ಜಿಲ್ಲಾ ಕೇಂದ್ರಗಳಲ್ಲಿ ಟಿಪ್ಪು ಜಯಂತಿ ಆಯೋಜನೆಗೆ ಸಿದ್ಧತೆ


Team Udayavani, Nov 8, 2018, 11:09 AM IST

tippu.png

ಮಂಗಳೂರು / ಉಡುಪಿ / ಕುಂದಾಪುರ: ರಾಜ್ಯ ಸರಕಾರ ಆಚರಿಸಲುದ್ದೇಶಿಸಿದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿಗೆ ಈ ವರ್ಷವೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೂ ಸರಕಾರ ವಿರೋಧದ ನಡುವೆಯೇ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ. ನ. 10ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರಗಳಲ್ಲಿ ಟಿಪ್ಪು ಜಯಂತಿ ನಡೆಯಲಿದೆ. ಈ ಉದ್ದೇಶಿತ ಕಾರ್ಯಕ್ರಮಕ್ಕೆ ಕರಾವಳಿಯ ವಿವಿಧ ಕ್ಷೇತ್ರಗಳ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಆಮಂತ್ರಣ ಪತ್ರಿಕೆಗಳಲ್ಲಿ ಶಿಷ್ಟಾಚಾರದ ಪ್ರಕಾರ ಹೆಸರು ಹಾಕದಂತೆ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ.

ಶಾಸಕರ ವಿರೋಧ ಏಕೆ?
ರಾಜ್ಯ ಸರಕಾರ  ಕೇವಲ ಮತಬ್ಯಾಂಕ್‌ ರಾಜಕಾರಣಕೋಸ್ಕರ ಟಿಪ್ಪು ಸುಲ್ತಾನ್‌ ಸ್ವಾತಂತ್ರÂ ಹೋರಾಟಗಾರನೆಂದು ಸುಳ್ಳು ಹೇಳಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುಂದಾಗಿರುವುದು ದ್ರೋಹವಾಗಿದೆ. ಬಹುಸಂಖ್ಯಾಕ ಹಿಂದೂಗಳ ಹಾಗೂ ಕ್ರೈಸ್ತರ ಮೇಲೆ ಟಿಪ್ಪು ಅಮಾನವೀಯ ದೌರ್ಜನ್ಯ ಎಸಗಿರುವುದನ್ನು ಮರೆತು ರಾಜ್ಯ ಸರಕಾರ ಆತನ ಜಯಂತಿ ಆಚರಣೆಗೆ ಮುಂದಾಗಿದೆ. ಟಿಪ್ಪು ಜಯಂತಿ ಬದಲು ಸರ್ವಧರ್ಮೀಯರನ್ನು ಪ್ರೀತಿಸಿ, ಗೌರವಿಸುತ್ತಿದ್ದ ಎ.ಪಿ.ಜೆ. ಅಬ್ದುಲ್‌ ಕಲಾಂ ಅವರಂಥ ವಿಜ್ಞಾನಿಗಳ ಜಯಂತಿಯನ್ನು ರಾಜ್ಯ ಸರಕಾರ ಆಚರಿಸಬಹುದಿತ್ತು ಎಂದು ಶಾಸಕರು ಹೇಳಿದ್ದಾರೆ. 

ಸಂಸದ, ಶಾಸಕರ ಪತ್ರ
ಟಿಪ್ಪು ಜಯಂತಿ ಆಮಂತ್ರಣದಲ್ಲಿ ತಮ್ಮ ಹೆಸರು ಹಾಕದಂತೆ ಈಗಾಗಲೇ ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ವೇದವ್ಯಾಸ ಕಾಮತ್‌, ರಘುಪತಿ ಭಟ್‌, ಹರೀಶ್‌ ಪೂಂಜಾ, ಬಿ.ಎಂ. ಸುಕುಮಾರ ಶೆಟ್ಟಿ, ಡಾ| ವೈ. ಭರತ್‌ ಶೆಟ್ಟಿ ಅವರು ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಈ ವಿಚಾರದಲ್ಲಿ ಪ್ರತಿಭಟನೆ ನಡೆಸುವುದಾಗಿಯೂ ಕೆಲವು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನತೆಗೆ ಎಸಗಿದ ಅವಮಾನ 
ಉಡುಪಿ:
ರಾಜ್ಯ ಸರಕಾರ ಆಚರಿಸಲು ಹೊರಟ ಟಿಪ್ಪು ಜಯಂತಿ ಜನತೆಗೆ ಮಾಡಿದ ಅವಮಾನ. ಇದನ್ನು ಹಿಂಪಡೆಯದಿದ್ದರೆ ನ.10ರಂದು ಪ್ರತಿಭಟನೆ ನಡೆಸುವುದಾಗಿ ಬಜರಂಗ ದಳದ ಪ್ರಾಂತ ಸಂಚಾಲಕ ಸುನೀಲ್‌ ಕೆ.ಆರ್‌. ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇತಿಹಾಸದಲ್ಲಿ ಟಿಪ್ಪು ಸುಲ್ತಾನ್‌ನಷ್ಟು ಹಿಂದೂಗಳ ಹತ್ಯೆ ಮತ್ತು ದೇವಾ ಲಯಗಳನ್ನು ಕೆಡವಿದ ರಾಜ ಮತ್ತೂಬ್ಬನಿಲ್ಲ. ಹೀಗಿದ್ದರೂ ಅವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂಬಂತೆ ಬಿಂಬಿಸಲಾಗುತ್ತಿದೆ. ಆತ ಮೈಸೂರಿನ 700 ಮಂಡಯಂ ಅಯ್ಯಂಗಾರಿ ಕುಟುಂಬಗಳನ್ನು ನರಕ ಚತುರ್ದಶಿ ಯಂದು ನರಮೇಧ ಮಾಡಿದ. ಇಂದಿಗೂ ಈ ಕುಟುಂಬಗಳು ನರಕ ಚತುರ್ದಶಿ ಯನ್ನು ಕರಾಳ ದಿನವಾಗಿ ಆಚರಿಸುತ್ತಿವೆ. ಕೇರಳದಲ್ಲಿ ಟಿಪ್ಪುವಿನ ಕ್ರೌರ್ಯ ತಿಳಿಯಲು ತಮ್ಮ ಸುತ್ತಮುತ್ತಲಿನ ದೇಗುಲ ಮತ್ತು ಚರ್ಚ್‌ ಗಳನ್ನು ನೋಡಿದರೆ ಸಾಕು. ಆತನ ಜಯಂತಿ ಆಚರಣೆಗೆ ಜನರಿಂದಲೇ ವಿರೋಧವಿದೆ. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸಾಕಷ್ಟು ಧೀಮಂತ ವ್ಯಕ್ತಿಗಳಿದ್ದಾರೆ. ಅವರ ಜಯಂತಿ ಆಚರಿಸಲಿ ಎಂದರು. 

ವಿಶ್ವ ಹಿಂದೂ ಪರಿಷತ್‌ನ ಜಿÇÉಾ ಕಾರ್ಯದರ್ಶಿ ಪ್ರಮೋದ್‌ ಶೆಟ್ಟಿ ಮಂದಾರ್ತಿ, ಜಿÇÉಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಕುಕ್ಕೆಹಳ್ಳಿ,  ಶಂಕರ್‌ ಕೋಟ, ಹಿಂದೂ ಜಾಗರಣ ವೇದಿಕೆ ಜಿÇÉಾಧ್ಯಕ್ಷ ಪ್ರಶಾಂತ್‌ ನಾಯಕ್‌ ಉಪಸ್ಥಿತರಿದ್ದರು.

ನ. 10: ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ
ಮಂಗಳೂರು/ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಟಿಪ್ಪು ಜಯಂತಿಯನ್ನು ನ. 10ರಂದು ಬೆಳಗ್ಗೆ 10.30ಕ್ಕೆ ದ.ಕ. ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಮತ್ತು ಮಣಿಪಾಲದಲ್ಲಿರುವ ಉಡುಪಿಯ ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 
ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲೆಯ ಜನಪ್ರನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.