ಫುಟ್‌ಪಾತ್‌ನಲ್ಲೇ ಪೈಪ್‌ ರಾಶಿ; ಪಾದಚಾರಿಗಳಿಗೆ ಸಂಕಷ್ಟ

 ಲಾಲ್‌ಬಾಗ್‌ನಿಂದ ಬಿಜೈ, ಬಲ್ಲಾಳ್‌ಬಾಗ್‌, ಕಾಪಿಕಾಡ್‌, ಕೊಟ್ಟಾರ ಕ್ರಾಸ್‌

Team Udayavani, Jan 28, 2021, 5:40 AM IST

ಫುಟ್‌ಪಾತ್‌ನಲ್ಲೇ ಪೈಪ್‌ ರಾಶಿ; ಪಾದಚಾರಿಗಳಿಗೆ ಸಂಕಷ್ಟ

ಮಹಾನಗರ: ಪಾದಚಾರಿ ಗಳಿಗೆ ಅನುಕೂಲವಾಗಲೆಂದು ರಸ್ತೆ ಬದಿಗಳಲ್ಲಿ ಫುಟ್‌ಪಾತ್‌ ನಿರ್ಮಾಣ ಮಾಡಲಾಗುತ್ತದೆ. ಆದರೆ ನಗರದ ಬಹುತೇಕ ಫುಟ್‌ಪಾತ್‌ಗಳು ಪಾದಚಾರಿ ಗಳಿಗೆ ಸೂಕ್ತವಾಗಿಲ್ಲ ಎಂಬ ಆರೋಪವಿದೆ. ಹೀಗಿರುವಾಗಲೇ ನಗರದ ಬಹುತೇಕ ಫುಟ್‌ಪಾತ್‌ಗಳಲ್ಲಿ ಪೈಪ್‌ ರಾಶಿ ಹಾಕಲಾಗಿದ್ದು, ಸಾರ್ವಜನಿಕರಿಗೆ ಮತ್ತೆ ತೊಂದರೆಯಾಗುತ್ತಿದೆ.

ಮಹಾನಗರ ಪಾಲಿಕೆಯ ಎದುರು ಲಾಲ್‌ಬಾಗ್‌ನಿಂದ ಬಿಜೈವರೆಗೆ ಇತ್ತೀಚೆಗೆಯಷ್ಟೇ ವ್ಯವಸ್ಥಿತ ಫುಟ್‌ಪಾತ್‌ ಕಾಮಗಾರಿ ನಡೆದಿತ್ತು. ರಸ್ತೆ ವಿಸ್ತರಣೆ ಜತೆಗೆ ಫುಟ್‌ಪಾತ್‌ಗೆ ಇಂಟರ್‌ಲಾಕ್‌ ಕೂಡ ಅಳವಡಿಸಲಾಗಿತ್ತು. ಆದರೆ ಇದರ ಪ್ರಯೋಜನ ಮಾತ್ರ ಸಾರ್ವಜನಿಕರಿಗೆ ಇಲ್ಲದಂತಾಗಿದೆ. ಈ ಭಾಗದ ಫುಟ್‌ಪಾತ್‌ ಬದಿಯಲ್ಲಿ ಸದ್ಯ ಪೈಪ್‌ಗ್ಳನ್ನು ರಾಶಿ ಹಾಕಲಾಗಿದ್ದು, ಇದರಿಂದಾಗಿ ಸಾರ್ವಜನಿಕರು ನಡೆದಾಡಲು ಪರದಾಡುವಂತಾಗಿದೆ. ಅದೇರೀತಿ ಬಲ್ಲಾಳ್‌ಬಾಗ್‌, ಕಾಪಿಕಾಡ್‌, ಕೊಟ್ಟಾರ ಕ್ರಾಸ್‌ ಸಹಿತ ಅನೇಕ ಕಡೆಗಳಲ್ಲಿ ಫುಟ್‌ಪಾತ್‌ ಬಳಿ ಪೈಪ್‌ ರಾಶಿ ಇದೆ.

ನಗರದ ಮನೆ ಮನೆಗೆ ಗ್ಯಾಸ್‌ ತಲುಪಿಸಲು ಗೈಲ್‌ ಸಂಸ್ಥೆ ಇತ್ತೀಚೆಗೆಷ್ಟೇ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಉದ್ದೇಶದಿಂದಾಗಿ ಮೊದಲನೇ ಹಂತದಲ್ಲಿ ನಗರದಲ್ಲಿ ಪೈಪ್‌ಲೈನ್‌ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಇದೇ ಕಾರಣಕ್ಕೆ ಸದ್ಯ ನಗರದ ಹಲವು  ಕಡೆಗಳಲ್ಲಿ ಪೈಪ್‌ ರಾಶಿ ಹಾಕಲಾಗಿದೆ. ವಿಪರ್ಯಾಸ ಅಂದರೆ, ಈ ಪೈಪ್‌ಗ್ಳನ್ನು ರಾಶಿ ಹಾಕಲು ಫುಟ್‌ಪಾತ್‌ಗಳನ್ನೇ ಆಯ್ಕೆ ಮಾಡಲಾಗಿದೆ.

ಸೂಚನ ಫಲಕ ಇಲ್ಲ :

ಅದೇ ರೀತಿ ನಗರದಲ್ಲಿ ಕೆಲವು ಕಡೆಗಳಲ್ಲಿ ಫುಟ್‌ಪಾತ್‌ ಕಾಮಗಾರಿ ನಡೆಯುತ್ತಿದೆ. ಇನ್ನೂ ಕೆಲವೆಡೆ ಅರ್ಧದಲ್ಲಿಯೇ ಕಾಮಗಾರಿ ನಿಂತಿದೆ. ಇಲ್ಲಿ ಸಮರ್ಪಕ ಸೂಚನ ಫಲಕ ವ್ಯವಸ್ಥೆಯನ್ನು ಅಳವಡಿಸದೇ ಸಾರ್ವಜನಿಕರಿಗೆ ಅಪಾಯ ಸೂಚಿಸುತ್ತಿದೆ. ನಗರದ ಪಿ.ವಿ.ಎಸ್‌. ಜಂಕ್ಷನ್‌ ಬಳಿ ಕಳೆದ ಕೆಲವು ತಿಂಗಳುಗಳ ಹಿಂದೆ ರಸ್ತೆ ವಿಸ್ತರಣೆ, ವ್ಯವಸ್ಥಿತ ಫುಟ್‌ಪಾತ್‌ ವ್ಯವಸ್ಥೆಗಳ ಸ್ಮಾರ್ಟ್‌ಸಿಟಿ ಕಾಮಗಾರಿ ಆರಂಭಗೊಂಡಿತ್ತು. ಕಾಮಗಾರಿ ಅರ್ಧದಲ್ಲಿ ಇರುವಾಗ ಹೈಕೋರ್ಟ್‌ನಿಂದ ತಡೆಯಾಜ್ಞೆ ಬಂತು. ಒಂದು ತಿಂಗಳಿನಿಂದ ಕಾಮಗಾರಿ ನಿಂತಿದೆ. ಸದ್ಯ ಈ ಪ್ರದೇಶ ಅಪಾಯದ ಸ್ಥಿತಿಯಲ್ಲಿದೆ. ರಸ್ತೆ ಬದಿ ಸುಮಾರು 5-6 ಅಡಿಗೂ ಹೆಚ್ಚಿನ ಆಳ ಇದ್ದು, ಈ ಪ್ರದೇಶದಲ್ಲಿ ಕಾಮಗಾರಿ ಆರಂಭವಾಗುವವರೆಗೆ ಮುನ್ನೆಚ್ಚರಿಕೆ ಉದ್ದೇಶದಿಂದ ಯಾವುದೇ ಸೂಚನ ಫಲಕ ಕೂಡ ಅಳವಡಿಸಲಿಲ್ಲ. ರಾತ್ರಿ ವೇಳೆ ವಾಹನಗಳು, ಸಾರ್ವಜನಿಕರು ಆಯತಪ್ಪಿ ಬೀಳುವ ಅಪಾಯ ಇದೆ.

ಫುಟ್‌ಪಾತ್‌ನಲ್ಲೇ ಬಸ್‌ ತಂಗುದಾಣ :

ನಗರದ ಕೆಲವು ಕಡೆಗಳಲ್ಲಿ ಬಸ್‌ ತಂಗುದಾಣಗಳನ್ನು ರಸ್ತೆ ವಿಸ್ತರಣೆ ಉದ್ದೇಶದಿಂದ ಕೆಡಹಲಾಗಿದೆ. ಇನ್ನು ಸದ್ಯ ಕೆಲವು ಬಸ್‌ ತಂಗುದಾಣಗಳು ಫುಟ್‌ಪಾತ್‌ಗಳಲ್ಲಿಯೇ ಇವೆ. ಇದರಿಂದಾಗಿ ನಾಗರಿಕರು ನಡೆದುಕೊಂಡು ಹೋಗಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎನ್ನುತ್ತಾರೆ ಸಾರ್ವಜನಿಕರು.

ಮನೆ ಮನೆಗೆ ಗ್ಯಾಸ್‌ ಕಾಮಗಾರಿಯ ಉದ್ದೇಶದಿಂದ ನಗರದ ಅನೇಕ ಕಡೆಗಳಲ್ಲಿ ಫುಟ್‌ಪಾತ್‌ಗಳಲ್ಲಿ ಪೈಪ್‌ಗ್ಳನ್ನು ರಾಶಿ ಹಾಕಲಾಗಿದೆ. ಈ ಕುರಿತು ಈಗಾಗಲೇ ಸಂಬಂಧಪಟ್ಟವರಅಞಜತೆ ಸಭೆ ನಡೆಸಿ ತೆರವು ಮಾಡುವಂತೆ ಸೂಚನೆ ನೀಡಿದ್ದೇವೆ. ಒಂದು ವೇಳೆ ತತ್‌ಕ್ಷಣ ಕಾಮಗಾರಿ ನಡೆಸದೇ ಇದ್ದರೆ ಫುಟ್‌ಪಾತ್‌ನಲ್ಲಿ ರಾಶಿ ಹಾಕಿದ್ದ ಪೈಪ್‌ ತೆಗೆಯಲು ಮತ್ತೂಮ್ಮೆ ಸೂಚನೆ ನೀಡುತ್ತೇನೆ. -ದಿವಾಕರ್‌ ಪಾಂಡೇಶ್ವರ,  ಮನಪಾ ಮೇಯರ್‌

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.