ಬೋಳಾರದ ಲೀವೆಲ್‌ ಪರಿಶೀಲನೆಗೆ ಪುರಾತತ್ವ ಇಲಾಖೆ ತಂಡ ಆಗಮನ ಸಾಧ್ಯತೆ


Team Udayavani, Feb 17, 2020, 5:16 AM IST

1602MLR10

ಮಹಾನಗರ: ಹಲವಾರು ದಶಕಗಳ ಹಿಂದೆ ಮುಚ್ಚಿದ್ದ ಶತಮಾನಗಳ ಇತಿಹಾಸವಿರುವ ಬಾವಿಯೊಂದು ಅಕ್ಟೋಬರ್‌ನಲ್ಲಿ ದಿಢೀರ್‌ ಆಗಿ ಪ್ರತ್ಯಕ್ಷಗೊಂಡು ಸುದ್ದಿಯಾಗಿದ್ದ ನಗರದ ಬೋಳಾರ ಲೀವೆಲ್‌ನ ಪರಿಶೀಲನೆಗಾಗಿ ಪುರಾತತ್ವ ಇಲಾಖೆಯ ತಜ್ಞರ ತಂಡವೊಂದು ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.

ಬೋಳಾರದಲ್ಲಿ ಪತ್ತೆಯಾದ ಬ್ರಿಟೀಷರ ಕಾಲದ ಬಾವಿಯ ಕುರಿತು ಉನ್ನತ ಮಟ್ಟದ ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಪುರಾತತ್ವ ಇಲಾಖೆಗೆ ಪತ್ರ ಬರೆದಿದ್ದರು. ಜತೆಗೆ, ಮಂಗಳೂರಿನ ಶ್ರೀಮಂತಿ ಬಾಯಿ ಮೆಮೋರಿಯಲ್‌ ಸರಕಾರಿ ಮ್ಯೂಸಿಯಂನ ಮೇಲ್ವಿಚಾರಕರು ಕೂಡ ವಿವರವಾದ ವರದಿಯನ್ನು ಪುರಾತತ್ವ ಇಲಾಖೆಗೆ ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ಇದೀಗ ಪುರಾತತ್ವ ಇಲಾಖೆಯ ಮೈಸೂರಿನ ತಜ್ಞರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಾರಂಭದಲ್ಲಿ ಪುರಾತತ್ವ ಇಲಾಖೆಯ ಎಂಜಿನಿಯರ್‌ಗಳ ತಂಡ ಆಗಮಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.

ಬಾವಿ ಬ್ರಿಟಿಷರ ಕಾಲಕ್ಕೆ ಸೇರಿದ್ದಾಗಿದೆ. ಆದರೆ ಈ ಬಗ್ಗೆ ಯಾವುದೇ ಲಿಖೀತ ಸಾಕ್ಷಿಗಳಿಲ್ಲ. ಈ ಬಗ್ಗೆ ಪೂರ್ಣ ಅಧ್ಯಯನ ಅಗತ್ಯವಿದೆ ಎಂದು ಸರಕಾರಿ ಮ್ಯೂಸಿಯಂನ ಮೇಲ್ವಿಚಾರಕರು ಸಿದ್ಧಪಡಿಸಿದ ವರದಿಯಲ್ಲಿ ಉಲ್ಲೇಖೀಸಿದ್ದಾರೆ ಎಂದು ತಿಳಿದುಬಂದಿದೆ.

ಬ್ರಿಟಿಷರ ಆಡಳಿತ ಸಮಯದಲ್ಲಿ ಬೋಳಾರ ಜಂಕ್ಷನ್‌ನಲ್ಲಿ ಬಾವಿ ನಿರ್ಮಿಸಲಾಗಿತ್ತು. ಬ್ರಿಟಿಷ್‌ ಅಧಿಕಾರಿ ಲೀ ಅವರು ಇದನ್ನು ನಿರ್ಮಿಸಿದ್ದರು ಎನ್ನಲಾಗುತ್ತಿದೆ. ಇದಕ್ಕಾಗಿ ಈ ಪ್ರದೇಶಕ್ಕೆ ಲೀ ವೆಲ್‌ ಎಂಬ ಹೆಸರು ಬಂದಿತ್ತು. ಆದರೆ ಹಲವು ವರ್ಷಗಳ ಅನಂತರ ಈ ಬಾವಿಯನ್ನು ಕಸ ಹಾಗೂ ಮಣ್ಣು ಹಾಕಿ ಮುಚ್ಚಲಾಗಿತ್ತು. ಕಾಲಾನಂತರ ಇದೇ ಜಾಗದಲ್ಲಿ ಡಾಮರು ರಸ್ತೆ ನಿರ್ಮಿಸಲಾಗಿತ್ತು. ಹಾಗೂ ಪಕ್ಕದಲ್ಲಿ ಬಸ್‌ನಿಲ್ದಾಣವನ್ನು ಹಲವು ವರ್ಷದ ಹಿಂದೆ ಮಂಗಳೂರು ಪಾಲಿಕೆ ನಿರ್ಮಿಸಿತ್ತು ಎಂದು ಸ್ಥಳೀಯರು ನೆನಪು ಮಾಡುತ್ತಾರೆ.

ಆಗಿದ್ದೇನು?
ಬೋಳಾರ ಮಾರಿಗುಡಿ ದೇವಸ್ಥಾನದ ಸಮೀಪದ ಬೋಳಾರ ಜಂಕ್ಷನ್‌ನಲ್ಲಿ ಅಕ್ಟೋಬರ್‌ 23ರಂದು ರಸ್ತೆ ಕಾಂಕ್ರೀಟ್‌ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ದಿಢೀರಾಗಿ ಬಾವಿಯೊಂದು ಪ್ರತ್ಯಕ್ಷಗೊಂಡಿತ್ತು. ಬಾವಿಯಿರುವ ಜಾಗದ ಒಂದು ಪಾರ್ಶ್ವದ ಕೊಂಚ ಭೂಮಿ ಒಳಕ್ಕೆ ಕುಸಿದ ಪರಿಣಾಮ ದಶಕಗಳ ಹಿಂದೆ ಇಲ್ಲಿ ಇತ್ತು ಎನ್ನಲಾದ ಬಾವಿಯ ಬಗ್ಗೆ ಎಲ್ಲೆಡೆ ಮಾತು ಕೇಳಿಬಂದು ಕುತೂಹಲಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.