ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಅಧಿಕಾರ ಸ್ವೀಕಾರ


Team Udayavani, Jun 13, 2017, 1:39 PM IST

adikara.jpg

ಮಂಗಳೂರು: ಮಂಗಳೂರಿನ ನೂತನ ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮನ ಆಯುಕ್ತ ಎಂ. ಚಂದ್ರಶೇಖರ್‌ ಅವರು ಅಧಿಕಾರವನ್ನು ಹಸ್ತಾಂತರಿಸಿದರು.

ನೂತನ ಆಯುಕ್ತರಾದ ತಿಮ್ಮಪ್ಪ ರಾಮಪ್ಪ ಸುರೇಶ್‌ ಅವರು ಈ ಹಿಂದೆ ಬೆಂಗಳೂರಿನ ಅಗ್ನಿ ಶಾಮಕ ಸೇವಾ ವಿಭಾಗದ ಡಿಐಜಿ ಆಗಿದ್ದರು.

1991ರಲ್ಲಿ ಡಿವೈಎಸ್‌ಪಿ ಆಗಿ ವೃತ್ತಿ ಜೀವನ ಆರಂಭಿಸಿದ ಅವರು 1996ರಲ್ಲಿ ಎಸ್‌ಪಿ (ನಾನ್‌ ಎಕ್ಸಿಕ್ಯೂಟಿವ್‌) ಆಗಿ ಭಡ್ತಿ ಹೊಂದಿದ್ದರು. 2003ರಲ್ಲಿ ಐಪಿಎಸ್‌ ಅಧಿಕಾರಿಯಾಗಿ ಆಯ್ಕೆ ಯಾಗಿ ನಿಯುಕ್ತಿಗೊಂಡಿದ್ದರು. ಪ್ರಥಮವಾಗಿ ವಿಜಯ ಪುರದಲ್ಲಿ ಸೇವೆ ಮಾಡಿದ್ದರು. ಬಳಿಕ ಬಾಗಲಕೋಟೆ, ಉತ್ತರ ಕನ್ನಡ (1997- 90) ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಅನಂತರದ ವರ್ಷಗಳಲ್ಲಿ ಹುಬ್ಬಳ್ಳಿ – ಧಾರವಾಡಗಳಲ್ಲಿ ಡಿಸಿಪಿ, ಮೈಸೂರಿನಲ್ಲಿ ರಾಜ್ಯ ಗುಪ್ತಚರ ವಿಭಾಗ ಹಾಗೂ ಬಳಿಕ ಅಲ್ಲಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ತುಮಕೂರು ಲೋಕಾಯುಕ್ತ ಎಸ್‌ಪಿ, ಬೆಳಗಾವಿಯಲ್ಲಿ ಅಡಿಶನಲ್‌ ಎಸ್‌ಪಿ ಆಗಿದ್ದರು.

ಜಿಲ್ಲಾ ಎಸ್‌ಪಿ ಆಗಿ ಪ್ರಥಮವಾಗಿ ಕೊಡಗು, ಬಳಿಕ ಬಾಗಲ ಕೋಟೆ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದರು. ಡಿಸಿಪಿಯಾಗಿ ಬೆಂಗಳೂರು ಈಶಾನ್ಯ ವಲಯ ಮತ್ತು ಉತ್ತರ ವಲಯಗಳಲ್ಲಿ ಸೇವೆ ಒದಗಿಸಿದ ಬಳಿಕ ಡಿಐಜಿ ಹುದ್ದೆಗೆ ಭಡ್ತಿ ಹೊಂದಿ ಕಳೆದ 6 ತಿಂಗಳಿಂದ ಬೆಂಗ ಳೂರಿನ ಅಗ್ನಿ ಶಾಮಕ ಸೇವಾ ವಿಭಾಗದಲ್ಲಿ 
ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಶಿವಮೊಗ್ಗದವರಾಗಿದ್ದು, ಬಿ.ಕಾಂ. ಮತ್ತು ಮೈಸೂರು ವಿಶ್ವ ವಿದ್ಯಾ ನಿಲಯದಿಂದ 
ಎಂಬಿಎ ಪದವಿ ಪಡೆದಿದ್ದಾರೆ.

ಉತ್ತಮ ಸೇವೆಯ ಭರವಸೆ
ಮಂಗಳೂರು ನಗರಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮತ್ತು ಇತರ ಪೊಲೀಸ್‌ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಟಿ.ಆರ್‌. ಸುರೇಶ್‌ ತಿಳಿಸಿದರು. 

ನಿರ್ಗಮನ ಕಮಿಷನರ್‌ ಎಂ. ಚಂದ್ರಶೇಖರ್‌ ಅವರ ಒಳ್ಳೆಯ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗು ತ್ತೇನೆ. ಅವಕಾಶ ಲಭಿಸಿದಲ್ಲೆಲ್ಲಾ ಹೊಸ ಸೇವೆಯನ್ನು ಕಮಿಷನರೆಟ್‌ ವ್ಯಾಪ್ತಿಯ ಪೊಲೀಸ್‌ ಅಧಿಕಾರಿಗಳ ಜತೆ ಸೇರಿ ಒದಗಿಸಲು ಯತ್ನಿಸುತ್ತೇನೆ. ಹಿರಿಯ ನಾಗರಿಕರ ಮತ್ತು ಮಾಧ್ಯಮದವರ ಸಲಹೆಗಳನ್ನು ಪಡೆದು ಮಂಗಳೂರಿಗೆ ಒಳ್ಳೆಯ, ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಅವರು ವಿವರಿಸಿದರು.

ಜನತೆ, ಮಾಧ್ಯಮಗಳಿಂದ ಉತ್ತಮ ಸಹಕಾರ: ಎಂ. ಚಂದ್ರಶೇಖರ್‌ 
ಮಂಗಳೂರಿಲ್ಲಿ ಒಂದು ವರ್ಷ 6 ತಿಂಗಳು ಕೆಲಸ ಮಾಡಿರುವುದು ನನ್ನ ವೃತ್ತಿ ಜೀವನದ ಆವಿಸ್ಮರಣೀಯ ದಿನಗಳಾಗಿವೆ. 2016 ಜನವರಿಯಲ್ಲಿ ಇಲ್ಲಿಗೆ ಬಂದಾಗ ಇದು ಅಪರಿಚಿತ ನಗರವಾಗಿದ್ದರೂ ಸಹೃದಯಿ ಹಾಗೂ ಕಾನೂನನ್ನು ಗೌರವಿಸುವ ಜನರು ಇಲ್ಲಿರುವುದರಿಂದ ಅವರ ಮತ್ತು ಪೊಲೀಸ್‌ ಸಹೋದ್ಯೋಗಿಗಳ ಸಹಕಾರದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಯಿತು ಎಂದು ನಿರ್ಗಮನ ಆಯುಕ್ತ ಎಂ. ಚಂದ್ರಶೇಖರ್‌ ಅವರು ತಿಳಿಸಿದರು.

ಸಮಾಜದ ಕೆಲವೊಂದು ದುಷ್ಟ ಶಕ್ತಿಗಳು ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆಗಳನ್ನು ಹದಗೆಡಿಸಲು ಪ್ರಯತ್ನಿಸಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಅವರನ್ನು ನಿಯಂತ್ರಿಸಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ ಎಂದರು.

ಮಂಗಳೂರು ನಗರ ಪೊಲೀಸನ್ನು ಜನಸ್ನೇಹಿ ಪೊಲೀಸ್‌ ಆಗಿ ಮಾಡಲು ಹಲವು ಕಾರ್ಯಕ್ರಮ ಹಮಿಕೊಂಡಿದ್ದು, ಇದರಲ್ಲಿ “ಫೋನ್‌ ಇನ್‌ ಕಾರ್ಯ ಕ್ರಮ’ ಪ್ರಮುಖವಾಗಿದೆ. ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪೊಲೀಸ್‌ ಇಲಾಖೆಯ ಕೇಂದ್ರ ಕಚೇರಿಗೂ ತಿಳಿಸಲಾಗಿದೆ ಎಂದರು.

ಸಮಾಜ ಘಾತಕ ಶಕ್ತಿಗಳು ಹಲವು ಬಾರಿ ಒತ್ತಡ ತಂದು ಪ್ರಕರಣಗಳ ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದ್ದರೂ ಮಾಧ್ಯಮಗಳು ವಸ್ತುಸ್ಥಿತಿಯನ್ನು ವರದಿ ಮಾಡಿದ್ದರಿಂದ ಅಂತಹ ಶಕ್ತಿಗಳನ್ನು ಮಟ್ಟ ಹಾಕಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳಲು ಸಾಧ್ಯವಾಗಿದೆ. ಮಾಧ್ಯಮದವರ ಸಲಹೆಗಳು ಕೆಲವು ಪ್ರಕರಣಗಳ ಪತ್ತೆಗೂ ಸಹಕಾರಿಯಾಗಿವೆ ಎಂದರು.

ಫೇಸ್‌ಬುಕ್‌ ಸಂಸ್ಥೆಯ ಅಧಿಕಾರಿಯನ್ನೂ ಮಂಗಳೂರಿಗೆ ಕರೆಸಲು ಸಾಧ್ಯವಾಗಿರುವುದು ಮಹತ್ವದ ವಿಷಯವಾಗಿದ್ದು, ಮುಂದಿನ ದಿನಗಳಲ್ಲೂ ಫೇಸ್‌ಬುಕ್‌ ಸಂಸ್ಥೆಯು ತನಿಖೆಗೆ ಸಹಕಾರ ನೀಡುವುದು ಎಂಬ ಭರವಸೆಯನ್ನು ಎಂ. ಚಂದ್ರಶೇಖರ್‌ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.