SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ


Team Udayavani, Jun 2, 2023, 11:14 PM IST

1-sddasd

ಮೂಡುಬಿದಿರೆ: ಎಸ್‌ಎನ್‌ಎಂ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆಯವರು ನಾದುರಸ್ತಿಯಾಗಿರುವ , ತೀರಾ ಬಡವರ ಮೂರು ಮನೆಗಳಿಗೆ ತಮ್ಮ ಸಾಮರ್ಥ್ಯಕ್ಕನುಗುಣವಾಗಿ ಕಾಯಕಲ್ಪ ನೀಡುವ ಮೂಲಕ ರಾ.ಸೇ.ಯೋ. ಆಶಯಗಳ ಒಂದಂಶವನ್ನು ಕಾರ್ಯರೂಪಕ್ಕೆ ತಂದು ಬಡವರ ಕಷ್ಟಕ್ಕೆ ಒದಗಿಬಂದಿದ್ದಾರೆ.

ಎನ್ನೆಸೆಸ್ ಘಟಕದವರು, ಗ್ರಾಮ ಪಂಚಾಯತ್‌ನವರು ಪರಿಶೀಲಿಸಿ ತೋರಿಸಿರುವಂತೆ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆಯ ಕುಲ್ಲಂಗಲ್ಲು ವೀರಪ್ಪ ಮೂಲ್ಯ ಹಾಗೂ ಕುಂಗೂರು ಚಾವಡಿ ಮನೆ ರಸ್ತೆಯ ವಾಸು ಹಾಗೂ ಸುನಂದಾ ಇವರ ಮನೆಗಳು ತೀರಾ ಶಿಥಿಲವಾಗಿದ್ದು ಮಳೆಗಾಲದಲ್ಲಿ ಸೋರುತ್ತಿರುವುದನ್ನು ಗಮನಿಸಿದರು.

ಶುಕ್ರವಾರ ಈ ಮನೆಗಳ ಮಾಡಿಗೆ ಟಾರ್ಪಲ್ ಹೊದೆಸಿದರು. ಸಣ್ಣ ಪುಟ್ಟ ವಿದ್ಯುತ್ ಉಪಕರಣದ ದುರಸ್ತಿ ಗೈದರು, ಮನೆಯ ಸುತ್ತಮುತ್ತಲಿನ ಆವರಣ ಸ್ವಚ್ಛಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲ ಜೆ. ಜೆ. ಪಿಂಟೋ ಹಾಗೂ ಎನ್ನೆಸೆಸ್ ಘಟಕ ಕಾರ್ಯಕ್ರಮಾಧಿಕಾರಿಗಳಾದ ರಾಮ್ ಪ್ರಸಾದ್ ಹಾಗೂ ಗೋಪಾಲಕೃಷ್ಣ ಇವರ ಮಾರ್ಗದರ್ಶನದಲ್ಲಿ , ವಿದ್ಯಾರ್ಥಿ ನಾಯಕರಾದ ಪ್ರಖ್ಯಾತ್ , ರಾಯನ್, ರಿತೇಶ್, ಪ್ರೀತಿ, ಧನುಶ್ರೀ ನೇತೃತ್ವದಲ್ಲಿ ೧೫ ಮಂದಿ ಎನ್ನೆಸೆಸ್ ವಿದ್ಯಾರ್ಥಿಗಳು ೩ ಮನೆಗಳ ಸೇವಾ ಕಾರ್ಯದಲ್ಲಿ ಬಹಳ ಮುತುವರ್ಜಿಯಿಂದ ತೊಡಗಿಸಿಕೊಂಡರು. ಸಾಮಗ್ರಿಗಳಿಗೆ ಸುಮಾರು ೧೩,೦೦೦ ರೂ. ವೆಚ್ಚವಾಗಿದೆ.

ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸದಸ್ಯೆ ಸುಮಾ ಭಟ್ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಪ್ರವೀಣ್ ಶೆಟ್ಟಿ ಅವರು ದಿನದ ಕಾರ್ಯಕಲಾಪದಲ್ಲಿ ಉಪಾಹಾರ, ಊಟೋಪಚಾರದ ವ್ಯವಸ್ಥೆ ಮಾಡಿದ್ದರು. ವಿದ್ಯಾರ್ಥಿಗಳ ಸೇವಾಕಾರ್ಯದಿಂದ ಫಲಾನುಭವಿಗಳ ಮನಸ್ಸು ತುಂಬಿ ಬಂದಿದೆ; ಆವರೆಲ್ಲ ಈ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸೂಚಿಸಿದ್ದಾರೆ.

ವೀರಪ್ಪ ಮೂಲ್ಯರಿಗೆ ಜಾಗದ ಹಕ್ಕು ಪತ್ರ ಇಲ್ಲ , ತಕರಾರು ಇದೆ. ಪತಿ, ಪತ್ನಿ ಮಾತ್ರ ಇದ್ದಾರೆ, ಬಿಪಿಎಲ್ ಕಾರ್ಡು ಇದೆ, ವೃದ್ಧಾಪ್ಯ ವೇತನ ಬರುತ್ತಿದೆ. ಬೇರೆ ಆದಾಯ ಮೂಲಗಳಿಲ್ಲ.

ವಾಸು ಅವರೂ ಬಿಪಿಎಲ್ ಕಾರ್ಡು ಹೊಂದಿರುವವರು. ಅಪರೂಪಕ್ಕೆ ಕೂಲಿ ಕೆಲಸಕ್ಕೆ ಹೋಗುವ ಸ್ಥಿತಿ ಇದೆ. ಪತ್ನಿ ಬೀಡಿ ಕಟ್ಟುತ್ತಾರೆ, ಪಿಯುಸಿ ಮತ್ತು ಐದನೇ ತರಗತಿಯಲ್ಲಿ ಓದುವ ಮಕ್ಕಳಿದ್ದಾರೆ. ತಾಯಿಗೆ ಅಂಗವಿಕಲರ ವೇತನ ಬರುತ್ತಿದೆ.

ಮೂರನೇ ಮನೆ ಕುಂಗೂರು ಗ್ರಾಮದ ೫ ಸೆಂಟ್ಸ್ ಕಾಲನಿಯ ಸುನಂದಾ ಅವರದ್ದು. ಸುನಂದಾ, ಅವರ ತಮ್ಮ ಸಂಜೀವ ಇಬ್ಬರು ಮಕ್ಕಳಿದ್ದಾರೆ. ಪುತ್ರಿ ಗೇರುಬೀಜ ಕಾರ್ಖಾನೆಗೆ, ಪುತ್ರ ಶಾಲೆಗೆ ಹೋಗುತ್ತಿದ್ದು ಸಂಜೀವ ಕೂಲಿ ಕೆಲಸ ಮಾಡುತ್ತಾರೆ. ಈ ಮನೆಗೆ ಹಕ್ಕು ಪತ್ರ ಇಲ್ಲ, ಹಾಗಾಗಿ ಪಂಚಾಯತ್ ಸೌಲಭ್ಯಗಳಿಲ್ಲ. ಸಣ್ಣ ಗುಡಿಸಲು ಇದೆ, ಸೂರು ಸೋರುತ್ತಲಿದೆ.

ಟಾಪ್ ನ್ಯೂಸ್

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.