ ಹಾಗೂ ಅಭಿವೃದ್ಧಿ  ಕಾಮಗಾರಿಗೆ 1.77 ಲಕ್ಷ ರೂ. ಟೆಂಡರ್‌ ಪ್ರಕ್ರಿಯೆ ನಡೆದಿತ್ತು. ಡಾಮರು, ರಸ್ತೆ ವಿಸ್ತರಣೆ ಸೇರಿದಂತೆ ಭಾಗಶಃ ಕಾಮಗಾರಿ ಈಗಾಗಲೇ ಮುಗಿಸಲಾಗಿದೆ. ಇನ್ನು ಕೆಲವು ಕಾಮಗಾರಿಗಳು ನಡೆಯಬೇಕಿದೆ. ಆದರೆ ಡಾಮರು ಕಾಮಗಾರಿ ನಡೆದು ಒಂದೆರಡು ತಿಂಗಳಿನಲ್ಲಿಯೇ ಈ ರಸ್ತೆ ಕುಸಿಯಲು ಆರಂಭವಾಗಿದೆ. ಕೆಲ ದಿನಗಳ ಹಿಂದೆ ಬಾರಿಕೆ ಎಂಬಲ್ಲಿ ಕೂಡ ರಸ್ತೆ ಕುಸಿದಿತ್ತು. ಪಲ್ಲತ್ತಾರುವಿನ ರಸ್ತೆ ಕುಸಿದ ಪರಿಣಾಮ ಪುತ್ತೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಗೆ ಹಾನಿಯಾಗಿದ್ದು, ನೀರು ಸರಬರಾಜು ಸ್ಥಗಿತಗೊಂಡಿದೆ.

ನೀರು ಸರಬರಾಜಿನಲ್ಲಿ ವ್ಯತ್ಯಯ
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಪುತ್ತೂರು ನಗರ ಸಭೆಯ ಕುಡಿಯುವ ನೀರು ಸರಬರಾಜಿನ ಉಸ್ತುವಾರಿ ವಸಂತ್‌, ಪಲ್ಲತ್ತಾರಿ ನಲ್ಲಿ ರಸ್ತೆ ಕುಸಿತದಿಂದ ಪುತ್ತೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನಿಗೆ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದು, ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ನಾಳೆ ಕೂಡಾ ಪೈಪ್‌ ಲೈನ್‌ನ ದುರಸ್ತಿ ಕಾರ್ಯ ನಡೆಯಲಿದ್ದು, ಆವರೆಗೆ ಪುತ್ತೂರು ನಗರಸಭಾ ವ್ಯಾಪ್ತಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದರು.

ಈ ಮೊದಲು ಐದೂವರೆ ಮೀಟರ್‌ನಷ್ಟಿದ್ದ ರಸ್ತೆಯನ್ನು ಇದೀಗ ಏಳೂವರೆ ಮೀಟರ್‌ ಅಗಲಗೊಳಿಸಲಾಗಿದ್ದು, ಕೆಲವು ಕಡೆ ರಸ್ತೆಯ ಬದಿ ಗದ್ದೆ, ತೋಟಗಳಿದ್ದುದರಿಂದ ಇಲ್ಲಿ ಅಗಲಗೊಳಿಸುವ ಸಂದರ್ಭ ಮಣ್ಣು ಹಾಕಿ ರಸ್ತೆಯನ್ನು ಎತ್ತರಿಸಲಾಗಿದೆ. ಪಲ್ಲತ್ತಾರುವಿನಲ್ಲಿ ರಸ್ತೆಯ ಬದಿ ಗದ್ದೆ ಇದ್ದಿದ್ದರಿಂದ ಸುಮಾರು 15 ಫೀಟ್‌ನಷ್ಟು ಮಣ್ಣು ಹಾಕಿ ಎತ್ತರಿಸಿ, ಅದಕ್ಕೆ ಡಾಮರು ಕಾಮಗಾರಿ ನಡೆಸಲಾಗಿತ್ತು. ಆದರೆ ಹಾಕಿದ ಮಣ್ಣನ್ನು ಹೈಡ್ರೋಲಿಕ್‌ ರೋಲಿಂಗ್‌ ಬಳಸಿ ಸರಿಯಾಗಿ ಕುಳ್ಳಿರಿಸದಿದ್ದ ಕಾರಣ ಮಳೆಗಾಲದಲ್ಲಿ ರಸ್ತೆ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಪುತ್ತೂರು ನಗರಸಭಾ ವ್ಯಾಪ್ತಿಗೆ 34ನೇ ನೆಕ್ಕಿಲಾಡಿಯಿಂದ ಕುಡಿಯುವ ನೀರು ಸರಬರಾಜಾಗುತ್ತಿದೆ.

ಈ ಮೊದಲು ರಸ್ತೆಯ ಬದಿಯಲ್ಲಿ ನೀರು ಸರಬರಾಜಿನ ಮುಖ್ಯ ಪೈಪ್‌ಗ್ಳು ಹಾದು ಹೋಗುತ್ತಿದ್ದವು. ಆದರೆ, ಇದೀಗ ರಸ್ತೆಯನ್ನು ಅಗಲಗೊಳಿಸಿದ್ದರಿಂದ ರಸ್ತೆಯಲ್ಲೇ ಪೈಪ್‌ ಹಾದು ಹೋಗುತ್ತಿದ್ದು, ಕೆಲವು ಕಡೆ ಇದರ ಮೇಲೆಯೇ ಡಾಮರು ಕಾಮಗಾರಿ ಕೂಡಾ ನಡೆಸಲಾಗಿದೆ. ಈ ಪೈಪ್‌ಲೈನ್‌ 1984ರಲ್ಲಿ ಹಾಕಿರುವ ಪೈಪ್‌ಲೈನ್‌ ಆದ್ದರಿಂದ ಇದೀಗ ಈ ಕಬ್ಬಿಣದ ಪೈಪ್‌ಗ್ಳು ಕ್ಷಮತೆ ಕಳೆದುಕೊಂಡಿದ್ದು, ವಾಹನ ಸಂಚಾರದ ಸಂದರ್ಭ ಒತ್ತಡ ಬಿದ್ದಾಗ ಹಾನಿಗೀಡಾಗುತ್ತಿವೆ. ಪಲ್ಲತ್ತಾರುವಿನಲ್ಲಿ ಕೂಡಾ ಇದೇ ರೀತಿ ಪೈಪ್‌ ಲೈನ್‌ಗೆ ಹಾನಿಯಾಗಿದೆ. ಈ ಕಾಮಗಾರಿಯು ಇನ್ನೂ ಅಪೂರ್ಣ ಹಂತದಲ್ಲಿದ್ದು, ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಕೋಡಿಂಬಾಡಿ ಪೇಟೆಯಲ್ಲೇ ಇನ್ನೂ ಚರಂಡಿ ಕಾಮಗಾರಿಯಾಗಲೀ, ಫ‌ುಟ್‌ಪಾತ್‌ ನಿರ್ಮಾಣ ಕಾಮಗಾರಿಯೂ ಆಗಿಲ್ಲ. ಚರಂಡಿ ಕಾಮಗಾರಿ ಆಗದಿರುವುದರಿಂದ ಈಗ ಮಾರ್ಗದ ಮೇಲೆಯೇ ನೀರು ಹರಿದು ಹೋಗುವಂತಾಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.