ಶಾಲೆಯತ್ತ ಹೆಜ್ಜೆ ಹಾಕಲು ಮಕ್ಕಳು ಸಿದ್ಧ: ಸ್ವಾಗತಕ್ಕೆ ಶಿಕ್ಷಕರ ತಯಾರಿ

ಸರಕಾರಿ ಶಾಲಾರಂಭಕ್ಕೆ ಇನ್ನೊಂದೇ ದಿನ ಬಾಕಿ

Team Udayavani, May 28, 2019, 6:00 AM IST

SCHOOL-GOVT

ವಿಶೇಷ ವರದಿ-ಮಹಾನಗರ: ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನೊಂದೇ ದಿನ ಬಾಕಿ. ರಜಾ ಮಜಾದಲ್ಲಿದ್ದ ಮಕ್ಕಳೆಲ್ಲ ರಜೆಯ ಖುಷಿಯಿಂದ ಹೊರಬಂದು ಶಾಲೆಯತ್ತ ಹೆಜ್ಜೆ ಹಾಕಲು ಸಿದ್ಧರಾಗುತ್ತಿದ್ದಾರೆ. ಶಾಲೆಗಳಲ್ಲಿಯೂ ಮಕ್ಕಳನ್ನು ಸ್ವಾಗತಿಸಲು ವಿಶೇಷ ತಯಾರಿ ನಡೆಯುತ್ತಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿಗದಿಪಡಿಸಿದಂತೆ ಮೇ 29ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಆದರೆ ಖಾಸಗಿ ಶಾಲೆಗಳು ನಾನಾ ಕಾರಣಗಳಿಂದಾಗಿ ಮುಂದಿನ ವಾರದಿಂದ ಈ ಬಾರಿಯ ಶೈಕ್ಷಣಿಕ ವರ್ಷ ಪ್ರಾರಂಭಿಸಲಿದೆ.

ಎಪ್ರಿಲ್‌ ಹತ್ತರಿಂದ ಮೇ 28ರ ವರೆಗೆ ಸುಮಾರು ಒಂದೂವರೆ ತಿಂಗಳಿಗಿಂತ ಹೆಚ್ಚು ದಿನ ಮಕ್ಕಳಿಗೆ ಬೇಸಗೆ ರಜಾವಿತ್ತು. ಬೇಸಗೆ ರಜೆಯ ಹಿನ್ನೆಲೆಯಲ್ಲಿ ವಿವಿಧ ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ, ಸಂಬಂಧಿಕರ ಮನೆಗೆ ತೆರಳುವುದು, ಮನೆಮಂದಿಯೊಂದಿಗೆ ಪ್ರವಾಸ ತೆರಳುವುದೆಲ್ಲ ನಡೆದೇ ಇತ್ತು. ಒಟ್ಟಾರೆ ಒಂದೂವರೆ ತಿಂಗಳನ್ನು ಖುಷಿಯಿಂದಲೇ ಅನುಭವಿಸಿದ ಮಕ್ಕಳಿಗೆ ಈಗ ಮತ್ತೂಂದು ಶೈಕ್ಷಣಿಕ ವರ್ಷಾರಂಭಕ್ಕೆ ತೆರೆದುಕೊಳ್ಳುವ ಹೊತ್ತು.

ಇನ್ನೊಂದೆಡೆ, ಹೊಸ ಶೈಕ್ಷಣಿಕ ವರ್ಷ ಪ್ರಾರಂಭದ ಹಿನ್ನೆಲೆಯಲ್ಲಿ ಹೆತ್ತವರು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಉತ್ಸುಕರಾಗುತ್ತಿದ್ದು, ಪಠ್ಯ, ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾಗಿ ಪುಸ್ತಕ, ಬ್ಯಾಗ್‌, ಕೊಡೆ ಸಹಿತ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುವುದತ್ತ ಬಿಜಿಯಾಗಿದ್ದಾರೆ. ಇತ್ತ ಮಕ್ಕಳು ಕೂಡ ಹೊಸ ಬ್ಯಾಗ್‌, ಪುಸ್ತಕ, ಕೊಡೆ ಹಿಡಿದು ಶಾಲೆಯತ್ತ ಹೆಜ್ಜೆ ಹಾಕುವ ಖುಷಿಯಲ್ಲಿದ್ದಾರೆ.

ಶಾಲೆಗಳ ಸಿಂಗಾರ
ಶಾಲಾರಂಭಕ್ಕೆ ಎರಡು ದಿನ ಮುಂಚಿತವಾಗಿಯೇ ಕೆಲವು ಶಿಕ್ಷಕರು ಶಾಲೆಗೆ ಆಗಮಿಸಿದ್ದು, ಮಕ್ಕಳನ್ನು ಸ್ವಾಗತಿಸಲು ಅಗತ್ಯ ತಯಾರಿಯಲ್ಲಿ ತೊಡಗಿದ್ದಾರೆ. ಮೇ 29ರಂದು ಮಕ್ಕಳು ಶಾಲೆಗೆ ಆಗಮಿಸುವ ವೇಳೆ ಅವರನ್ನು ವಿಶೇಷವಾಗಿ ಬರ ಮಾಡಿಕೊಳ್ಳಲು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗುತ್ತಿದೆ.

ಖಾಸಗಿ ಶಾಲೆಗಳಲ್ಲಿ ತಡವಾಗಿ ಆರಂಭ
ಕೆಲವು ಖಾಸಗಿ ಶಾಲೆಗಳಲ್ಲಿ ಸರಕಾರಿ ಶಾಲೆಗಳಂತೆ ಮೇ 29ರಂದೇ ಶೈಕ್ಷಣಿಕ ವರ್ಷಾರಂಭವಾದರೆ, ಹಲವು ಶಾಲೆಗಳಲ್ಲಿ ಅಂದು ತರಗತಿ ಆರಂಭವಾಗುವುದಿಲ್ಲ. ನಗರದಲ್ಲಿರುವ ವಿವಿಧ ಖಾಸಗಿ ರಾಜ್ಯ ಪಠ್ಯಕ್ರಮಾಧಾರಿತ ಮತ್ತು ಕೇಂದ್ರ ಪಠ್ಯಕ್ರಮಾಧಾರಿತ ಶಾಲೆಗಳಲ್ಲಿ ಜೂನ್‌ ತಿಂಗಳಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಲಿವೆ. ಆದರೆ, ಇದಕ್ಕೆ ನೀರಿನ ಸಮಸ್ಯೆ ಕಾರಣ ಅಲ್ಲ. ಮಕ್ಕಳಿಗೆ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಕಳೆದ ಬಳಿಕ ಮುಂದಿನ ಶೈಕ್ಷಣಿಕ ವರ್ಷಕ್ಕಾಗಿ ಕೋಚಿಂಗ್‌, ಇತರ ತರಗತಿಗಳು ನಡೆಯುವುದರಿಂದ ತಡವಾಗಿ ರಜೆ ನೀಡಲಾಗುತ್ತದೆ. ಅದಕ್ಕಾಗಿ ಮುಂದಿನ ಶೈಕ್ಷಣಿಕ ತರಗತಿಗಳ ಆರಂಭ ತಡವಾಗುತ್ತದೆ ಎಂದು ಶಾಲಾ ಪ್ರಮುಖರು ತಿಳಿಸಿದ್ದಾರೆ.

ನೀರಿನ ಸಮಸ್ಯೆ: ಮುಂದೂಡಿಕೆ ಇಲ್ಲ
ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರವಾಗಿ ತಲೆದೋರಿರುವ ನೀರಿನ ಸಮಸ್ಯೆಯಿಂದಾಗಿ ನಿಗದಿತ ದಿನಾಂಕದಂದೇ ಶಾಲಾರಂಭವಾಗುವುದೇ ಎಂಬ ಗೊಂದಲವಿತ್ತು. ಶಾಲೆ ಆರಂಭ ವಿಳಂಬವಾಗಲಿದೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಆದರೆ ಈ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದ್ದು, ಮೇ 29ರಂದೇ ಶಾಲೆಗಳು ಆರಂಭವಾಗಲಿವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ಸಮಸ್ಯೆ ತೀವ್ರವಿದ್ದಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿ ಮನೆಗೆ ಬಿಡಬಹುದೇ ಎಂಬ ಕುರಿತು ಶಾಲಾ ಮಟ್ಟದಲ್ಲಿ ನಿರ್ಧಾರ ಕೈಗೊಂಡು ಬಳಿಕ ಶಾಲಾ ಮುಖ್ಯಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ತಿಳಿಸಬೇಕು. ಶಾಲಾರಂಭ ಮುಂದೂಡಿಕೆ ಬಗ್ಗೆ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ. ಜಿಲ್ಲಾಧಿಕಾರಿ ಅಥವಾ ಸರಕಾರ ಈ ಬಗ್ಗೆ ನಿರ್ಧರಿಸಬೇಕು ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.

ಸಮವಸ್ತ್ರ ಬಂದಿಲ್ಲ
ಈ ಶೈಕ್ಷಣಿಕ ವರ್ಷಾರಂಭದ ದಿನದಂದೇ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಪುಸ್ತಕಗಳನ್ನು ವಿತರಿಸಲಾಗುತ್ತದೆ. ಆದರೆ ಶಾಲಾ ಸಮವಸ್ತ್ರ ಇನ್ನೂ ಬಿಡುಗಡೆಯಾಗಿಲ್ಲದ ಕಾರಣ, ಮೇ 29ರಂದು ಮಕ್ಕಳಿಗೆ ಸಮವಸ್ತ್ರ ಸಿಗುತ್ತಿಲ್ಲ. ಸಮವಸ್ತ್ರವನ್ನು ನೇರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೀಡಿ ಅಲ್ಲಿಂದ ಶಾಲೆಗಳಿಗೆ ಹಸ್ತಾಂತರಿಸಲಾಗುತ್ತದೆ. ಈ ಬಾರಿ ಸಮವಸ್ತ್ರ ಈವರೆಗೆ ಬಂದಿಲ್ಲ. ಯಾವಾಗ ಸಿಗುತ್ತದೆ ಎಂಬುದು ತಿಳಿದಿಲ್ಲ ಎನ್ನುತ್ತಾರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು.

 ನಿಗದಿತ ದಿನದಂದೇ ಶಾಲಾರಂಭ
ಮೇ 29ರಂದೇ ಸರಕಾರಿ ಶಾಲೆಗಳು ಆರಂಭವಾಗಲಿವೆ. ಕೆಲವು ಶಾಲೆಗಳಲ್ಲಿ ನೀರಿನ ಸಮಸ್ಯೆ ಇದೆ ಎಂಬುದಾಗಿ ಶಾಲೆಯವರು ತಿಳಿಸಿದ್ದಾರೆ. ಆದರೆ ಅಂತಹ ಶಾಲೆಗಳನ್ನು ಆರಂಭಿಸದಿರಲು ನಮಗೆ ಯಾವುದೇ ನಿರ್ದೇಶಗಳು ಇಲ್ಲ. ಹಾಗಾಗಿ ನಿಗದಿತ ದಿನಾಂಕಗಳಂದು ಶಾಲೆ ಆರಂಭವಾಗಲಿದೆ.
 - ಲೋಕೇಶ್‌,
ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.