ಮಂಗಳೂರು, ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ; ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ
ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣ
Team Udayavani, Feb 22, 2022, 6:50 AM IST
ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯ ಕರ್ತನ ಕೊಲೆ ಮತ್ತು ಇತರ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇಡಲಾಗಿದೆ. ಅಧಿಕಾರಿಗಳ ಸಭೆ ನಡೆಸಿ ಠಾಣಾ ಹಂತದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬಂದಿ ನಿಯೋಜಿಸಲಾಗಿದೆ. ಇತ್ತೀಚೆಗೆ ಕೆಲವು ಕಡೆ ನಡೆದಿದ್ದ ಹಿಜಾಬ್-ಕೇಸರಿ ಶಾಲು ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿ ಹಾಗೂ ವಿವಿಧ ಸಂಘಟನೆಗಳು ಸಹಕರಿಸಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆದಿರಲಿಲ್ಲ. ಅದೇ ರೀತಿ ಮುಂದೆಯೇ ಎಲ್ಲರ ಸಹಕಾರದಿಂದ ಶಾಂತಿ ಮುಂದು ವರಿಯಬೇಕಾಗಿದೆ ಎಂದು ತಿಳಿಸಿದ್ದಾರೆ.
ಫೇಸ್ಬುಕ್ ಪೇಜ್ ಮೇಲೆ ಪ್ರಕರಣ
Mangalore Muslims ಎಂಬ ಫೇಸ್ಬುಕ್ ಪೇಜ್ನಲ್ಲಿ ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣದ ಕುರಿತು ಆಕ್ಷೇಪಾರ್ಹವಾದ ಪೋಸ್ಟ್ಗಳನ್ನು ಹಾಕಿ ಶಾಂತಿ ಕದಡಲು, ಕೋಮು ಗಲಭೆ ನಡೆಸಲು ಪ್ರಯತ್ನಿಸಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಜತೆಗೂ ಸಂವಹನ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಹುಂಬ ಧೈರ್ಯ ಬೇಡ
ಮಂಗಳೂರಿನಲ್ಲಿ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳು, ಧಾರ್ಮಿಕ, ಜಾತಿ, ರಾಜಕೀಯ ಮುಖಂಡರು, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆ ಹಾಗೂ ಕೆಲವು ವ್ಯಕ್ತಿಗಳು ನೀಡುತ್ತಿರುವ ಹೇಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್ಗಳನ್ನು ನಿರಂತರವಾಗಿ ನಿಕಟವಾಗಿ ಗಮನಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಿಷಬೀಜ ಬಿತ್ತಲು ಅವಕಾಶ ನೀಡುವುದಿಲ್ಲ. ಇಂತಹ ಸುಮಾರು 1,064 ವ್ಯಕ್ತಿ/ಸಂಘಟನೆಗಳ ಪೋಸ್ಟ್ಗಳ ಬಗ್ಗೆ ಕಳೆದ 2 ತಿಂಗಳುಗಳಿಂದ ನಿಗಾ ಇರಿಸಲಾಗಿದೆ. ಇದನ್ನು ಪರಿಶೀಲಿಸಲಾಗುತ್ತಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಯ ವಿವಿಧ ಏಜೆನ್ಸಿಗಳಿಗೂ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ಗಳನ್ನು ಗಂಭೀರವಾಗಿ ಪರಿಗಣಿಸ ಲಾಗುತ್ತಿದೆ. ಹಾಗಾಗಿ ಯಾರೂ ಕೂಡ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಬಾರದು. ಕೇವಲ ಪೋಸ್ಟ್ ಮಾಡುವುದು ಮಾತ್ರವಲ್ಲದೆ ಅದನ್ನು ಶೇರ್ ಮಾಡುವುದು, ಲೈಕ್ ಮಾಡುವುದು ಅಥವಾ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕುವುದು ಕೂಡ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದರು.
ಸಾಮಾಜಿಕ ಜಾಲತಾಣ ನಿಯಂತ್ರಣ ಘಟಕವನ್ನು ಪೊಲೀಸ್ ಆಯುಕ್ತರು ಉದ್ಘಾಟಿಸಿದರು. ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಪೊಲೀಸ್ ಪಥಸಂಚಲನ
ಮಂಗಳೂರು ನಗರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಮುಂದುವರಿಸಿ ಕೊಂಡು ಹೋಗುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಪೊಲೀಸರು ಸೋಮವಾರ ಬೆಳಗ್ಗೆ ಪಥಸಂಚಲನ ನಡೆಸಿದರು. ಅಂತೆಯೇ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ಸುದೀಪ್ ನೇತೃತ್ವದಲ್ಲಿ ಪೊಲೀಸರು ಪೇಟೆಯಲ್ಲಿ ಪಥ ಸಂಚಲನ ನಡೆಸಿದರು.
ಉಡುಪಿಯಲ್ಲೂ ಕಟ್ಟೆಚ್ಚರ
ಉಡುಪಿ ಜಿಲ್ಲೆಯ ಪೊಲೀಸರಿಗೆ ರವಿವಾರ ರಾತ್ರಿಯಿಂದಲೇ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಎಲ್ಲ ಚೆಕ್ಪೋಸ್ಟ್ಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಿದ್ದೇವೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು, ಎಸ್ಐ ಹಾಗೂ ಸಿಬಂದಿ ವರ್ಗಕ್ಕೆ ಅಹಿತಕರ ಘಟನೆ ನಡೆಯದಂತೆ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.
– ಎನ್. ವಿಷ್ಣುವರ್ಧನ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ