ನಾಗರಪಂಚಮಿ ಸಂಭ್ರಮಕ್ಕೆ ಭರದ ಸಿದ್ಧತೆ


Team Udayavani, Jul 27, 2017, 8:55 AM IST

nagara-panchami-mangalore.jpg

ಮಹಾನಗರ: ನಾಗರ ಪಂಚಮಿ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ಬೆಲೆ ಗಗನಕ್ಕೇರಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಚೆಂಡಿಗೆ 70 ರೂ.ಗಳಿದ್ದ ಮಲ್ಲಿಗೆಗೆ ಬುಧವಾರ 250 ರೂ.ಗಳಾಗಿದೆ. 

ಕೆಲ ದಿನಗಳ ಹಿಂದೆ ನಗರದ ಮಾರ್ಕೆಟ್‌ಗಳಲ್ಲಿ ಚೆಂಡಿಗೆ 60, 70 ರೂ.ಗಳಂತೆ ಮಲ್ಲಿಗೆ ಮಾರಾಟವಾಗುತ್ತಿತ್ತು. ಆದರೆ ಮಂಗಳವಾರ ಏಕಾಏಕಿ 90 ರೂ. ಗಳಷ್ಟು ಬೆಲೆ ಏರಿಕೆಯಾಗಿದ್ದು, 180 ರೂ.ಗಳಿಗೆ ಮಾರಾಟವಾಗುತ್ತಿತ್ತು. 

ಬುಧವಾರ ಮತ್ತೆ 70 ರೂ.ಗಳಷ್ಟು ಏರಿಕೆ ಕಂಡಿದ್ದು, ಒಂದು ಚೆಂಡಿನ ಬೆಲೆ 250 ರೂ.ಗಳಾಗಿವೆ. ಆ ಮೂಲಕ ಕಳೆದ ಎರಡೇ ದಿನದಲ್ಲಿ ಮಲ್ಲಿಗೆ ಬೆಲೆಯಲ್ಲಿ ಸುಮಾರು 180 ರೂ.ಗಳಷ್ಟು ಏರಿಕೆ ಕಂಡಿದೆ.

ಉಳಿದಂತೆ ಹಿಂಗಾರಕ್ಕೆ 250 ರೂ. ಇದ್ದರೆ, ಗುಲಾಬಿಗೆ ಮೊದಲಿನಂತೆಯೇ 5 ರೂ. ಬೆಲೆ ಇದೆ. ಪಂಚಮಿ ಹಬ್ಬಕ್ಕಾಗಿ ಸೀಯಾಳ ಖರೀದಿ ಭರಾಟೆಯೂ ಜೋರಾಗಿದ್ದು, ನಗರದ ಕೆಲವೆಡೆ 25 ರೂ.ಗಳಿಂದ 30 ರೂ.ಗಳಿದ್ದ ಸೀಯಾಳ ಬೆಲೆ 40 ರೂ. ಗಳಷ್ಟು ಹೆಚ್ಚಾಗಿದೆ. ಗೆಂದಾಳೆ ಸೀಯಾಳಕ್ಕೂ ಕೆಲವೆಡೆ 40 ರೂ.ಗಳಿಂದ 45 ರೂ.ಗಳನ್ನು ತೆಗೆದುಕೊಳ್ಳಲಾಗುತ್ತಿದೆ. 

ಆದರೆ ಹಣ್ಣುಗಳ ಬೆಲೆಯಲ್ಲಿ ಅಷ್ಟೇನೂ ಹೆಚ್ಚಳ ಆಗಿಲ್ಲ. ಬಾಳೆಹಣ್ಣು ಬೆಲೆ 40 ರೂ. ಗಳಿಂದ 50 ರೂ. ಗಳಿಗೆ ಏರಿಕೆಯಾದರೆ, ಉಳಿದೆಲ್ಲ ಹಣ್ಣುಗಳ ಬೆಲೆ ಸ್ಥಿರವಾಗಿದೆ. ಕಿತ್ತಳೆಗೆ 50 ರೂ.ಗಳಿಂದ 60 ರೂ., ಸೇಬು ಹಣ್ಣಿಗೆ 140 ರೂ. ಮತ್ತು 200 ರೂ.ಗಳಿದ್ದು, ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಸೆಂಟ್ರಲ್‌ ಮಾರ್ಕೆಟ್‌ನ ಅಧ್ಯಕ್ಷರು ತಿಳಿಸಿದ್ದಾರೆ.  

ಜಿಲ್ಲೆಯಾದ್ಯಂತ ಗುರುವಾರ ನಾಗರ ಪಂಚಮಿ ಸಂಭ್ರಮ. ಪ್ರಸಿದ್ಧ ನಾಗಾರಾಧನಾ ತಾಣಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರ ಜಿಲ್ಲೆಯಲ್ಲೇ ಇರುವುದರಿಂದ ನಾಗರ ಪಂಚಮಿ ಈ ಭಾಗದ ಜನಗಳಿಗೆ ವಿಶೇಷ ಹಬ್ಬ. ಅದಕ್ಕಾಗಿಯೇ ಜಿಲ್ಲೆಯ ಜನತೆ ಈಗಾಗಲೇ ಭರ್ಜರಿ ಸಿದ್ಧತೆ  ಆರಂಭಿಸಿದ್ದು, ಹೂವು, ಹಣ್ಣು, ಸೀಯಾಳ ಖರೀದಿ ಭರಾಟೆ ಬಿರುಸಿನಿಂದ ನಡೆಯುತ್ತಿದೆ. 

ನಾಗನಿಗೆ ಪ್ರಿಯವಾದ ಕೇದಗೆ ಮತ್ತು ಸಂಪಿಗೆ ಹೂವಿಗೆ ನಗರದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. 

ತರಕಾರಿ ಬೆಲೆ ಹೆಚ್ಚಳ
ಹಬ್ಬದ ಪ್ರಯುಕ್ತ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಏರಿಕೆ ಕಂಡ ಟೊಮೇಟೊ ಈಗ 70 ರೂ.ಗಳಿಗೆ ಮಾರಾಟವಾಗುತ್ತಿದೆ. ಈರುಳ್ಳಿ 15 ರೂ., ಬೀನ್ಸ್‌  56 ರೂ., ಸೌತೆ 34 ರೂ., ಅಲಸಂಡೆ 50 ರೂ., ತೊಂಡೆಕಾಯಿ 50 ಮತ್ತು 120 ರೂ. ಗಳಿಗೆ ಮಾರಾಟವಾಗುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುವರಿ ತರಕಾರಿ ಅವಶ್ಯವಿದ್ದು, ಹಾಸನ, ಚಿಕ್ಕಮಗಳೂರು, ಕೋಲಾರ ಮುಂತಾದೆಡೆಗಳಿಂದ ತರಿಸಲಾಗುತ್ತಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ದೇವಸ್ಥಾನಗಳಲ್ಲಿ ಪೂಜಾ ಸಿದ್ಧತೆ
ನಾಗರಪಂಚಮಿ ಹಿನ್ನೆಲೆಯಲ್ಲಿ ನಗರದ ವಿವಿಧ  ದೇವಾಲಯಗಳಲ್ಲಿಯೂ ವಿಶೇಷ ಪೂಜೆ, ಪುರಸ್ಕಾರಗಳಿಗೆ ಸಿದ್ಧತೆ ನಡೆಯುತ್ತಿದೆ. ಪ್ರಸಿದ್ಧ ನಾಗಾರಾಧನಾ ತಾಣವಾದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗದೇವರ ಆರಾಧನೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಇನ್ನು ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಪಾಂಡೇಶ್ವರ ಮಹಾಲಿಂಗೇಶ್ವರ, ಮಂಗಳಾದೇವಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥನ ಸನ್ನಿಧಿ ಸಹಿತ ನಗರದ ವಿವಿಧ ದೇವಸ್ಥಾನಗಳಲ್ಲಿ, ನಾಗಬನಗಳಲ್ಲಿ ನಾಗರ ಪಂಚಮಿ ನಡೆಯಲಿದೆ. ವಿವಿಧ ಧಾರ್ಮಿಕ ಸ್ಥಳಗಳಲ್ಲಿ ತಂಬಿಲ ಸೇವೆ, ನಾಗರಕಟ್ಟೆಯಲ್ಲಿ ವಿಶೇಷ ಪೂಜೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ ನಡೆಯಲಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.