ಕಾಮಗಾರಿ ಆರಂಭದ ಮೊದಲು ವ್ಯವಸ್ಥಿತ ಯೋಜನೆ ರೂಪಿಸಿ


Team Udayavani, Mar 22, 2021, 4:20 AM IST

Untitled-1

ಸಾಂದರ್ಭಿಕ ಚಿತ್ರ

ಮಂಗಳೂರು ನಗರದಲ್ಲಿ ಪ್ರಸ್ತುತ ಕಾಂಕ್ರೀಟ್‌ ಕಾಮಗಾರಿ ಕೈಗೊಂಡಿರುವ ರಸ್ತೆಗಳಲ್ಲಿ ಬಹುತೇಕ ಕಡೆ ವ್ಯವಸ್ಥಿತ ಕಾರ್ಯಯೋಜನೆ ಅಥವಾ ಸರಿಯಾದ ತಾಂತ್ರಿಕ ಸಲಹೆಗಳಿಲ್ಲದೆ, ಸರಕಾರದ ಅನುದಾನ ವಿನಿ ಯೋಗಿ ಸುವ ತರಾತುರಿಯಲ್ಲಿ ಕಾಮಗಾರಿಗಳನ್ನು ನಡೆಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಕೋಟ್ಯಂತರ ರೂ. ಖರ್ಚು ಮಾಡಿ ರಸ್ತೆ ವಿಸ್ತರಣೆ, ಚರಂಡಿ ಕಾಮಗಾರಿ, ಫುಟ್‌ಪಾತ್‌ ನಿರ್ಮಾಣ ಸಹಿತ ಹಲವಾರು ರೀತಿಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ವಿಪರ್ಯಾಸವೆಂದರೆ, ಕಾಂಕ್ರೀಟ್‌ ಹಾಕಲಾದ ರಸ್ತೆಯನ್ನು ಒಂದೆರಡು ವಾರಗಳಲ್ಲೇ ಅಗೆದು ಜನರ ತೆರಿಗೆ ಹಣವನ್ನು ವ್ಯರ್ಥಗೊಳಿಸಲಾಗುತ್ತಿದೆ.

ಇದಕ್ಕೆ ಮುಖ್ಯ ಕಾರಣ ವ್ಯವಸ್ಥಿತ ಕಾರ್ಯ ಯೋಜನೆ ಇಲ್ಲದಿರುವುದು, ಇಲಾಖೆಗಳ ನಡುವಿನ ಸಮನ್ವಯದ ಕೊರತೆ, ಕಾಮಗಾರಿ ಕೈಗೆತ್ತಿಕೊಳ್ಳುವ ಮೊದಲು ಸರಿಯಾದ ತಾಂತ್ರಿಕ ಸಲಹೆಗಳನ್ನು ಪಡೆದುಕೊಳ್ಳದಿರುವುದು. ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬೇಕಾದರೆ, ಆ ಭಾಗದಲ್ಲಿ ಹಾದು ಹೋಗಿರುವ ಯುಟಿಲಿಟಿ ಕಾಮಗಾರಿಗಳನ್ನು ಕಡೆಗಣಿಸಿರುವುದು. ಮುಖ್ಯವಾಗಿ ನೀರು ಸರಬರಾಜು ಕೊಳವೆಗಳು, ಒಳಚರಂಡಿ ವ್ಯವಸ್ಥೆಗಳ ದುರಸ್ತಿ, ವಿದ್ಯುತ್‌ ಕಂಬ, ತಂತಿಗಳು, ಒಳಚರಂಡಿ ಮುಂತಾದವುಗಳನ್ನು ರಸ್ತೆ ಮಧ್ಯದಲ್ಲೇ ಉಳಿಸಿಕೊಂಡು ಕಾಮಗಾರಿ ನಡೆಸಲಾಗಿದೆ. ಈ ಯುಟಿಲಿಟಿ ಸೇವೆಗಳಲ್ಲಿ ಸಮಸ್ಯೆ ಎದುರಾದಾಗ ಕಾಂಕ್ರೀಟ್‌ ಒಡೆದು ಇವುಗಳನ್ನು ಸರಿಪಡಿಸಬೇಕಾದ ಸ್ಥಿತಿಯಿದೆ. ಎಲ್ಲೆಡೆ ಆಯಾಭಾಗದಲ್ಲಿ ಹಾದು ಹೋಗಿರುವ ಯುಟಿಲಿಟಿ ಸೇವೆಗಳನ್ನು ವ್ಯವಸ್ಥಿತ ರೀತಿ ಸ್ಥಳಾಂತರಿಸಿದ ಬಳಿಕ ಕಾಂಕ್ರೀಟ್‌ ರಸ್ತೆಯನ್ನು ನಿರ್ಮಿಸಬೇಕು. ಆದರೆ ಪರಿಸ್ಥಿತಿ ಹೇಗಿದೆ ಅಂದರೆ, ಹೊಸದಾಗಿ ಕಾಂಕ್ರೀಟ್‌ ಹಾಕಿದ ಒಂದು ರಸ್ತೆಯಲ್ಲಿ ಒಳಚರಂಡಿ ಸಮಸ್ಯೆ ಎದುರಾದರೆ, ಒಂದರ ಅನಂತರ ಒಂದರಂತೆ ಪ್ರತಿ ತಿಂಗಳಿಗೊಮ್ಮೆ ಮ್ಯಾನ್‌ಹೋಲ್‌ ಇರುವ ಜಾಗವನ್ನು ಅಗೆದು-ಮುಚ್ಚುವುದೇ ಪಾಲಿಕೆಯವರಿಗೆ ಮುಖ್ಯ ಕೆಲಸವಾಗಿ ಬಿಟ್ಟಿದೆ. ಒಂದೇ ರಸ್ತೆಯಲ್ಲಿ 1 ಕಿ.ಮೀ. ವ್ಯಾಪ್ತಿಯಲ್ಲಿ 4 ಕಡೆ ಒಳಚರಂಡಿ ಕಾಮಗಾರಿಗಾಗಿ ಕಾಂಕ್ರೀಟ್‌ ರಸ್ತೆಯನ್ನು ಅಗೆಯಲಾಗಿದೆ. ಇದರಿಂದ ಒಂದಡೆ ಸರಕಾರದ ಹಣ ದುಂದುವೆಚ್ಚವಾದರೇ ಇನ್ನೊಂದೆಡೆ ಸಾರ್ವಜನಿಕರು ಅನಗತ್ಯ  ಕಿರಿಕಿರಿಯನ್ನೂ ಎದುರಿಸಬೇಕಾಗುತ್ತದೆ.

ಕಾಮಗಾರಿಗಳನ್ನು ನಡೆಸುವಾಗ ಆ ರಸ್ತೆಗಳಲ್ಲಿ ಯುಟಿಲಿಟಿ ವ್ಯವಸೆœಗಳ ಬಗ್ಗೆ ಪರಿಶೀಲನೆ ನಡೆಸುವುದಿಲ್ಲವೇ? ಸಂಬಂಧಪಟ್ಟ ಇಲಾಖೆಗಳ ನಡುವೆ ಸಮನ್ವಯ ಇಲ್ಲವೆ? ಇದಕ್ಕೆ ಬಳಸುವ ಅನುದಾನಗಳು ಸರಕಾರದ್ದು. ಅಂದರೆ ಸಾರ್ವಜನಿಕರ ಹಣವನ್ನು ಈ ರೀತಿಯಾಗಿ ದುರ್ವಿನಿಯೋಗ ಮಾಡುವುದು ಎಷ್ಟು ಸರಿ?

ನಗರದಲ್ಲಿ ಅಭಿವೃದ್ಧಿ ಕೆಲಸದ ಹೆಸರಿನಲ್ಲಿ ಇಂತಹ ಹೊಣೆಗೇಡಿತದ ನಡವಳಿಕೆಗಳಿಗೆ ಇತಿಶ್ರೀ ಹಾಕುವುದಕ್ಕೆ ಕಠಿನ ಕ್ರಮಗಳು ಆಗಬೇಕಾಗಿದೆ.  ಕಾಂಕ್ರೀಟ್‌ ಹಾಕುವ ಮೊದಲು ಆ ರಸ್ತೆಯಲ್ಲಿರುವ ಎಲ್ಲ ಯುಟಿಲಿಟಿ  ವ್ಯವಸ್ಥೆಗಳನ್ನು ಪರಿಶೀಲಿಸಿ ಆವಶ್ಯಕ ಕ್ರಮಗಳನ್ನು ಕೈಗೊಂಡು ಮುಂದಕ್ಕೆ ಸಮಸ್ಯೆ ಬಾರದ ರೀತಿ ಸುಸಜ್ಜಿತಗೊಳಿಸಿದ ಬಳಿಕವೇ ಕಾಮಗಾರಿ ಪ್ರಾರಂಭಿಸುವತ್ತ ಇನ್ನಾದರೂ ಪಾಲಿಕೆ ಹಾಗೂ ಸ್ಮಾರ್ಟ್‌ ನಿಗಮದ ಮೇಲಧಿಕಾರಿಗಳು ಮುತುವರ್ಜಿ ವಹಿಸಲಿ.

-ಸಂ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.