ಪೂಂಜ ದೇಗುಲದಿಂದ ಕಳವು
Team Udayavani, Sep 4, 2017, 9:10 AM IST
ವೇಣೂರು: ಆರಂಬೋಡಿಯ ಪೂಂಜ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ತಡರಾತ್ರಿ ಕಳ್ಳರು ನುಗ್ಗಿದ್ದು, ಕಾಣಿಕೆ ಡಬ್ಬಿಯಲ್ಲಿದ್ದ ಹಣ ದೋಚಿದ್ದಾರೆ. ರವಿವಾರ ಬೆಳಿಗ್ಗೆ ದೇವಸ್ಥಾನದ ಅರ್ಚಕ ಕೃಷ್ಣಪ್ರಸಾದ್ ಅವರು ಪೂಜೆಗೆಂದು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ 7 ಗಂಟೆಗೆ ಪೂಜೆ ಮುಗಿಸಿ ಅರ್ಚಕರು ಬಾಗಿಲು ಹಾಕಿ ತೆರಳಿದ್ದು, ಬೆಳಗ್ಗೆ ಅರ್ಚಕರು ಬಂದು ಗಮನಿಸಿದಾಗ ಬಾಗಿಲಿನಲ್ಲಿ ಬೀಗ ಇರಲಿಲ್ಲ. ಬಾಗಿಲಿನ ಚಿಲಕ ಹಾಕಿದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ. ಅರ್ಚಕರು ಒಳಗೆ ಪ್ರವೇಶಿಸಿದಾಗ ಗರ್ಭಗುಡಿಯ ಮುಂಭಾಗದ ಬƒಹದಾಕಾರದ ಕಾಣಿಕೆ ಹುಂಡಿಯ ಬೀಗ ಮುರಿದು ಹಣವನ್ನು ಕದ್ದೊಯ್ದಿರುವುದು ಕಂಡು ಬಂದಿದೆ. ಸುಮಾರು 4 ಸಾವಿರರೂ. ಚಿಲ್ಲರೆ ಹಣ ಹುಂಡಿಯಲ್ಲೇ ಇದ್ದು, ಕೇವಲ ನೋಟು ಹಾಗೂ ಹರಕೆ ರೂಪದಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದಾರೆಂದು ತಿಳಿದು ಬಂದಿದೆ. ಸುಮಾರು ಐದಾರು ವರ್ಷಗಳ ಹಿಂದೆ ಸ್ಥಳೀಯ ಕಳ್ಳರೇ ಈ ದೇವಸ್ಥಾನಕ್ಕೆ ನುಗ್ಗಿದ್ದು, ಬಳಿಕ ಪತ್ತೆಯಾಗಿದ್ದರು. ದೇವಸ್ಥಾನದ ಸುತ್ತ 8 ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ತಿರುಗಿಸಿ ಕಳ್ಳರುಕಳವು ಮಾಡಿದ್ದಾರೆ. ಎರಡು ಸಿಸಿಟಿವಿಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಾಣಿಕೆ ಡಬ್ಬಿಯಿಂದ ಸುಮಾರು 7 ಸಾವಿರರೂ. ಹಾಗೂ 8 ಸಾವಿರ ರೂ. ಮೌಲ್ಯದ ಸಿಸಿಟಿವಿ ಕದ್ದೊಯ್ದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು