ಶ್ರೀ ಕ್ಷೇತ್ರ ಕಟೀಲು ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆ

ಜ. 22ರಿಂದ ಫೆ. 3ರ ವರೆಗೆ ಕಾರ್ಯಕ್ರಮ ವೈವಿಧ್ಯ

Team Udayavani, Jan 21, 2020, 6:37 AM IST

sad-48

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆ. 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಜ. 22ರಂದು ತೋರಣ ಮುಹೂರ್ತದೊಂದಿಗೆ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಜ. 24ರಂದು ಸುವರ್ಣ ಧ್ವಜಪ್ರತಿಷ್ಠೆ, ಜ. 30ರಂದು ಬ್ರಹ್ಮಕಲಶ, ಫೆ. 1ರಂದು ನಾಗಮಂಡಲ, 2ರಂದು ಕೋಟಿ ಜಪ ಯಜ್ಞ ಮತ್ತು 3ರಂದು ಸಹಸ್ರ ಚಂಡಿಕಾಯಾಗ ನಡೆಯಲಿದೆ.  ಪ್ರಧಾನ ಸಮಿತಿಯನ್ನೊಳಗೊಂಡ 30 ಸಮಿತಿಗಳು ರಚನೆಗೊಂಡಿವೆ. ಸಾವಿರಾರು ಸ್ವಯಂಸೇವಕರು ಆಗಮಿಸಿ ಕರಸೇವೆಯಲ್ಲಿ ತೊಡಗಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಮತ್ತು ಶಾಸಕ ಉಮಾನಾಥ ಕೋಟ್ಯಾನ್‌ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಅಭಿವೃದ್ಧಿ ಕಾರ್ಯಗಳು
ದೇವಸ್ಥಾನದ ಮುಂಭಾಗದ ಅಂಗಡಿಗಳನ್ನು ತೆರವುಗೊಳಿಸಿ, ರಥ ಬೀದಿಯನ್ನು ವಿಶಾಲಗೊಳಿಸಲಾಗಿದೆ. ಸುಸಜ್ಜಿತ ಪಾಕಶಾಲೆ ನಿರ್ಮಾಣಗೊಂಡಿದೆ. ಯಾತ್ರೀ ನಿವಾಸದ ಎರಡನೇ ಹಂತದ ನಿರ್ಮಾಣ, ಇಂಟರ್‌ಲಾಕ್‌ ಅಳವಡಿಸುವಿಕೆ ಸಂಪೂರ್ಣಗೊಂಡಿದೆ. 50 ಲಕ್ಷ ರೂ. ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆಗೊಂಡಿದೆ. ದೇವಾಲಯಕ್ಕೆ ಹೋಗುವುದಕ್ಕೆ ಸ್ಟೀಲ್‌ ಬ್ರಿಜ್‌, ಹೊಸದಾದ ರಥದ ಕೊಟ್ಟಿಗೆ ನಿರ್ಮಿಸಲಾಗಿದೆ. ಸ್ವರ್ಣಲೇಪಿತ ಧ್ವಜಸ್ತಂಭದ ನಿರ್ಮಾಣವಾಗಿದೆ. 36 ಕೊಠಡಿಗಳ ಬ್ರಾಮರೀ ವಸತಿಗೃಹ ನಿರ್ಮಾಣಗೊಂಡಿದೆ. ಬಸ್‌ ನಿಲ್ದಾಣದಲ್ಲಿ ವಿಶಾಲವಾದ ವೇದಿಕೆ ಮತ್ತು 2,500 ಜನರು ಕುಳಿತುಕೊಳ್ಳಬಹುದಾದ ಸಭಾಂಗಣ ಸಿದ್ಧವಾಗಿದೆ.

ರಸ್ತೆ ವಿಸ್ತರಣೆ
ಕಿನ್ನಿಗೋಳಿ-ಉಲ್ಲಂಜೆ- ಕಟೀಲು, ಬಜಪೆ-ಕಟೀಲು, ಮೂರುಕಾವೇರಿ- ಕಟೀಲು ರಸ್ತೆಗಳನ್ನು 25 ಕೋ.ರೂ. ವೆಚ್ಚದಲ್ಲಿ ಅಗಲಗೊಳಿಸಲಾಗುತ್ತಿದೆ. ತಾತ್ಕಾಲಿಕ ಬೈಪಾಸ್‌ ರಸ್ತೆಗಳನ್ನೂ ನಿರ್ಮಿಸಲಾಗಿದೆ.

ಕುದುರು ಅಭಿವೃದ್ಧಿ
ಮೂಲಸ್ಥಾನವಾದ ಕುದುರುವಿನಲ್ಲಿ ನಾಗಮಂಡಲ, ಕೋಟಿ ಜಪಯಜ್ಞ, ಸಹಸ್ರ ಚಂಡಿಕಾ ಯಾಗ ನಡೆಯಲಿದೆ. ಕುದುರುವಿನಲ್ಲಿ ಯಂತ್ರಗಳನ್ನು ಬಳಸದೆ ಶ್ರಮದಾನದಿಂದ ನೆಲವನ್ನು ಹದಗೊಳಿಸಲಾಗಿದೆ.

ಕೋಟಿ ಜಪ ಯಜ್ಞ
ಒಂದು ತಿಂಗಳಿಂದ ಹಗಲು ಭಜನೆ ನಡೆಯುತ್ತಿದ್ದು, ಫೆ. 4ರ ವರೆಗೆ ಮುಂದುವರಿಯಲಿದೆ. ಕೋಟಿ ಜಪಯಜ್ಞದ ಅಂಗವಾಗಿ ಫೆ. 2ರಂದು ಜಪಸಮರ್ಪಣೆ, ಪ್ರಸಾದ ವಿತರಣೆ ನಡೆಯಲಿದೆ. ಹೊರೆ ಕಾಣಿಕೆಯನ್ನು ಸಂಗ್ರಹಿಸಲು ವಿಶಾಲ ಉಗ್ರಾಣ ನಿರ್ಮಾಣ ಮಾಡಲಾಗಿದೆ ಎಂದು ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣ ಮತ್ತು ಅನಂತಪದ್ಮನಾಭ ಆಸ್ರಣ್ಣ ವಿವರಿಸಿದರು.

ಆನುವಂಶಿಕ ಮೊಕ್ತೇಸರರು ಮತ್ತು ಆನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ಆಡಳಿತ ಸಮಿತಿಯ ಅಧ್ಯಕ್ಷ ಮತ್ತು ಆನುವಂಶಿಕ ಮೊಕ್ತೇಸರ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು, ಡಾ| ಆಶಾಜ್ಯೋತಿ ರೈ ಉಪಸ್ಥಿತರಿದ್ದರು.

ಪಾರ್ಕಿಂಗ್‌ಗೆ 40 ಎಕರೆ
ಭಕ್ತರ ವಾಹನಗಳಿಗೆ ದೇವಸ್ಥಾನದ ನಾಲ್ಕು ದಿಕ್ಕುಗಳಲ್ಲಿ 19 ಕಡೆಗಳಲ್ಲಿ 40 ಎಕರೆ ಜಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಒಟ್ಟು 5 ಸಾವಿರ ವಾಹನಗಳನ್ನು ಇಲ್ಲಿ ನಿಲುಗಡೆ ಮಾಡಬಹುದು. ಅಲ್ಲಿಂದ ಭಕ್ತರನ್ನು ದೇವಸ್ಥಾನಕ್ಕೆ ಪ್ರತ್ಯೇಕ ವಾಹನದಲ್ಲಿ ಕರೆದೊಯ್ಯಲಾಗುವುದು. ಅಜಾರಿನಿಂದ ಗಿಡಿಗೆರೆಯವರೆಗೆ, ಮಾಂಜದ ಪಾರ್ಕಿಂಗ್‌ ಜಾಗದಲ್ಲಿ ವಿವಿಧ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಪದವಿ ಕಾಲೇಜಿನ ಕ್ರೀಡಾಂಗಣದಲ್ಲಿ ಮಳಿಗೆಗಳು, ಮನೋರಂಜನೆಗೆ ವ್ಯವಸ್ಥೆ ಮಾಡಲಾಗಿದೆ.

25 ಲಕ್ಷ ಭಕ್ತರ ನಿರೀಕ್ಷೆ ನಿರಂತರ ಊಟೋಪಹಾರ
ಉತ್ಸವಕ್ಕೆ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ. 7 ಕೋ.ರೂ. ಖರ್ಚು ನಿರೀಕ್ಷಿಸಲಾಗಿದೆ. ಏಕಕಾಲದಲ್ಲಿ 5 ಸಾವಿರ ಭಕ್ತರಿಗೆ ಊಟೋಪಹಾರಕ್ಕೆ ಸಿತ್ಲಬಯಲಿನಲ್ಲಿ ಚಪ್ಪರ, ಪಾಕಶಾಲೆ ಸಿರ್ಮಿಸಲಾಗಿದೆ. ಬೆಳಗ್ಗೆ 6ರಿಂದ 11ರ ವರೆಗೆ ಉಪಾಹಾರ, 11.30ರಿಂದ 3.30ರ ವರೆಗೆ ಅನ್ನ ಪ್ರಸಾದ, ಸಂಜೆ 4ರಿಂದ 6ರವರೆಗೆ ಉಪಾಹಾರ, ರಾತ್ರಿ 12ರ ವರೆಗೆ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಬ್ರಹ್ಮಕಲಶೋತ್ಸವ: ಪ್ರಮುಖ ಅಂಶಗಳು
ಜ. 22: ತೋರಣ ಮುಹೂರ್ತ
ಜ. 24: ಸ್ವರ್ಣಧ್ವಜಸ್ತಂಭ ಪ್ರತಿಷ್ಠೆ
ಜ. 30: ಬ್ರಹ್ಮಕಲಶಾಭಿಷೇಕ
ಫೆ. 1: ನಾಗಮಂಡಲ
ಫೆ. 2: ಕೋಟಿ ಜಪಯಜ್ಞ
ಫೆ. 3: ಸಹಸ್ರ ಶ್ರೀ ಚಂಡಿಕಾಯಾಗ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.