ತುಂಬೆ ಡ್ಯಾಂ ಹೂಳೆತ್ತಲು ಸಿದ್ಧತೆ ಪೂರ್ಣ
ಜಿಲ್ಲಾಧಿಕಾರಿ ಅನುಮತಿ ಬಳಿಕ ಕಾಮಗಾರಿ ಆರಂಭ
Team Udayavani, May 28, 2019, 6:02 AM IST
ಬಂಟ್ವಾಳ: ನೇತ್ರಾವತಿ ನದಿಯ ತುಂಬೆ ಡ್ಯಾಂ ಪರಿಸರದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ನದಿಯಲ್ಲಿ ಸೇರಿರುವ ಹೂಳೆತ್ತುವ ಕೆಲಸಕ್ಕೆ ಸಿದ್ಧತೆ ನಡೆಯುತ್ತಿದೆ.
ದಿಲ್ಲಿಯ ನೆಲ್ಕೊ ಕಂಪೆನಿ ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಮಂಗಳೂರಿನ ಆಸಿಫ್ ನೇತೃತ್ವ ತಂಡ ಕೆಲಸ ನಿರ್ವಹಿಸಲಿದೆ. ಸೋಮವಾರ ಸಂಜೆ ಡ್ರೆಜ್ಜಿಂಗ್ ಯಂತ್ರವನ್ನು ನೀರಿಗಿಳಿಸಲಾಗಿದೆ.
ಹೂಳೆತ್ತುವುದಕ್ಕೆ ಈಗಾಗಲೇ ಪಂಟೂನ್ ತೇಲುವ ಗೋಲಗಳನ್ನು ನೀರಿನಲ್ಲಿ ಸ್ಥಾಪಿಸಲಾಗಿದೆ. ಡ್ರೆಜ್ಜಿಂಗ್ ಪಂಪನ್ನು ಅಳವಡಿಸಿ, ಪೈಪ್ಲೈನ್ ಮೂಲಕ ನದಿಯಲ್ಲಿ ತುಂಬಿರುವ ಮರಳು, ಮಣ್ಣು, ಕಸವನ್ನು ಮೇಲೆತ್ತುವುದಕ್ಕೆ ಸಿದ್ಧತೆ ಮಾಡಲಾಗಿದೆ.
ಅನುಮತಿ ಬಳಿಕ ಕೆಲಸ
ಮೊದಲಿಗೆ ಹೂಳೆತ್ತುವ ಡೆಮೋ ಚಿತ್ರೀಕರಿಸಿ ಜಿಲ್ಲಾಧಿಕಾರಿ ಮತ್ತು ಗಣಿ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗುತ್ತದೆ. ಅವರು ವೀಕ್ಷಿಸಿ ಬಳಿಕ ಅನುಮತಿ ನೀಡಿದ ಅನಂತರ ಕೆಲಸ ಆರಂಭಿಸಲಾಗುತ್ತದೆ. ವಾರದ ಹಿಂದೆ ಗಣಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಇ -ಟೆಂಡರ್ ಮೂಲಕ ಕೆಲಸದ ಗುತ್ತಿಗೆಯನ್ನು ವಹಿಸಲಾಗಿದೆ.
ಡ್ರೆಜ್ಜಿಂಗ್ ಯಂತ್ರವು ಗಂಟೆಗೆ 100 ಎಂ.ಕ್ಯೂ. (ಕ್ಯುಬಿಕ್ ಮೀಟರ್) ಹೂಳನ್ನು ಮೇಲೆತ್ತಬಲ್ಲುದಾಗಿದೆ. ಹೂಳು ತೆಗೆಯುವ ಕೆಲಸ ನಿರ್ವಹಣೆ ತಂತ್ರಜ್ಞರು ವಿವಿಧ ಬಂದರುಗಳಲ್ಲಿ ಸಾಕಷ್ಟು ವರ್ಷಗಳಿಂದ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಒರಿಸ್ಸಾ ಮತ್ತು ಕೊಚ್ಚಿನ್ನಲ್ಲಿ ಕೆಲಸ ನಿರ್ವಹಿಸಿದ ಅನುಭವಿಗಳಾಗಿದ್ದಾರೆ.
ಸ್ಥಳೀಯವಾಗಿ ಇಲ್ಲಿನ ಕೆಲಸ ನಿರ್ವಹಣೆಗೆ ಬೇಕಾಗುವ ವ್ಯವಸ್ಥೆಗಳನ್ನು ಹೊಂದಿಸಿಕೊಡುವ, ಅವಶ್ಯ ಸಾಮಗ್ರಿಗಳನ್ನು ಒದಗಿಸುವ ಕೆಲಸವನ್ನು ನಾವು ಮಾಡುತ್ತಿದ್ದು, ಡಿಸಿ ಅಂತಿಮ ಸೂಚನೆ ಬಳಿಕ ಕೆಲಸ ನಡೆಯಲಿದೆ.
– ಶಂಸೀರ್ ಸ್ಥಳೀಯ ಗುತ್ತಿಗೆ ನಿರ್ವಾಹಕರು
ನೇತ್ರಾವತಿ ನದಿಯಲ್ಲಿ ಹೂಳೆತ್ತುವ ಕೆಲಸ ಸುಮಾರು 3 ತಿಂಗಳ ಕಾಲ ನಡೆಯುವ ಸಾಧ್ಯತೆ ಇದೆ. ಡಿಸಿ ಆದೇಶದಂತೆ ಡ್ಯಾಂ ವಠಾರದಲ್ಲಿ ಕೆಲಸ ನಿರ್ವಹಿಸಲಾಗುತ್ತದೆ. ನೆರೆ ಬಂದರೂ ಕೆಲಸ ಮುಂದುವರಿಸ ಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಯಂತ್ರಗಳ ಜೋಡಣೆ ನಡೆದಿದೆ.
-ಧರ್ಮೆàಶ್, ತಾಂತ್ರಿಕ ವ್ಯವಸ್ಥೆ ನಿರ್ವಾಹಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ