ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

12 ಲಕ್ಷ ರೂ. ವೆಚ್ಚದಲ್ಲಿ ಹೋರ್ಡಿಂಗ್‌, ಸೈನೇಜ್‌ಗಳ ಅಳವಡಿಕೆ

Team Udayavani, Sep 27, 2020, 8:12 PM IST

ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

ಮಹಾನಗರ, ಸೆ. 26: ದ.ಕ. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕಾರ್ಯೋನ್ಮುಖವಾಗಿದೆ. ಆಯ್ದ ಸ್ಥಳಗಳಲ್ಲಿ ಜಿಲ್ಲೆಯ ಸಮಗ್ರ ಸಂಸ್ಕೃತಿಯನ್ನು ಬಿಂಬಿಸುವ ಹೋರ್ಡಿಂಗ್‌ಗಳು, ಪ್ರವಾಸಿ ತಾಣಗಳನ್ನು ಸೂಚಿಸುವ ಸೈನೇಜ್‌ಗಳ ಅಳವಡಿಕೆ 12 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿದೆ.

ಇಲ್ಲಿ ಪ್ರವಾಸೋದ್ಯಮದ ಮುಖ್ಯ ಆಕ ರ್ಷಣೆ ಬೀಚ್‌, ಧಾರ್ಮಿಕ ಕ್ಷೇತ್ರಗಳು. ಐದು ಬೀಚ್‌ಗಳನ್ನು ಹೊಂದಿರುವ ಇಲ್ಲಿ ಬೀಚ್‌ ಪ್ರವಾಸೋದ್ಯಮಕ್ಕೆ ಆಕರ್ಷಿಸಲು ಸೈನೇಜ್‌ಗಳ ಅಳವಡಿಕೆ ನಡೆಯುತ್ತಿದೆ. ಧಾರ್ಮಿಕ ಪ್ರವಾಸೋದ್ಯಮ ಉತ್ತೇಜನ ದಲ್ಲಿಯೂ ಇವು ಪ್ರಾಮುಖ್ಯ ಪಡೆಯಲಿವೆ. ಪಣಂಬೂರು ಬೀಚ್‌ ಬಳಿ, ಕೆಐಒಸಿಎಲ್‌ ಜಂಕ್ಷನ್‌ ಬಳಿ, ಸಂಕೊಳಿಗೆಯಿಂದ ಉಚ್ಚಿಲಕ್ಕೆ ತಿರುಗುವ ರಸ್ತೆ ಜಂಕ್ಷನ್‌ ಬಳಿ, ಮುಕ್ಕಾದಿಂದ ಸಸಿಹಿತ್ಲು ಕಡಲ ತೀರಕ್ಕೆ ತಿರುಗುವ ರಸ್ತೆ ಜಂಕ್ಷನ್‌ ಬಳಿ ಸೈನೇಜ್‌ ಅಳವಡಿಕೆಯಾಗಲಿದೆ.

ಧಾರ್ಮಿಕ ಪ್ರವಾಸೋದ್ಯಮಕ್ಕೆ ಸೈನೇಜ್‌ :

ಪಿಲಿಕುಳ, ಮೂಡುಬಿದಿರೆ ಬಸದಿ, ಪೊಳಲಿ ದೇಗುಲಗಳ ದೂರ, ವೈಶಿಷ್ಟ್ಯದ ಬಗ್ಗೆ ವಾಮಂಜೂರು ಜಂಕ್ಷನ್‌ನಲ್ಲಿ, ಕಟೀಲು ದೇವಸ್ಥಾನ, ಹೊರನಾಡು, ಬೆಳುವಾಯಿಯ ಸಮ್ಮಿಲನ ಬಟರ್‌ ಫ್ಲೈ ಪಾರ್ಕ್‌, ನೆಲ್ಲಿತೀರ್ಥಗಳ ಬಗ್ಗೆ ಮೂರು ಕಾವೇರಿ ಜಂಕ್ಷನ್‌ನಲ್ಲಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಬಗ್ಗೆ ನೆಲ್ಯಾಡಿ ಪೆರಿಯಶಾಂತಿ ರಸ್ತೆಯಲ್ಲಿ ಹಾಗೂ ಗುಂಡ್ಯ ಜಂಕ್ಷನ್‌ನಲ್ಲಿ, ಮೂಡುಬಿದಿರೆ ಬಸದಿ, ವೇಣೂರು ಬಾಹುಬಲಿ ಬಸದಿ, ಶ್ರೀ ಕ್ಷೇತ್ರ ಧರ್ಮಸ್ಥಳಗಳ ಬಗ್ಗೆ ಮೂಡುಬಿದಿರೆ ಸಾವಿರ ಕಂಬದ ಬಸದಿ ಬಳಿ ಸೈನೇಜ್‌ ಅಳವಡಿಕೆಯಾಗಲಿದೆ.

ಐದು ಕಡೆ ಸುರಕ್ಷತೆ ಸೈನೇಜ್‌ : ಪ್ರವಾಸಿಗರಿಗೆ ಸುರಕ್ಷೆಯ ಎಚ್ಚರಿಕೆ ನೀಡಲು ಐದು ಬೀಚ್‌ಗಳ ಸನಿಹದಲ್ಲಿ ಸುರಕ್ಷ ಸೈನೇಜ್‌ ಅಳವಡಿಕೆಯಾಗಲಿದೆ. ಬೀಚ್‌ಗಿಳಿಯುವ ಸಂದರ್ಭ ಮತ್ತು ಸ್ನಾನ ಮಾಡುವಾಗ ಅನುಸರಿಸಬೇಕಾದ ನಿಯಮ, ಆಳಕ್ಕಿಳಿಯದಂತೆ ಸೂಚನೆ, ಮಳೆಗಾಲದ ಮುನ್ನೆಚ್ಚರಿಕೆ ಇದರಲ್ಲಿ ಇರಲಿದೆ.

12 ಲಕ್ಷ ರೂ. ವೆಚ್ಚದಲ್ಲಿ ಹೋರ್ಡಿಂಗ್ಸ್‌ ಸೈನೇಜ್ ಅಳವಡಿಕೆ ನಡೆಯುತ್ತಿದೆ. ಸೈನೇಜ್‌ ಅಳವಡಿಕೆ ಮುಂದಿನ 15 ದಿನಗಳೊಳಗೆ ಮುಗಿಯಬಹುದು.  -ಸುಧೀರ್‌ ಗೌಡ,  ದ.ಕ. ಪ್ರವಾಸೋದ್ಯಮ ಇಲಾಖೆ ಸಮಾಲೋಚಕ

 

-ವಿಶೇಷ ವರದಿ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.