TB ಔಷಧದೊಂದಿಗೆ ಪೌಷ್ಟಿಕ ಆಹಾರ ಸೇವನೆಯಿಂದ ಕ್ಷಯ ರೋಗ ನಿವಾರಣೆ: ಡಾ| ಕಿಶೋರ್‌ ಕುಮಾರ್‌


Team Udayavani, Aug 16, 2023, 11:25 PM IST

TB ಔಷಧದೊಂದಿಗೆ ಪೌಷ್ಟಿಕ ಆಹಾರ ಸೇವನೆಯಿಂದ ಕ್ಷಯ ರೋಗ ನಿವಾರಣೆ: ಡಾ| ಕಿಶೋರ್‌ ಕುಮಾರ್‌

ಮಂಗಳೂರು: ನಿಗದಿತ ಔಷಧದ ಜತೆಗೆ ಪೌಷ್ಟಿಕಾಂಶಯುಕ್ತ ಆಹಾರಗಳ ಸೇವನೆಯಿಂದ ಕ್ಷಯ ರೋಗವನ್ನು ಆದಷ್ಟು ಶೀಘ್ರ ನಿರ್ಮೂಲ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌ ಹೇಳಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಕೆಐಒಸಿಎಲ್‌ ವತಿಯಿಂದ ನಿ-ಕ್ಷಯ್‌ ಮಿತ್ರದಡಿ ಜಿಲ್ಲೆಯ ಒಟ್ಟು 535 ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ವಿತರಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರವು 2025ಕ್ಕೆ ಕ್ಷಯ ಮುಕ್ತ ಭಾರತವನ್ನು ಮಾಡುವ ಗುರಿ ಹೊಂದಿದೆ. ಈ ಕಾರ್ಯಕ್ರಮಕ್ಕೆ ನಿ-ಕ್ಷಯ್‌ ಮಿತ್ರ ಸಹಕಾರಿಯಾಗಿದೆ. “ನಿ-ಕ್ಷಯ್‌ ಮಿತ್ರ’ ಎಂದರೆ ಕ್ಷಯರೋಗ ವನ್ನು ಕೊನೆಗಾಣಿಸಲು ಮಾಡುವ ಜೊತೆಗಾರ ಎಂದರ್ಥ ಎಂದರು.

ಈ ಯೋಜನೆಯಲ್ಲಿ ಕ್ಷಯರೋಗಿಗೆ ಕನಿಷ್ಠ 6 ತಿಂಗಳಿನಿಂದ ಮೂರು ವರ್ಷದವರೆಗೆ ಪೌಷ್ಟಿಕ ಆಹಾರ ವಿತರಣೆ, ರೋಗ ನಿರ್ಣಯಕ್ಕೆ ಸಹಾಯ ಮಾಡುವುದು, ಉದ್ಯೋಗ ಕೊಡಿಸುವುದು ಕಡ್ಡಾಯವಾಗಿರು ತ್ತದೆ. ಖಾಸಗಿ ಸಂಸ್ಥೆಯವರು, ಕೈಗಾರಿಕೋದ್ಯಮಿಗಳು, ರಾಜಕಾರಣಿ ಗಳು, ಸೇವಾ ಸಂಸ್ಥೆಯವರು ಹಾಗೂ ಇನ್ನಿತರರು ವೈಯಕ್ತಿಕವಾಗಿಯೂ ಈ ಯೋಜನೆಗೆ ಕೈ ಜೋಡಿಸಬಹುದಾಗಿದೆ. ಇದರಿಂದ ಅವರಿಗೆ ಆದಾಯ ತೆರಿಗೆ ವಿನಾಯಿತಿ ಮತ್ತು ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಜನರ ಜವಾಬ್ದಾರಿಯೂ ಇದೆ
ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್‌ ಕೆ. ಮಾತನಾಡಿ, ಕ್ಷಯರೋಗ ನಿವಾರಣೆಗೊಳಿಸುವ ಜವಾಬ್ದಾರಿ ಬರೀ ಆರೋಗ್ಯ ಇಲಾಖೆ ಯದ್ದಲ್ಲ. ಇದರಲ್ಲಿ ಸಾರ್ವಜನಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಜವಾಬ್ದಾರಿಯೂ ಇದೆ ಎಂದು ತಿಳಿಸಿದರು.

ಕೆಐಒಸಿಎಲ್‌ ಸಂಸ್ಥೆಯ ಅಧ್ಯಕ್ಷ ಟಿ. ಸಾಮಿನಾಥನ್‌ ಮಾತನಾಡಿ, ಈ ರೀತಿಯ ಸೇವೆಗಳಿಗೆ ನಮ್ಮ ಸಂಸ್ಥೆಯು ಸದಾ ಮುಂದಿದ್ದು, ಈ ಹಿಂದೆಯೂ ಸಹ ಕೋವಿಡ್‌ ಸಮಯದಲ್ಲಿ ಆಕ್ಸಿಜನ್‌ ಪ್ಲಾಂಟ್‌ ಒದಗಿಸಿದೆ ಹಾಗೂ ವೆನಾÉಕ್‌ ಆಸ್ಪತ್ರೆಗೆ ಮೆಡಿಕಲ್‌ ಉಪಕರಣಗಳನ್ನು ನೀಡಿದೆ. ಪೌಷ್ಟಿಕ ಆಹಾರದ ವಿತರಣೆಯಿಂದ ಕ್ಷಯ ಮುಕ್ತ ಸಮಾಜ ಮಾಡಲು ಸಹಕಾರಿಯಾಗಬಹು ದೆಂದು ತಿಳಿಸಿದರು.

ಕೆಐಒಸಿಎಲ್‌ ನಿರ್ದೇಶಕರು, ಸಿಆರ್‌ ಎಸ್‌ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬಂದಿ ಭಾಗವಹಿಸಿದ್ದರು. ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಬದ್ರುದ್ದೀನ್‌ ಎಂ.ಎನ್‌. ವಂದಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.