ಮುನ್ನೆಚ್ಚರಿಕೆ ಲೆಕ್ಕಿಸದೆ ಅವಘಡ: ಯಾರು ಹೊಣೆ?


Team Udayavani, Oct 27, 2019, 5:27 AM IST

z-33

ಮಂಗಳೂರು: ಕಡಲು ಪ್ರಕ್ಷುಬ್ಧಗೊಂಡಿದ್ದರೂ ಮುನ್ನೆಚ್ಚರಿಕೆ ಕಡೆಗಣಿಸಿ ಮೀನುಗಾರಿಕೆಗೆ ತೆರಳಿದ್ದವರ ಪೈಕಿ ಆಯತಪ್ಪಿ ಬಿದ್ದಿದ್ದ ಒರಿಸ್ಸಾ ಮೂಲದ ಮೀನುಗಾರನೊಬ್ಬ 12 ಗಂಟೆ ಸಾವಿನೊಂದಿಗೆ ಸೆಣಸಾಡಿ ಪವಾಡಸದೃಶವಾಗಿ ಬದುಕಿ ಬಂದಿದ್ದಾನೆ. ಒಂದುವೇಳೆ ಕೋಸ್ಟ್‌ಗಾರ್ಡ್‌ ಸಿಬಂದಿಗೆ ಆತನನ್ನು ಪಾರು ಮಾಡಲು ಸಾಧ್ಯವಾಗದೆ ಇರುತ್ತಿದ್ದರೆ ಆ ದುರಂತಕ್ಕೆ ಯಾರು ಹೊಣೆಗಾರರು ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ.

ಮೀನುಗಾರಿಕೆ ಮತ್ತು ಹವಾಮಾನ ಇಲಾಖೆಗಳು ಕಡಲು ಪ್ರಕ್ಷುಬ್ಧವಾಗುವ ಬಗ್ಗೆ ಕೆಲವು ದಿನಗಳ ಹಿಂದೆಯೇ ಮುನ್ನೆಚ್ಚರಿಕೆ ನೀಡಿದ್ದವು. ಆದರೆ ಶೈನಲ್‌ ಏಂಜಲ್‌ ಎಂಬ ಬೋಟ್‌ ಅ.23ರಂದು ಮುಂಜಾನೆ ಆಳ ಸಮುದ್ರಕ್ಕೆ ತೆರಳಿತ್ತು. ತೀರದಿಂದ ಸುಮಾರು 10 ನಾಟಿಕಲ್‌ ಮೈಲು ದೂರದಲ್ಲಿ ದೋಣಿಯಲ್ಲಿದ್ದ ಒರಿಸ್ಸಾ ಮೂಲದ ಲೋಂಡ ಸಮುದ್ರಕ್ಕೆ ಬಿದ್ದು ಸುಮಾರು 12 ಗಂಟೆ ಈಜುತ್ತ ಜೀವ ಉಳಿಸಿಕೊಂಡಿದ್ದರು.

ಅದೃಷ್ಟವಶಾತ್‌ ಲಭಿಸಿದ ಸಹಾಯ
ಕೋಸ್ಟ್‌ಗಾರ್ಡ್‌ನ ಕಾವಲು ನೌಕೆ ಬುಧವಾರ ದೈನಂದಿನ ಗಸ್ತು ಮುಗಿಸಿ ವಾಪಸಾಗುತ್ತಿದ್ದಾಗ ಬೋಟ್‌ನ ವೈಸ್‌ ಕ್ಯಾಪ್ಟನ್‌ಗೆ ಲೋಂಡ ಅವರ ಕೈ ಕಾಣಿಸಿತ್ತು. ಕೂಡಲೇ ಅವರು ಕಾರ್ಯಪ್ರವೃತ್ತರಾಗಿ ಲೋಂಡ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಕೋಸ್ಟ್‌ಗಾರ್ಡ್‌ನವರಿಗೆ ಲೋಂಡ ಕಾಣಿಸದಿದ್ದರೆ ಆತ ಬದುಕುಳಿಯುವ ಸಾಧ್ಯತೆ ಕಡಿಮೆಯಿತ್ತು.

ಯಾರು ಹೊಣೆ?
ಕಡಲು ಪ್ರಕ್ಷುಬ್ಧವಾಗಿರುವ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕಡೆಗಣಿಸಿ ಮೀನುಗಾರಿಕೆಗೆ ತೆರಳಿ ಇಂಥ ಅವಘಡಗಳಾದರೆ ಅದಕ್ಕೆ ಯಾರು ಹೊಣೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಘಟನೆಗೆ ಪ್ರತಿಕ್ರಿಯಿಸಿರುವ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಎಚ್ಚರಿಕೆಯನ್ನು ಉಲ್ಲಂಘಿಸಿ ಮೀನುಗಾರಿಕೆಗೆ ತೆರಳಿ ದುರಂತವಾದರೆ ಬೋಟ್‌ ಮತ್ತು ಕಾರ್ಮಿಕರಿಗೆ ವಿಮೆ ಸೇರಿದಂತೆ ಯಾವುದೇ ಪರಿಹಾರ ಸೌಲಭ್ಯ ದೊರೆಯುವುದಿಲ್ಲ. ಇಂಥ ಅನಾಹುತಗಳಾದರೆ ಬೋಟ್‌ ಮಾಲಕರೇ ಹೊಣೆಗಾರರು ಎಂದಿದ್ದಾರೆ.

ಆಳ ಸಮುದ್ರ ತಲುಪದ ಸಂದೇಶ
ಇಲಾಖೆಗಳು ನೀಡುವ ಹವಾಮಾನ ಮುನ್ನೆಚ್ಚರಿಕೆ ಅದಾಗಲೇ ಆಳಸಮುದ್ರದಲ್ಲಿ ಇರುವವರಿಗೆ ಸಿಗುವುದಿಲ್ಲ ಅಥವಾ ವಿಳಂಬವಾಗಿ ತಲುಪುತ್ತದೆ. ಅಕ್ಕಪಕ್ಕ ಮೀನುಗಾರಿಕೆಯಲ್ಲಿ ತೊಡಗಿರುವ ಬೋಟ್‌ನವರು ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಹೀಗಾಗಿ ಮುನ್ನೆಚ್ಚರಿಕೆ ಸಂದೇಶ ಆಳ ಸಮುದ್ರದಲ್ಲಿರುವವರಿಗೂ ನೇರವಾಗಿ ತಲುಪುವ ತಂತ್ರಜ್ಞಾನ ಬೇಕಿದೆ ಎನ್ನುತ್ತಾರೆ ಮೀನುಗಾರರ ಮುಖಂಡ ಮಲ್ಪೆಯ ಸತೀಶ್‌ ಕುಂದರ್‌.

“ನಮಗೆ ಮಾಹಿತಿ ಸಿಕ್ಕಿರಲಿಲ್ಲ’
ನಮ್ಮ ಬೋಟ್‌ ಅ.23ರ ಮುಂಜಾನೆ ಮೀನುಗಾರಿಕೆಗೆ ಹೊರಟಿತ್ತು. ನಮಗೆ ಕಡಲು ಪ್ರಕ್ಷುಬ್ಧ ಇರುವ ಕುರಿತು ಮಾಹಿತಿ ಸಿಕ್ಕಿರಲಿಲ್ಲ. ಅಲ್ಲದೆ ಬೋಟ್‌ನಲ್ಲಿದ್ದ ಮೀನುಗಾರ ನೀರಿಗೆ ಬೀಳಲು ಪ್ರಕ್ಷುಬ್ಧತೆ ಕಾರಣವಲ್ಲ ಎನ್ನುವುದು ಶೈನಲ್‌ ಏಂಜಲ್‌ ಬೋಟ್‌ನ ಮಾಲಕ ಕಿರಣ್‌ ಅವರ ವಾದ.

ಬೋಟ್‌ ಮಾಲಕರಿಗೆ ಕಾಳಜಿ ಅಗತ್ಯ
ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರಿಕೆ ಅವಧಿ ತುಂಬಾ ಕಡಿಮೆಯಾಗಿದ್ದು, ಬೋಟ್‌ ಮಾಲಕರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ಮುನ್ನೆಚ್ಚರಿಕೆ ಕಡೆಗಣಿಸಿ ಕೆಲವರು ಮೀನುಗಾರಿಕೆಗೆ ಹೋಗುವ ಸಾಧ್ಯತೆಯಿರುತ್ತದೆ. ಬೋಟ್‌ ಮಾಲಕರು ಇಲಾಖೆ ನೀಡುವ ಎಚ್ಚರಿಕೆಯನ್ನು ನಿರ್ಲಕ್ಷಿಸದೆ ಕಾರ್ಮಿಕರ ಬಗ್ಗೆ ಕಾಳಜಿ ವಹಿಸಬೇಕು. ಮೀನುಗಾರರ ಸಂಘಗಳ ಮೂಲಕ ಈಗಾಗಲೇ ಹಲವು ಬಾರಿ ಈ ಬಗ್ಗೆ ಸೂಚನೆ ನೀಡಲಾಗಿದೆ.
-ನಿತಿನ್‌ ಕುಮಾರ್‌, ಟ್ರಾಲ್‌ಬೋಟ್‌ ಮೀನುಗಾರರ ಸಂಘ, ಮಂಗಳೂರು

ಎಚ್ಚರಿಕೆ ಕಡೆಗಣಿಸಬೇಡಿ
ಅಪಾಯದ ಬಗ್ಗೆ ಮೈಕ್‌ಗಳ ಮೂಲಕ, ವಯರ್‌ಲೆಸ್‌, ಮೊಬೈಲ್‌ ಸಂದೇಶ, ವಾಟ್ಸಪ್‌ ಮೂಲಕ ಮಾಹಿತಿ ನೀಡಲಾಗುತ್ತದೆ. ಇದನ್ನು ಕಡೆಗಣಿಸಿ ಮೀನುಗಾರಿಕೆಗೆ ತೆರಳಿ ಅನಾಹುತವಾದರೆ ಮೀನುಗಾರರೇ ಹೊಣೆ. ಇಂತಹ ಸಂದರ್ಭಗಳಲ್ಲಿ ವಿಮೆ ದೊರೆಯಬೇಕಾದರೂ ವಿಮಾ ಕಂಪೆನಿಗಳು ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ಪರಿಗಣಿಸುತ್ತಾರೆ. ಸರಕಾರ ಕೂಡ ಪರಿಹಾರ ನೀಡುವುದಿಲ್ಲ.
– ತಿಪ್ಪೇಸ್ವಾಮಿ, ಮೀನುಗಾರಿಕಾ ಉಪನಿರ್ದೇಶಕರು, ಮಂಗಳೂರು

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.