ಸಿದ್ಧಗೊಂಡಿದೆ ಮಂಗಳೂರಿನ ಸ್ವಚ್ಛತಾ ಟೀಂ


Team Udayavani, Aug 22, 2018, 11:55 AM IST

22-agust-5.jpg

ಮಹಾನಗರ: ಮಹಾಮಳೆಗೆ ತತ್ತರಿಸಿರುವ ಕೊಡಗು ಜನತೆ ತಮ್ಮ ಅಸ್ತಿತ್ವನ್ನೇ ಕಳೆದುಕೊಂಡು ಅಕ್ಷರಶಃ ಸಂಕಟ ಪಡುತ್ತಿದ್ದಾರೆ. ನೆರೆ ತಗ್ಗಿದ್ದರೂ ಈಗ ನೀರು ನುಗ್ಗಿದ್ದ ತಮ್ಮ ಮನೆಗಳ ಸ್ವಚ್ಛತೆಯೇ ಅಲ್ಲಿನ ಜನರಿಗೆ ಬಹುದೊಡ್ಡ ಸವಾಲಾಗಿದೆ. ಹೀಗಿರುವಾಗ, ಮಂಗಳೂರಿನ ಸ್ವಚ್ಛತೆಯ ತಂಡವೊಂದು ನೆರೆ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛತೆ ಕೈಗೊಳ್ಳುವುದಕ್ಕೆ ಮಡಿಕೇರಿಗೆ ತೆರಳಲು ಸಿದ್ಧಗೊಂಡಿದೆ.

ಮಂಗಳೂರು ನಗರವನ್ನು ಸ್ವಚ್ಛತೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಲ್ಲಿ ಕೈಜೋಡಿಸಿರುವ ರಾಮಕೃಷ್ಣ ಮಿಷನ್‌ ಸಂಸ್ಥೆ ಜತೆ ಗುರುತಿಸಿಕೊಂಡಿರುವ ‘ಸ್ವಚ್ಛ ಮಂಗಳೂರು’ ಮತ್ತು ‘ಹಿಂದೂ ವಾರಿಯರ್’ ತಂಡದ ಸುಮಾರು 50 ಮಂದಿ ಸದಸ್ಯರು ಕೊಡಗು ಜಿಲ್ಲೆಗೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಈ ತಂಡಗಳ ಸದಸ್ಯರು ಈಗಾಗಲೇ ಸಭೆ ಸೇರಿದ್ದು, ಮುಂದಿನ ಕಾರ್ಯ ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಎರಡು ಮಂದಿಯ ತಂಡ ಸರ್ವೇ ನಡೆಸಲು ಮಡಿಕೇರಿಗೆ ತೆರಳಿದ್ದು, ಅಲ್ಲಿಯ ಮಂದಿಯ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅದೇ ರೀತಿ ಮಂಗಳೂರಿನಲ್ಲಿರುವ ಮಡಿಕೇರಿ ಪರಿಸರದವರು ಕೂಡ ಈ ತಂಡದ ಜತೆ ಕೈ ಜೋಡಿಸಲು ಮುಂದಾಗಿದ್ದಾರೆ.

ಮೊದಲ ತಂಡ ರವಿವಾರ ತೆರಳಲಿದೆ
ಅಂದಹಾಗೆ, ಮಡಿಕೇರಿ ಸುತ್ತ- ಮುತ್ತಲಿನ ಮನೆಗಳನ್ನು ಸ್ವಚ್ಛಗೊಳಿಸಿ ವಾಸಿಸಲು ಯೋಗ್ಯವಾಗುವಂತೆ ಮಾಡಿ ಕೊಡುವುದೊಂದೇ ಈ ತಂಡದ ಯೋಚನೆಯಲ್ಲ. ಅದರ ಜತೆಗೆ ಆಯಾ ಮನೆಗಳಿಗೆ ತತ್‌ಕ್ಷಣಕ್ಕೆ ಅಗತ್ಯವಿರುವ ವಸ್ತುಗಳನ್ನು ಪೂರೈಕೆ ಮಾಡುವುದಕ್ಕೂ ಹೆಚ್ಚಿನ ಗಮನಹರಿಸಲಿದೆ. ರವಿವಾರ ಮೊದಲನೇ ತಂಡ ಮಡಿಕೇರಿಯತ್ತ ಪ್ರಯಾಣ ಬೆಳೆಸಲಿದ್ದು, ಇದಾದ ಒಂದೆರಡು ದಿನಗಳ ಬಳಿಕ ಮತ್ತೊಂದು ತಂಡವನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ.

ಸ್ವಚ್ಛತೆ ಕಾರ್ಯಕ್ಕಾಗಿ ಗುದ್ದಲಿ, ಪಿಕ್ಕಾಸು, ಹಾರೆ, ಕತ್ತಿ, ಬಟ್ಟಿ ಸಹಿತ ಮತ್ತಿತರ ವಸ್ತುಗಳ ಅಗತ್ಯವಿದ್ದು, ಅವುಗಳನ್ನು ರಾಮಕೃಷ್ಣ ಮಠದಿಂದ ಕೊಂಡೊಯ್ಯಲಿದ್ದಾರೆ. ಅದರ ಜತೆಗೆ ಒಂದು ಟ್ರಕ್‌ನಲ್ಲಿ ಅಲ್ಲಿನ ಮನೆಗೆ ತತ್‌ಕ್ಷಣಕ್ಕೆ ಬೇಕಾಗುವಂತಹ ಅಗತ್ಯ ವಸ್ತುಗಳಾದ ತಟ್ಟೆ, ಚಮಚ, ಲೋಟ ಸಹಿತ ಮತ್ತಿತರ ಪರಿಕರಗಳನ್ನು ತೆಗೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.

ಧೈರ್ಯ ತುಂಬುವ ಕೆಲಸ ಮಾಡುತ್ತೇವೆ
ಕೊಡಗು ಜಿಲ್ಲೆಯ ಮಂದಿಗೆ ನಮ್ಮ ತಂಡ ಧೈರ್ಯ ತುಂಬುವ ಕೆಲಸ ಮಾಡಲಿದ್ದೇವೆ. ಮಡಿಕೇರಿಯ ಮನೆಗಳಿಗೆ ಸಂಪರ್ಕಿಸಲು ಅಗತ್ಯವಿರುವ ರಸ್ತೆ ಕೆಲಸದಲ್ಲಿಯೂ ನಮ್ಮ ತಂಡದ ಸದಸ್ಯರು ತೊಡಗಲಿದ್ದಾರೆ. ರಾಮಕೃಷ್ಣ ಮಿಶನ್‌ನ ಮೈಸೂರು ಮತ್ತು ಪೊನ್ನಂಪೇಟೆ ತಂಡ ಕೂಡ ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದು, ಅವರ ಜತೆಗೂ ನಾವು ಕೈಜೋಡಿಸಲಿದ್ದೇವೆ. 
 - ಸೌರಜ್‌, ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.