ಕಲ್ಲಡ್ಕ: ಪ್ರದೀಪ್ತ ಸಾಂಸ್ಕೃತಿಕ ಸಂಘ ಉದ್ಘಾಟನೆ
Team Udayavani, Jul 28, 2017, 9:40 AM IST
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2017-18ನೇ ಸಾಲಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ಪುತ್ತೂರು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಡಾ| ಶೋಭಿತಾ ಸತೀಶ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಈ ವಿದ್ಯಾಸಂಸ್ಥೆಯು ಭಾರತೀಯ ಸಂಸ್ಕಾರದ ತಳಹದಿ ಹೊಂದಿದೆ. ಪ್ರತಿ ವಿದ್ಯಾರ್ಥಿಯು ವಿದ್ಯಾಭ್ಯಾಸದ ಜತೆಗೆ ಸಮಾಜದ ಎಲ್ಲ ಕಾರ್ಯಕ್ರಮಗಳ ಅನುಭವ ಪಡೆಯಬೇಕು ಎಂಬುದಕ್ಕಾಗಿ ಸಾಂಸ್ಕೃತಿಕ ಸಂಘದ ಚಟುವಟಿಕೆಗಳು ಇವೆ ಎಂದವರು ತಿಳಿಸಿದರು.
ವೇದಿಕೆಯಲ್ಲಿ ನ್ಯಾಯವಾದಿಗಳು ಮತ್ತು ಶ್ರೀರಾಮ ಆಡಳಿತ ಮಂಡಳಿಯ ಸದಸ್ಯೆ ಆಶಾಪ್ರಸಾದ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರಕಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ಒಟ್ಟು 137 ವಿದ್ಯಾರ್ಥಿಗಳು ಭಾರತ ವೈಭವ ವಿಷಯದ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸಂಘದ ನಿರ್ದೇಶಕಿ ಜಯಲಕ್ಷ್ಮೀ ಸ್ವಾಗತಿಸಿ, ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಿಲ್ಪಾ ವಂದಿಸಿದರು. ವಾಣಿಜ್ಯ ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.