ಸೋಲಾರ್‌ ಬಳಕೆಯತ್ತ ಪಾಲಿಕೆ, ಪುರಭವನ

ಇಂಧನ ಣ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಉತ್ತೇಜನ

Team Udayavani, Feb 26, 2020, 5:09 AM IST

majji-30

ಮಹಾನಗರ: ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಹಾಗೂ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಸೋಲಾರ್‌ ಉತ್ಪಾದನೆ ನಡೆಯಲಿದೆ. ಆ ಮೂಲಕ, ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಉತ್ತೇಜನ ನೀಡಲಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ರೂಫ್‌ಟಾಪ್‌ ಸೋಲಾರ್‌ ಪರಿಕಲ್ಪನೆಯಡಿಯಲ್ಲಿ ಸರಕಾರಿ ಕಟ್ಟಡಗಳಿಗೆ ಪಿಪಿಪಿ ಮಾದರಿ ಯಲ್ಲಿ ಸೋಲಾರ್‌ ಅಳವಡಿಕೆ ಮಾಡಲು ಉದ್ದೇಶಿಸಲಾಗಿದ್ದು, ಇದರಂತೆ ನಗರದ ಪುರಭವನ, ಮಹಾನಗರ ಪಾಲಿಕೆ ಯಲ್ಲಿ ಸೋಲಾರ್‌ ಅಳವಡಿಕೆ ಸದ್ಯ ನಡೆಯುತ್ತಿದೆ.

ನಗರದ ಶಿವಬಾಗ್‌ನಲ್ಲಿರುವ ಇಎಸ್‌ಐ ಆಸ್ಪತ್ರೆ, ಹೊಗೆಬಜಾರ್‌ನ ಕೆಎಫ್‌ಡಿಸಿ ಯಲ್ಲಿ ಈಗಾಗಲೇ ಸೋಲಾರ್‌ ಅಳವಡಿಕೆ ಮಾಡಲಾಗಿದ್ದು, ಕಾರ್ಯ ನಿರ್ವಹಿಸುತ್ತಿದೆ. ಇದೀಗ ಮುಂದುವರಿದ ಭಾಗವೆಂಬಂತೆ ಪಾಲಿಕೆ, ಪುರಭವನ, ಅದರ ಪಕ್ಕದ ವಾಣಿಜ್ಯ ಕಟ್ಟಡಕ್ಕೆ ಸೋಲಾರ್‌ ಅಳವಡಿಕೆ ನಡೆಸಲಾಗುತ್ತಿದೆ.

ಒಟ್ಟು 1,220 ಕಿಲೋ ವ್ಯಾಟ್‌ ಸಾಮರ್ಥ್ಯದ 7.08 ಕೋ.ರೂ. ವೆಚ್ಚದಲ್ಲಿ ಈ ಎಲ್ಲ ಯೋಜನೆಗಳನ್ನು ಕೈಗೆತ್ತಿಕೊ ಳ್ಳಲಾಗಿದೆ. ಸೋಲಾರ್‌ ಅಳವಡಿಕೆ ಆದ ಬಳಿಕ ಅದರ ವಿದ್ಯುತ್‌ ಅನ್ನು ಸಂಬಂಧಿತ ಕಟ್ಟಡದವರೇ ಬಳಸಿಕೊಂಡು ಉಳಿದದ್ದನ್ನು ಮೆಸ್ಕಾಂ ಗ್ರಿಡ್‌ಗೆ ಕಳುಹಿಸಲಾಗುತ್ತದೆ.

ಅನುಷ್ಠಾನ-ನಿರ್ವಹಣೆ ಹೇಗೆ ?
ಪಿಪಿಪಿ ಮಾದರಿಯಲ್ಲಿ ಸರಕಾರಿ ಕಟ್ಟಡಕ್ಕೆ ಸೋಲಾರ್‌ ಅನ್ನು ಖಾಸಗಿ ಸಂಸ್ಥೆ/ಕಂಪೆನಿಯವರು ಅಳವಡಿಕೆ ಮಾಡುತ್ತಾರೆ. ಈ ಸಂದರ್ಭ ಸ್ಮಾರ್ಟ್‌ ಸಿಟಿ ಅಥವಾ ಪಾಲಿಕೆ ಬಂಡವಾಳ ಹಾಕುವುದಿಲ್ಲ. ಇದರ ನಿರ್ವಹಣೆ ಜವಾಬ್ದಾರಿ ಆ ಕಂಪೆನಿಗೆ 25 ವರ್ಷಗಳ ಕಾಲಕ್ಕೆ ನೀಡಲಾಗುತ್ತದೆ. ಸೋಲಾರ್‌ನಲ್ಲಿ ವಿದ್ಯುತ್‌ ಉತ್ಪಾದನೆ ಆದ ಬಳಿಕ ಅದನ್ನು ಸಂಬಂಧಪಟ್ಟ ಕಟ್ಟಡದ (ಪಾಲಿಕೆ, ಪುರಭವನ)ಬಳಕೆಗೆ ನೀಡಲಾಗುತ್ತದೆ. ತಿಂಗಳಿಗೆ ಅವರು ಬಳಸಿದ ಒಟ್ಟು ವಿದ್ಯುತ್‌ಗೆ ಕಂಪೆನಿ ಬಿಲ್‌ ನೀಡುತ್ತದೆ. ಅದರಲ್ಲಿ ಶೇ.40ರಷ್ಟು ರಿಯಾಯಿತಿಯನ್ನು ಕಂಪೆನಿ ಪ್ರಕಟಿಸಿ ಉಳಿದ ಶೇ.60ರಷ್ಟನ್ನು ಮಾತ್ರ ಸಂಬಂಧಪಟ್ಟ ಕಟ್ಟಡದವರು ಪಾವತಿಸಬೇಕಾಗುತ್ತದೆ. ಹೀಗಾಗಿ ಸರಕಾರಿ ಕಟ್ಟಡದ ವಿದ್ಯುತ್‌ ಬಿಲ್‌ನಲ್ಲಿ ಉಳಿತಾಯ ಮಾಡಬಹುದು.

ಎಂಆರ್‌ಪಿಎಲ್‌, ಎನ್‌ಎಂಪಿಟಿಇ-ಸೋಲಾರ್‌ ಯಶಸ್ವಿ
ಸೋಲಾರ್‌ ಪವರ್‌ ಅನ್ನು ಈಗಾಗಲೇ ಪ್ರತಿಷ್ಠಿತ ಸಂಸ್ಥೆಗಳು ಮಂಗಳೂರಿನಲ್ಲಿ ಮಾಡಿಕೊಂಡಿವೆ. ತಮ್ಮದೇ ಕಂಪೆನಿಯ ವೆಚ್ಚದಲ್ಲಿ ಸೋಲಾರ್‌ ಅಳವಡಿಸಿ ಈಗಾಗಲೇ ಹಲವು ಕಂಪೆನಿಗಳು ಸಕ್ಸಸ್‌ ಆಗಿವೆ. ಈ ಪೈಕಿ ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ (ಎಂಆರ್‌ಪಿಎಲ್‌)ಸಂಸ್ಥೆಯು ಪ್ರಸ್ತುತ ಸೋಲಾರ್‌ ಉತ್ಪಾದನೆ ಮೂಲಕ ಸಾಧನೆ ತೋರಿದೆ. ವಾರ್ಷಿಕ 88 ಲಕ್ಷ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯವಿರುವ ಸೋಲಾರ್‌ ಘಟಕವನ್ನು ಕುತ್ತೆತ್ತೂರಿನಲ್ಲಿ ನಿರ್ಮಿಸಿದೆ. 27 ಕೋ.ರೂ. ವೆಚ್ಚದಲ್ಲಿ ಸ್ಥಾಪನೆಯಾಗಿರುವ 6,063 ಮೆ.ವ್ಯಾಟ್‌ ಸಾಮರ್ಥ್ಯದ ಈ ಘಟಕ 24,000 ಯೂನಿಟ್‌ ವಿದ್ಯುತ್‌ ಉತ್ಪಾದಿ ಸುವ ಗುರಿ ಹೊಂದಿದೆ.

ನವಮಂಗಳೂರು ಬಂದರು (ಎನ್‌ಎಂಪಿಟಿ) ಕೂಡ ಒಟ್ಟು ನಿರ್ವಹಣೆಗಾಗಿ ಸೋಲಾರ್‌ ಮೂಲಕವೇ 20,000 ಯೂನಿಟ್‌ ವಿದ್ಯುತ್‌ ಉತ್ಪಾದಿಸಲಾಗು ತ್ತಿದೆ. ಕೂಳೂರಿನಲ್ಲಿರುವ ಕುದುರೆಮುಖ ಕಂಪೆನಿಯ ಬ್ಲಾಸ್ಟ್‌ ಫರ್ನೆಸ್‌ ಘಟಕದ ಆವರಣದಲ್ಲಿ 6.7 ಕೋ.ರೂ. ವೆಚ್ಚದಲ್ಲಿ 1.3 ಮೆಗಾವ್ಯಾಟ್‌ ಸಾಮರ್ಥ್ಯದ ಸೌರ ವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ.

ಪಿಲಿಕುಳ-ಜಿಲ್ಲಾ ಪಂಚಾಯತ್‌ಗೂ ಸೋಲಾರ್‌
ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಅವಕಾಶಗಳನ್ನು ತೆರೆದಿಟ್ಟ ಪಿಲಿಕುಳದ ಉದ್ಯಾನವನಕ್ಕೂ ಸೋಲಾರ್‌ ಅಳವಡಿಕೆಗೆ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಉದ್ದೇಶಿಸಲಾಗಿದೆ. ಈ ಮೂಲಕ ಪಿಲಿಕುಳದ ಒಟ್ಟು ವಿದ್ಯುತ್‌ ಬಳಕೆ ಎಷ್ಟಿದೆ, ಎಷ್ಟು ಪ್ರಮಾಣದ ಸೋಲಾರ್‌ ಅಗತ್ಯವಿದೆ ಎಂಬ ವಿಚಾರಗಳ ಬಗ್ಗೆ ಅಧ್ಯಯನ ಸದ್ಯ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಸೋಲಾರ್‌ ಅಳವಡಿಕೆ ನಡೆಯಲಿದೆ. ಜತೆಗೆ, ಉರ್ವಸ್ಟೋರ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ಗೂ ಸೋಲಾರ್‌ ಪವರ್‌ ದೊರೆಯಲಿದೆ. ಈ ಕಟ್ಟಡದ ಒಟ್ಟು ನಿರ್ವಹಣೆಗೆ ತಕ್ಕುದಾದ ಪ್ರಮಾಣದಲ್ಲಿ ಸೋಲಾರ್‌ ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಕುರಿತಾದ ಅಂತಿಮ ತೀರ್ಮಾನವಾಗಲಿದೆ.

ಸರಕಾರಿ ಕಟ್ಟಡಗಳಿಗೆ ಸೋಲಾರ್‌
ಸರಕಾರಿ ಕಟ್ಟಡಗಳಿಗೆ ರೂಫ್‌ಟಾಪ್‌ ಸೋಲಾರ್‌ ಅಳವಡಿಕೆಗೆ ಉದ್ದೇಶಿಸಲಾಗಿದ್ದು, ಪಾಲಿಕೆ, ಪುರಭವನಕ್ಕೆ ಅಳವಡಿಕೆ ಮಾಡುವ ಕಾರ್ಯ ನಡೆಯುತ್ತಿದೆ. ಆ ಬಳಿಕ ಪಿಲಿಕುಳ ಹಾಗೂ ದ.ಕ. ಜಿಲ್ಲಾ ಪಂಚಾಯತ್‌ಗೂ ಸೋಲಾರ್‌ ಅಳವಡಿಕೆ ಮಾಡಲಾಗುತ್ತದೆ.
 - ಮೊಹಮ್ಮದ್‌ ನಝೀರ್‌, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ಸಿಟಿ, ಮಂಗಳೂರು

-  ದಿನೇಶ್‌ ಇರಾ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.