ಮಂಗಳೂರು: ಪೊಲೀಸ್ ಕಾನ್ಸ್ಟೆಬಲ್ಗೆ ಜೀವಾವಧಿ ಶಿಕ್ಷೆ
Team Udayavani, Oct 20, 2022, 9:10 PM IST
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೆಬಲ್ ಪ್ರವೀಣ್ ಸಾಲ್ಯಾನ್ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕೊÕ)ದಲ್ಲಿ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ವಿವರ:
ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಎಫ್ಟಿಎಸ್ಸಿ-1 (ಪೋಕೊÕ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿ ಅಪರಾಧಿಗೆ ಐಪಿಸಿ 305ರಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಸೆಕ್ಷನ್ 12ರಡಿ (ಪೋಕೊÕ) 3 ವರ್ಷ ಕಠಿನ ಸಜೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ