ಕರ್ತವ್ಯ ಲೋಪ: ಪೊಲೀಸ್ ಹೆಡ್ಕಾನ್ಸ್ಟೆಬಲ್ ಅಮಾನತು
Team Udayavani, Mar 3, 2023, 2:28 AM IST
ಮಂಗಳೂರು: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್ಕಾನ್ಸ್ಟೆಬಲ್ ಶ್ರೀಲತಾ ಅವರನ್ನು ಪೊಲೀಸ್ ಆಯುಕ್ತರು ಅಮಾನತುಗೊಳಿಸಿದ್ದಾರೆ.
ನಗರದ ಕ್ಲಾಕ್ ಟವರ್ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು. ಈ ಬಗ್ಗೆ ಫೆ. 23ರಂದು ದೂರು ಬಂದಿತ್ತು. ಈ ಬಗ್ಗೆ ವರದಿ ಪಡೆದುಕೊಳ್ಳಲಾಗಿದ್ದು, ಫೆ. 28ರಂದು ಆಕೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ಆರಂಭಿಸಲಾಗಿದೆ ಎಂದು ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.