ಫೈನಾನ್ಸ್ ಮಾಲಕ ಪ್ರಭಾಕರ ಆಚಾರ್ಯ ಮೃತದೇಹ ಪತ್ತೆ : ಆತ್ಮಹತ್ಯೆ ಶಂಕೆ
Team Udayavani, Aug 28, 2019, 9:17 AM IST
ಉಳ್ಳಾಲ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬೊಳಿಯಾರ್ ಪ್ರಭಾ ಜ್ಯುವೆಲ್ಲರ್ಸ್ ಹಾಗೂ ಪ್ರಭಾ ಫೈನಾನ್ಸ್ ಮಾಲಕರಾಗಿದ್ದ ಪ್ರಭಾಕರ ಆಚಾರ್ಯ ಅವರ ಮೃತದೇಹ ಸುರತ್ಕಲ್ ಸಮೀಪದ ಮುಕ್ಕ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
57 ವರ್ಷ ಪ್ರಾಯದ ಪ್ರಭಾಕರ ಆಚಾರ್ಯ ಅವರು ಬೋಳಿಯಾರ್ ನಲ್ಲಿ ಪ್ರಭಾ ಜುವೆಲರ್ಸ್ ಹಾಗೂ ಪ್ರಭಾ ಫೈನಾನ್ಸ್ ಗಳನ್ನು ನಡೆಸುತ್ತಿದ್ದರು. ಪ್ರಭಾಕರ್ ಅವರು ಕಳೆದ ಹಲವಾರು ವರ್ಷಗಳಿಂದ ತನ್ನ ಜುವೆಲರಿಯಲ್ಲೇ ಫೈನಾನ್ಸ್ ನಡೆಸುತ್ತಿದ್ದರು.
ಕಳೆದ ರವಿವಾರ ಮಧ್ಯಾಹ್ನ ಔಷಧ ತರಲೆಂದು ತನ್ನ ಪತ್ನಿಯಲ್ಲಿ ತಿಳಿಸಿ ಮನೆಯಿಂದ ಹೊರಟಿದ್ದ ಪ್ರಭಾಕರ ಆಚಾರ್ಯ ಅವರು ಬಳಿಕ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿತ್ತು.
ಪ್ರಭಾಕರ ಆಚಾರ್ಯ ಅವರು ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಕೊಣಾಜೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಇವರ ಕಾರು ಅನಾಥ ಸ್ಥಿತಿಯಲ್ಲಿ ಮುಡಿಪು ಬಳಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ