ವಿ.ವಿ. ಕ್ಯಾಂಪಸ್‌ನಲ್ಲಿ  ಪ್ಲಾಸ್ಟಿಕ್‌ ಬಳಕೆಗೆ ನಿಷೇಧ!


Team Udayavani, May 29, 2018, 4:00 AM IST

mangalore-university-600.jpg

ವಿಶೇಷ ವರದಿ
ಮಹಾನಗರ:
ಕಾಫಿ ಕಪ್‌ ಗಳು, ಪಾರ್ಸೆಲ್‌ ಕವರ್‌ ಗಳು, ಮಣ್ಣಿನಲ್ಲಿ ಕರಗದ ಪ್ಲಾಸ್ಟಿಕ್‌ ಉತ್ಪನ್ನ, ಪಾಲಿಥಿನ್‌ ಕವರ್‌ಗಳು, ಪ್ಲಾಸ್ಟಿಕ್‌ ತಟ್ಟೆಗಳು, ಸ್ಟ್ರಾಗಳನ್ನು ಇನ್ನು ಮುಂದೆ ಮಂಗಳೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ ನಲ್ಲಿ ಬಳಕೆಗೆ ನಿಷೇಧ ಹೇರುವ ಸಂಭವವಿದೆ. ವಿಶ್ವವಿದ್ಯಾಲಯಗಳ ಅನುದಾನ ಆಯೋಗವು (ಯುಜಿಸಿ) ತನ್ನ ವ್ಯಾಪ್ತಿಯಲ್ಲಿರುವ ಎಲ್ಲ ವಿವಿಗಳನ್ನು ‘ಪ್ಲಾಸ್ಟಿಕ್‌ ಮುಕ್ತ ವಲಯ’ವನ್ನಾಗಿ ಘೋಷಿಸುವ ಬಗ್ಗೆ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರಂತೆ ಯುಜಿಸಿ ಅಡಿಯಲ್ಲಿ ಬರುವ ವಿ.ವಿ.ಗಳ ಕ್ಯಾಂಪಸ್‌ ಪ್ಲಾಸ್ಟಿಕ್‌ ಮುಕ್ತವಾಗಿ ಪರಿವರ್ತನೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕೊಣಾಜೆಯಲ್ಲಿರುವ ಮಂಗಳೂರು ವಿ.ವಿ. ಕ್ಯಾಂಪಸ್‌, ಪ್ಲಾಸ್ಟಿಕ್‌ ಮುಕ್ತ ಕ್ಯಾಂಪಸ್‌ ಮಾಡುವ ಕ್ರಮಕ್ಕೆ ಮುಂದಾಗಲಿದೆ. 

ಇದು ಸಾಧ್ಯವಾದರೆ, ಮಂಗಳೂರು ವಿ.ವಿ. ಕ್ಯಾಂಪಸ್‌ ನಲ್ಲಿ ನಡೆಯುವ ಕಾರ್ಯಕ್ರಮಗಳಿಂದ ಆರಂಭವಾಗಿ, ವಿ.ವಿ. ಕ್ಯಾಂಪಸ್‌ ಪೂರ್ಣವಾಗಿ ಪ್ಲಾಸ್ಟಿಕ್‌ ಮುಕ್ತವಾಗಬಹುದು. ಒಂದೆರಡು ದಿನದ ಹಿಂದಷ್ಟೇ ಯುಜಿಸಿ ಯಿಂದ ವಿ.ವಿ. ಗೆ ಈ ಕುರಿತು ಪತ್ರ ತಲುಪಿದೆ. ಈ ಕುರಿತು ಮುಂದಿನ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ಅನುಷ್ಠನ ಸಂಬಂಧ ಯೋಜನೆಗಳನ್ನು ಕೈಗೊಳ್ಳಬೇಕಿದೆ. ವಿ.ವಿ. ಕ್ಯಾಂಪಸ್‌ ನ ಕ್ಯಾಂಟೀನ್‌ ನಲ್ಲಿ ಮಾರಾಟವಾಗುವ ಪ್ಲಾಸ್ಟಿಕ್‌ ನಲ್ಲಿ ಸಿಗುವ ತಿಂಡಿ ತಿನಿಸುಗಳಿಗೂ ಕಡಿವಾಣ ಬೀಳಲಿದೆ. 

ಪೂರಕ ಕ್ರಮ
ಈವರೆಗೆ ಮಂಗಳೂರು ವಿ.ವಿ. ಕ್ಯಾಂಪಸ್‌ ನಲ್ಲಿ ಸ್ವಚ್ಛ ಭಾರತ್‌ ಯೋಜನೆಗೆ ಪೂರಕವಾಗುವ ಚಟುವಟಿಕೆ ಗಳನ್ನು ಆಯೋಜಿಸುತ್ತಾ ಬರಲಾಗಿದೆ. ಪ್ರತೀ ತಿಂಗಳು ಸಂಜೆಯ ನಿಗದಿತ ಸಮಯದಲ್ಲಿ ತನ್ನ ಕ್ಯಾಂಪಸ್‌ನಲ್ಲಿಯೇ ಪ್ಲಾಸ್ಟಿಕ್‌ ಹೆಕ್ಕುವ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸಂಗ್ರಹವಾದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸ್ಥಳೀಯ ತ್ಯಾಜ್ಯ ಸಾಗಾಟ ವಾಹನಗಳ ಮೂಲಕ ವಿಲೇವಾರಿ ಮಾಡಲಾಗುತ್ತಿದೆ. ಜತೆಗೆ ಸ್ವಚ್ಛ ಭಾರತ್‌ ಯೋಜನೆಯಡಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯ ಕೂಡ ನಡೆದಿದೆ. 

ಈಗ ಮಂಗಳೂರು ವಿ.ವಿ.ಗೆ ಒಳಪಟ್ಟ ಎಲ್ಲ ಕಾಲೇಜುಗಳ ವ್ಯಾಪ್ತಿಯಲ್ಲೂ ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದೆ. ಯುಜಿಸಿಯಿಂದ ಹೊರಡಿಸಲಾದ ಆದೇಶದ ಪ್ರಕಾರ ಎಲ್ಲ  ಕಾಲೇಜುಗಳ ಕ್ಯಾಂಪಸ್‌ ಅನ್ನು ಪ್ಲಾಸ್ಟಿಕ್‌ ಮುಕ್ತ ವಲಯವನ್ನಾಗಿ ಘೋಷಿಸುವ ಬಗ್ಗೆ ಉಲ್ಲೇಖವಿಲ್ಲದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕಾಲೇಜು ಕ್ಯಾಂಪಸ್‌ಗಳು ಈ ಆದೇಶದಿಂದ ಹೊರಗಿದೆ. ಆದರೆ, ತನ್ನ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ ಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ವಿ.ವಿ. ಸೂಚಿಸಲಿದೆ.

ಯುಜಿಸಿ ಪತ್ರದಲ್ಲಿರುವ ಅಂಶಗಳು
– ವಿವಿ ಕ್ಯಾಂಪಸ್‌ನಲ್ಲಿ ಪ್ಲಾಸ್ಟಿಕ್‌ ಸಂಬಂಧಿತ ಎಲ್ಲ ವಸ್ತುಗಳ ಬಳಕೆ ನಿಷೇಧ
– ಸ್ವಚ್ಛ ಭಾರತ ಅಭಿಯಾನದಡಿ ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ
– ಪ್ಲಾಸ್ಟಿಕ್‌ ಬಾಟಲ್‌ಗ‌ಳ ಬದಲಾಗಿ ಮರುಬಳಕೆ ಮಾಡಬಹುದಾದ ಲೋಹದ ಬಾಟಲಿಗಳ ಬಳಕೆಗೆ ಉತ್ತೇಜನ
– ಪರಿಸರ ಜಾಗೃತಿಗಾಗಿ ಮ್ಯಾರಥಾನ್‌ ಆಯೋಜನೆ
– ಪರಿಸರ ಜಾಗೃತಿ ಕುರಿತು ಬೀದಿ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ
– ಕಾಡುಗಳ ನಾಶ ಕುರಿತು ಕಾಲೇಜು/ವಿವಿ ಮಟ್ಟದ ಕಾರ್ಯಕ್ರಮ ಆಯೋಜನೆ
– NCC, NSS, ಇಕೋ ಕ್ಲಬ್‌ಗಳ ಸಹಯೋಗದೊಂದಿಗೆ ಸಾಮೂಹಿಕ ಜಾಗೃತಿ

ಮಂಗಳೂರು ವಿ.ವಿ.ಯಲ್ಲಿ ಕ್ರಮ
ವಿಶ್ವವಿದ್ಯಾಲಯಗಳ ಅನುದಾನ ಆಯೋಗವು ತನ್ನ ವ್ಯಾಪ್ತಿಯಲ್ಲಿರುವ ಎಲ್ಲ ವಿವಿಗಳನ್ನು ‘ಪ್ಲಾಸ್ಟಿಕ್‌ ಮುಕ್ತ ವಲಯ’ವನ್ನಾಗಿ ಘೋಷಿಸುವ ಬಗ್ಗೆ ಇತ್ತೀಚೆಗೆ ಕಳುಹಿಸಿದ ಆದೇಶ ಮಂಗಳೂರು ವಿ.ವಿ.ಗೆ ದೊರಕಿದೆ. ಇದರಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
– ಪ್ರೊ| ನಾಗೇಂದ್ರ ಪ್ರಸಾದ್‌, ಕುಲಸಚಿವರು

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.