ತನ್ನ ಹಸಿವು ನೀಗಿಸಲು ತಂದಿದ್ದ ಆಹಾರವನ್ನು ಹಸಿದವನಿಗೆ ನೀಡಿದ ಪೊಲೀಸರು..!
Team Udayavani, May 10, 2021, 8:12 PM IST
ಪುತ್ತೂರು : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರು ಬಳಿ ಉಣ್ಣಲು ಆಹಾರವಿಲ್ಲದೆ ಬಾವಲಿ ತಿಂದು ಬಿದ್ದಿದ್ದ ಹಣ್ಣುಗಳನ್ನು ಸೇವಿಸುತ್ತಿದ್ದ ಮಡಿಕೇರಿ ನಿವಾಸಿಯೊಬ್ಬರಿಗೆ ಇಬ್ಬರು ಪೊಲೀಸ್ ಸಿಬಂದಿಗಳು ಮನೆಯಿಂದ ತಂದಿದ್ದ ಆಹಾರವನ್ನು ನೀಡಿ ಹಸಿವು ನೀಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಓದಿ : 5 ವರ್ಷಗಳ ಹಿಂದೆ “ಕೋವಿಡ್” ಬಗ್ಗೆ ಚರ್ಚೆ ನಡೆಸಿದ್ದರು ಚೀನಾ ವಿಜ್ಞಾನಿಗಳು..! : ವರದಿ
ಮಡಿಕೇರಿ ರಾಣಿಪೇಟೆ ನಿವಾಸಿ ಕೆಲ ದಿನಗಳ ಹಿಂದೆ ಕೆಲಸಕ್ಕೆಂದು ಮಂಗಳೂರಿಗೆ ಬಂದಿದ್ದರು. ಆದರೆ ಲಾಕ್ ಡೌನ್ ಪರಿಣಾಮ ಕೆಲಸ ಇಲ್ಲದೆ, ಊರಿಗೆ ತೆರಳಲು ಬಸ್ ಇಲ್ಲದೆ ಮಂಗಳೂರಿನಿಂದ ಮಡಿಕೇರಿಗೆ ನಡೆದುಕೊಂಡು ಹೊರಟಿದ್ದರು. ಎರಡು ದಿನಗಳಿಂದ ಆಹಾರ ಸಿಗದೆ ಉಪವಾಸದಿಂದಲೇ ಪಯಣ ಮುಂದುವರಿಸಿದ್ದರು. ಮಾಣಿ- ಮೈಸೂರು ಹೆದ್ದಾರಿಯ ಪುತ್ತೂರು ತಾಲೂಕಿನ ಸಂಟ್ಯಾರು ಬಳಿ ತಲುಪಿದ್ದು ಹಸಿವು ತಡೆದುಕೊಳ್ಳಲಾಗದೆ ಅಲ್ಲಿ ಬಾವಲಿ ಅರ್ಧ ತಿಂದು ಹಾಕಿದ ಮಾವಿನ ಹಣ್ಣು ತಿನ್ನಲು ತೊಡಗಿದ್ದರು. ಈ ವಿಚಾರ ಸಂಟ್ಯಾರು ಚೆಕ್ ಪಾಯಿಂಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪ್ಯ ಠಾಣಾ ಪೊಲೀಸ್ ಸಿಬಂದಿಗಳಾದ ದಯಾನಂದ ಹಾಗೂ ಕಿರಣ್ ಅವರ ಗಮನಕ್ಕೆ ಬಂದಿತು. ತತ್ಕ್ಷಣ ಪೋಲಿಸರು ಮಧ್ಯಾಹ್ನದ ಹಸಿವು ನೀಗಿಸಲು ಮನೆಯಿಂದ ತಂದಿದ್ದ ಊಟವನ್ನು ಆ ವ್ಯಕ್ತಿಗೆ ನೀಡಿ ಹಸಿವು ನೀಗಿಸಿ ಅನಂತರ ವಾಹನವೊಂದರಲ್ಲಿ ಮಡಿಕೇರಿಗೆ ಕಳುಹಿಸಿದ್ದಾರೆ.
ಲಾಕ್ ಡೌನ್ ಸಂಕಷ್ಟದ ಕರ್ತವ್ಯದ ನಡುವೆ ಪೊಲೀಸರಿಬ್ಬರ ಮಾನವೀಯತೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಸಿಬಂದಿಗಳ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹೃಷಿಕೇಶ್ ಸೋನಾವಣೆ ಮೆಚ್ಚುಗೆ ಸೂಚಿಸಿದ್ದಾರೆ.
ಓದಿ : ವಿಶೇಷ ಅಧಿವೇಶನ; ವಿಶ್ವಾಸ ಮತಯಾಚನೆಯಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾಗೆ ಸೋಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ