ಜು.23 : ಉಜ್ವಲ ಫಲಾನುಭವಿಗಳ ಸಮಾವೇಶ


Team Udayavani, Jul 22, 2017, 7:10 AM IST

KUMAR.gif

ಮಂಗಳೂರು: ಉಚಿತ ಅಡುಗೆ ಅನಿಲ ಸಂಪರ್ಕ ಹಾಗೂ ಗ್ಯಾಸ್‌ಸ್ಟವ್‌ ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಸಮಾವೇಶ ಹಾಗೂ ಮಾಹಿತಿ ಕಾರ್ಯಕ್ರಮ ಜು.23ರಂದು ಬ್ರಹ್ಮರಕೂಟ್ಲುವಿನಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ 11 ಗಂಟೆಯಿಂದ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಪಡೆಯುವ ಬಗ್ಗೆ ಮಾಹಿತಿ ಹಾಗೂ ಅರ್ಜಿ ನೀಡಲು ಬಾಕಿ ಇರುವವರರಿಂದ ಅರ್ಜಿ ಸ್ವೀಕಾರ, ಉಚಿತ ಅಡುಗೆ ಅನಿಲ ಸಂಪರ್ಕ ಹಾಗೂ ಗ್ಯಾಸ್‌ಸ್ಟವ್‌ ವಿತರಣೆ ಮುಂತಾದುವುಗಳು ಒಳಗೊಂಡಿದೆ. ಜಿಲ್ಲೆಯ 46 ಎಲ್‌ಪಿಜಿ ವಿತರಕಕರು ಪಾಲ್ಗೊಳ್ಳುವರು ಎಂದರು.

ಜಿಲ್ಲೆಯಲ್ಲಿ 44,000 ಫಲಾನುಭವಿಗಳು
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ದೇಶದಲ್ಲಿರುವ ಬಡವರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇದರಂತೆ ದ.ಕನ್ನಡ ಜಿಲ್ಲೆಯಲ್ಲಿ 2011ರ ಸಾಮಾಜಿಕ, ಅರ್ಥಿಕ ಗಣತಿಯಂತೆ 44,000 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಈಗಾಗಲೇ 4,000 ಮಂದಿಗೆ ವಿತರಿಸಲಾಗಿದೆ ಎಂದು ಸಂಸದರು ತಿಳಿಸಿದರು.

ಉಜ್ವಲ ಪ್ಲಸ್‌ನಲ್ಲಿ ಇನ್ನಷ್ಟು ಅವಕಾಶ
ಬಾಕಿಯುಳಿದಿರುವ ಫಲಾನುಭವಿಗಳು ಕೂಡ ಈ ಯೋಜನೆಯ ಪ್ರಯೋಜನವನ್ನು ಪಡೆಯುವ ನಿಟ್ಟಿನಲ್ಲಿ ಉಜ್ವಲ ಪ್ಲಸ್‌ ಎಂಬ ಯೋಜನೆ ರೂಪಿಸಲಾಗಿದ್ದು ಆ.15ರಂದು ಪ್ರಧಾನಿಯವರು ಘೋಷಿಸಲಿದ್ದಾರೆ. ಈ ಯೋಜನೆಗೂ ಈಗಲೇ ಅರ್ಜಿ ಸ್ವೀಕರಿಸಲಾಗುವುದು ಎಂದವರು ವಿವರಿಸಿದರು.ಮಾಜಿ ಶಾಸಕ ಕೆ. ರುಕ್ಮಯ ಪೂಜಾರಿ, ಬಿಜೆಪಿ ನಾಯಕ ರಾಜೇಶ್‌ ನಾೖಕ್‌ ಉಳಿಪಾಡಿ ಅವರು ಉಪಸ್ಥಿತರಿದ್ದರು.

ಉಜ್ವಲ ಗ್ರಾಹಕರಿಗೆ ವಿಮಾ ಸುರಕ್ಷೆ 
ಉಜ್ವಲ ಯೋಜನೆಯಡಿ ಎಲ್‌ಪಿಜಿ ಗ್ರಾಹಕರಿಗೆ ವಿಮಾ ಸುರಕ್ಷೆ ಒದಗಿಸಲಾಗುತ್ತಿದೆ. ಸಾವು ಸಂಭವಿಸಿದಲ್ಲಿ 6 ಲಕ್ಷ ರೂ.ವರೆಗೆ ಪ್ರತಿ ವ್ಯಕ್ತಿಗೆ ಹಾಗೂ ಪ್ರತಿ ದುರ್ಘ‌ಟನೆಗೆ ವ್ಯಕ್ತಿಗತ ಕವರೇಜು ಇರುತ್ತದೆ. ಪ್ರತಿ ದುರ್ಘ‌ಟನೆಗೆ ಒಟ್ಟು 30 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ವಿಮೆ, ಗರಿಷ್ಠ 2 ಲಕ್ಷ ರೂ.ವರೆಗೆ ಪ್ರತಿ ವ್ಯಕ್ತಿಗೆ ಹಾಗೂ ತತ್‌ಕ್ಷಣಕ್ಕೆ 25,000 ರೂ. ವೈದ್ಯಕೀಯ ಪರಿಹಾರ ಹಾಗೂ ಪ್ರತಿ ದುರ್ಘ‌ಟನೆಗೆ ಅಧಿಕೃತ ಗ್ರಾಹಕರಿಗೆ, ನೋಂದಾಯಿತ ವಿಳಾಸಕ್ಕೆ ಗರಿಷ್ಠ 2 ಲಕ್ಷ ರೂ. ಆಸ್ತಿ ಹಾನಿಗೆ ಪರಿಹಾರ ಲಭಿಸುತ್ತದೆ. ಸಂಬಂಧಪಟ್ಟ ಗ್ಯಾಸ್‌ ವಿತರಕರಿಗೆ ಲಿಖೀತರೂಪದಲ್ಲಿ ತಿಳಿಸಿದಲ್ಲಿ ಅವರು ಸಂಬಂಧಪಟ್ಟ ಕ್ಷೇತ್ರೀಯ /ವಲಯ ಕಾರ್ಯಾಲಯಗಳಿಗೆ ಹಾಗೂ ವಿಮಾ ಕಂಪೆನಿಗೆ ತಿಳಿಸುತ್ತಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ವಿವರಿಸಿದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.