ಅಶ್ವತ್ಥ ಮರದ ಗೆಲ್ಲು ಕಡಿದ ಪೊಲೀಸರು!


Team Udayavani, Jul 30, 2018, 11:30 AM IST

30-july-7.jpg

ಪುತ್ತೂರು: ನಗರದ ಐತಿಹಾಸಿಕ ಗಾಂಧಿಕಟ್ಟೆಯ ಬಳಿ ಇರುವ ಅಶ್ವತ್ಥ ಮರ ದಿಂದ ರಸ್ತೆಗೆ ಚಾಚಿಕೊಂಡಿರುವ ಗೆಲ್ಲುಗಳನ್ನು ಕಡಿಯುವ ಕಾರ್ಯವನ್ನು ರವಿವಾರ ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ನಡೆಸಲಾಯಿತು. ಈ ಕಾರ್ಯಕ್ಕೆ ಪುತ್ತೂರು ಎಚ್ಚರ ಬಳಗ ತೀವ್ರ ವಿರೋಧ ವ್ಯಕ್ತಪಡಿಸಿದೆ.

ನಗರದ ವಿದ್ಯುತ್‌ ವ್ಯವಸ್ಥೆಯ ದುರಸ್ತಿವನ್ನು ಅಪರಾಹ್ನದ ಬಳಿಕ ನಡೆಸಲಾಗುತ್ತಿತ್ತು. ಅಶ್ವತ್ಥ ಮರದ ಕೆಳಗೆ ವಿದ್ಯುತ್‌ ತಂತಿಯೂ ಹಾದುಹೋಗಿರುವುದ ರಿಂದ ಸಾರ್ವಜನಿಕ ವ್ಯವಸ್ಥೆಗೆ ತೊಂದರೆಯಾಗುತ್ತಿರುವ ಕಾರಣದಿಂದ ಪೊಲೀಸ್‌ ಇಲಾಖೆಯು ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ ಅಶ್ವತ್ಥ ಮರದ ರಸ್ತೆಗೆ ಗೆಲ್ಲುಗಳನ್ನು ಕಡಿಯುವ ಕೆಲಸ ಆರಂಭಿಸಿತ್ತು. ಈ ಕುರಿತು ಮಾಹಿತಿ ಪಡೆದ ಅಶ್ವತ್ಥ ಮರದ ಸಂರಕ್ಷಣೆಗೆ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಪುತ್ತೂರು ಎಚ್ಚರ ಬಳಗದ ಪುರಂದರ ಭಟ್‌ ಅವರ ತಂಡ ಮರದ ಗೆಲ್ಲುಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲಸ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು. ಅವರ ಒತ್ತಾಯಕ್ಕೆ ಮಣಿದ ಪೊಲೀಸರು ಕಾರ್ಯಸ್ಥಗಿತಗೊಳಿಸಿದರು.

ಪೊಲೀಸರ ಕೆಲಸ ಅಲ್ಲ
ಎಚ್ಚರ ಬಳಗದ ಪುರಂದರ ಭಟ್‌ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪುತ್ತೂರಿಗೆ ಬಂದ ಸಂದರ್ಭ ಅಶ್ವತ್ಥ ಮರದಡಿಯಲ್ಲಿ ವಿಶ್ರಾಂತಿ ಪಡೆದಿದ್ದರು. ಇಂತಹ ಐತಿಹಾಸಿಕ ಮನ್ನಣೆ ಗಳಿಸಿರುವ ಅಶ್ವತ್ಥ ಮರದ ಗೆಲ್ಲುಗಳನ್ನು ಪೊಲೀಸರು ಬಂದು ಏಕಾಏಕಿ ತೆರವುಗೊಳಿಸಿರುವುದು ಸರಿಯಲ್ಲ. ಅರಣ್ಯ ಇಲಾಖೆ, ನಗರಸಭೆಗೂ ಮಾಹಿತಿ ಇಲ್ಲದೆ ತತ್‌ಕ್ಷಣಕ್ಕೆ ಐತಿಹಾಸಿಕ ಅಶ್ವತ್ಥ ಮರದ ಗೆಲ್ಲುಗಳನ್ನು ಕಡಿಯುವ ಅಗತ್ಯವಿಲ್ಲ. ಇದು ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟ ಕೆಲಸವೂ ಅಲ್ಲ. ಇದಕ್ಕೆ ನಮ್ಮ ವಿರೋಧವಿದೆ ಎಂದರು.

ಇನ್ಸ್ಪೆಕ್ಟರ್‌ ಮಹೇಶ್‌ ಪ್ರಸಾದ್‌ ಮಾತನಾಡಿ, ಮರದ ಗೆಲ್ಲುಗಳು ರಸ್ತೆಯಿಂದ ಮುಂದಕ್ಕೆ ಚಾಚಿ ಕಟ್ಟಡದ ಮೇಲ್ಬಾಗಕ್ಕೂ ಹರಡುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮರದ ಗೆಲ್ಲುಗಳನ್ನು ಕಡಿ ಯುವುದು ಅನಿವಾರ್ಯ. ಈ ಕುರಿತು ಸಾರ್ವಜನಿಕರಿಂದಲೂ ದೂರು ಬಂದಿದೆ. ಯಾರ ಆತ್ಮಸಾಕ್ಷಿಗೂ ನೋವುಂಟು ಮಾಡುವ ಉದ್ದೇಶ ನಮಗಿಲ್ಲ. ಸಾರ್ವಜನಿಕ ಸಮಸ್ಯೆಯ ವಿಚಾರವಾಗಿರುವುದರಿಂದ ಮತ್ತು ಪೊಲೀಸ್‌ ಇಲಾಖೆಗೂ ಸಂಬಂಧಪಟ್ಟಿರುವುದರಿಂದ ರಸ್ತೆಗೆ ಚಾಚಿರುವ ಅಪಾಯಕಾರಿ ಗೆಲ್ಲುಗಳನ್ನು ಕಡಿಯಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಇಂದು ಮುಂದುವರಿಕೆ?
ಎಚ್ಚರ ಬಳಗದ ಮುಖಂಡರ ಜತೆ ಇನ್‌ಸ್ಪೆಕ್ಟರ್‌ ಚರ್ಚೆ ನಡೆಸಿದರು. ಸೋಮವಾರ ಬೆಳಗ್ಗೆ 10 ಗಂಟೆಗೆ ಎಚ್ಚರ ಬಳಗದ ಉಪಸ್ಥಿತಿಯೊಂದಿಗೆ ಮರದ ಗೆಲ್ಲುಗಳನ್ನು ಕಡಿಯಲು ವ್ಯವಸ್ಥೆ ಮಾಡುವಂತೆ ಸಂಚಾರ ಪೊಲೀಸರಿಗೆ ಪಿಐ ಮಹೇಶ್‌ ಪ್ರಸಾದ್‌ ಸೂಚಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.