ಹಲವರ ಜೀವ ಉಳಿಸಿದ ಆಪತ್ಭಾಂಧವ !


Team Udayavani, Jul 28, 2022, 5:55 AM IST

ಹಲವರ ಜೀವ ಉಳಿಸಿದ ಆಪತ್ಭಾಂಧವ !

ಪುತ್ತೂರು: ಹಲವರ ಜೀವ ಉಳಿಸಿದ ಆಪತ್ಭಾಂಧವ ಈ ಪ್ರವೀಣ.ಪಾರ್ಥಿವ ಶರೀರದ ಯಾತ್ರೆ ಸಾಗುವಲ್ಲೆಲ್ಲ ಕೇಳಿಬಂದ ಒಂದು ಸಾಮಾನ್ಯ ಮಾತೆಂದರೆ “ಈ ಪ್ರವೀಣ ಹಲವರ ಜೀವವನ್ನು ಉಳಿಸಿದ್ದ ಆಪತ್ಭಾಂಧವ ‘ ಎಂಬುದು.

ಪ್ರವೀಣ ಅವರ ಇತಿಹಾಸವನ್ನು ನೋಡಿದರೆ ಅಪರಾಧ ಪ್ರಕರಣದ ಯಾವುದೇ ಚಹರೆ ಇರಲಿಲ್ಲ. ತಮ್ಮ ಸಮುದಾಯದ ಸಂಘಟನೆ, ಊರಿನ ಸಂಘಟನೆಗಳು ಹಾಗೂ ಬಿಜೆಪಿಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಇಷ್ಟೆಲ್ಲ ಇದ್ದರೂ ಪ್ರವೀಣ್‌ ಎಲ್ಲರಿಗೂ ಇಷ್ಟ ವಾಗಿದ್ದುದು ಅವರ ಪರೋಪಕಾರದ ಗುಣ ದಿಂದಲೇ.

ಒಂದು ಮಿಸ್ಡ್ ಕಾಲ್‌ಕೊಟ್ಟರೆ ಸಾಕು. ಎಷ್ಟೇ ಹೊತ್ತಿರಲಿ, ಎಲ್ಲಿಂದಲೇ ಇರಲಿ. ವಾಪಸು ಕರೆ ಮಾಡಿ ಏನು ಸಮಾಚಾರ ಎಂದು ವಿಚಾರಿಸುತ್ತಿದ್ದರು. ಅಗತ್ಯವಿದ್ದರೆ ಹೋಗಿ ಸಹಾಯ ಮಾಡುತ್ತಿದ್ದರು. ಎಂಥದ್ದೇ ಕಷ್ಟವಿರಲಿ. ಅಲ್ಲಿಗೆ ಹಾಜರಾಗಿ ಸಹಾಯ ಹಸ್ತ ಚಾಚುತ್ತಿದ್ದರು. ಹಾಗೆಂದು ಸಿಕ್ಕಾಪಟ್ಟೆ ಶ್ರೀಮಂತರೇನೂ ಆಗಿರಲಿಲ್ಲ. ಆದರೆ ಹೃದಯ ಶ್ರೀಮಂತಿಕೆಯಿಂದ ಕೂಡಿತ್ತು.

ಹತ್ತಾರು ಬಾರಿ ರಕ್ತದಾನ ಮಾಡಿ ಹಲವರ ಜೀವ ಉಳಿಸಿದ್ದರು. ರಕ್ತದಾನ, ಕಷ್ಟದಲ್ಲಿ ರುವವರಿಗೆ ಸಹಾಯ ಮಾಡುವುದರಲ್ಲಿ ಹಿಂಜ ರಿದವರಲ್ಲ ಪ್ರವೀಣ್‌. ಹಾಗಾಗಿ ಈ ಸಾವು ಬರೀ ಪ್ರವೀಣ್‌ ಮನೆಗಷ್ಟೇ ಆಲ್ಲ, ನೆಟ್ಟಾರು ಪರಿಸರದ ಪ್ರತಿ ಮನೆಯಲ್ಲಿಯೂ ಪ್ರವೀಣ್‌ ಸಾವಿನ ಸೂತಕದ ಛಾಯೆ ಎದ್ದು ಕಾಣುತ್ತಿತ್ತು.

ಜೀವನೋತ್ಸಾಹಸದ ಚಿಲುಮೆ
ನೆಟ್ಟಾರಿನಲ್ಲಿ ಯುವಕ ಮಂಡಲದ ಕಾರ್ಯ ಕ್ರಮಗಳಲ್ಲಿ ಸದಾ ಸಕ್ರಿಯವಾಗಿದ್ದವರು ಪ್ರವೀಣ್‌. ಜೀವನೋತ್ಸಾಹ ಸದಾ ಪುಟಿ ಯುತ್ತಿತ್ತು. ಸರಕಾರಿ ಸವಲತ್ತುಗಳನ್ನು ಎಲ್ಲ ಜನರಿಗೂ ತಲುಪಿಸಲು ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದ್ದರು. ಶಿಬಿರಗಳನ್ನು ಆಯೋ ಜಿಸುವುದು, ಮಾಹಿತಿ ಕಾರ್ಯಕ್ರಮ ನೀಡುವುದು ಹೀಗೆ-ಹತ್ತಾರು ಚಟುವಟಿಕೆಗಳ ಮೂಲಕ ಜನರಿಗೆ ಆಪ್ತರಾಗಿದ್ದರು. ಪುತ್ತೂರಿನ ವಿಜಯ ಸಾಮ್ರಾಟ್‌ ಸಂಘಟನೆಯಲ್ಲೂ ಸಕ್ರಿಯರಾಗಿದ್ದರು.

ಬಿಲ್ಲವ ಸಮುದಾಯದ ಸಂಘಟನೆಯ ನೇತೃತ್ವದಲ್ಲಿ ತನ್ನೂರಿನಲ್ಲಿ ಕೆಸರು ಗದ್ದೆಯಂತಹ ತುಳುನಾಡಿನ ಕ್ರೀಡಾಕೂಟ ಆಯೋಜಿಸಿದ್ದರು. ಸಾಂಸ್ಕೃತಿಕ, ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿಯಾಗಿದ್ದ ಪ್ರವೀಣರು ಯಾರೊಂ ದಿಗೂ ದ್ವೇಷ ಕಟ್ಟಿಕೊಂಡವರೂ ಇಲ್ಲ.

ಪರೋಪಕಾರಿಗೆ ಇಂಥ ಸಾವೇ?
ನೆಟ್ಟಾರು, ಬೆಳ್ಳಾರೆ ಪರಿಸರದ ಬಹುತೇಕರಿಗೆ ಪ್ರವೀಣ ಪರಿಚಿತರೇ. ಸದಾ ಪರೋಪಕಾರ ಮಾಡುತ್ತಾ, ಕಷ್ಟದಲ್ಲಿದ್ದವರಿಗೆ ಸ್ಪಂದಿಸುತ್ತಿದ್ದ ಮನುಷ್ಯನಿಗೆ ಇಂಥ ದಾರುಣ ಸಾವೇ ಎಂಬ ಪ್ರಶ್ನೆ ಎಲ್ಲರದ್ದಾಗಿತ್ತು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.