‘ಕೈ’ಹಿಡಿದ ರಸಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕುಳಾಯಿ
Team Udayavani, Mar 13, 2018, 11:49 AM IST
ಮಂಗಳೂರು: ಶಾಸಕರ ನಿವಾಸದಲ್ಲಿ ಸಾರ್ವಜನಿಕವಾಗಿ ರಸಿಕತನ ತೋರಿದ ಕಾಂಗ್ರೆಸ್ ಮುಖಂಡನೊಬ್ಬನಿಗೆ ಮಹಿಳಾ ಕಾರ್ಪೋರೇಟರ್ ಹಿಗ್ಗಾಮುಗ್ಗಾ ಥಳಿಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.
ಮಂಗಳೂರು ಉತ್ತರ ಶಾಸಕ ಮೊಯಿದ್ದೀನ್ ಬಾವಾ ಅವರ ಕಚೇರಿಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿರುವುದಾಗಿ ವರದಿಯಾಗಿದ್ದು , ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಎಂಬಾತ ಕಾರ್ಪೋರೇಟರ್ ಕೈ ಹಿಡಿದು ಥಳಿತಕ್ಕೊಳಗಾಗಿದ್ದಾನೆ ಎಂದು ತಿಳಿದು ಬಂದಿದೆ.
ಪ್ರತಿಭಾ ಅವರು ಕೈ ಹಿಡಿದ ಕೂಡಲೇ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದ್ದು , ಸತ್ತಾರ್ಗೆ ಅಟ್ಟಾಡಿಸಿಕೊಂಡು ಮನೆಯಿಂದ ಹೊರಗೆಳೆದು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ.
ಅಬ್ದುಲ್ ಸತ್ತಾರ್ ವಿರುದ್ಧ ಮಹಿಳೆಯರಿಗೆ ಕಿರುಕುಳ ನೀಡಿದ ಹಲವು ಆರೋಪಗಳಿದ್ದು, ಈ ಹಿಂದೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಕೈಯನ್ನೂ ಕಡಿದಿದ್ದರು ಎಂದು ಪ್ರತಿಭಾ ಆರೋಪ ಮಾಡಿದ್ದಾರೆ.
ಏಳಿಗೆ ಸಹಿಸದೆ ಸುಳ್ಳು ಹೇಳುತ್ತಿದ್ದಾರೆ:
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದು ಸುರತ್ಕಲ್ ಪರಿಸರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.ನನ್ನ ಏಳಿಗೆ ಸಹಿಸದ ನನ್ನ ವಿರೋಧಿಗಳು ನಾನು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಎಂದು ನನಗೆ ಧರ್ಮದೇಟು ನೀಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಸತ್ಯಕ್ಕೆ ದೂರವಾದ ಮಾತು. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಯಾವಾಗಲೂ ನಾನು ಚಿರಋಣಿಯಾಗಿರುತ್ತೇನೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಕೃಷ್ಣಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ