ಪೂರ್ತಿ ಮುಳುಗಿದ ಪ್ರಿನ್ಸೆಸ್‌ ಮಿರಾಲ್‌ ಹಡಗು


Team Udayavani, Jun 24, 2022, 6:49 AM IST

ಪೂರ್ತಿ ಮುಳುಗಿದ ಪ್ರಿನ್ಸೆಸ್‌ ಮಿರಾಲ್‌ ಹಡಗು

ಮಂಗಳೂರು: ಮಂಗಳೂರಿನ ಉಳ್ಳಾಲ ಬಟ್ಟಪ್ಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ತಳತಾಗಿ ನಿಂತಿದ್ದ ಪ್ರಿನ್ಸೆಸ್‌ ಮಿರಾಲ್‌ ಸರಕಿನ ಹಡಗು ಬಹುತೇಕ ಪೂರ್ತಿಯಾಗಿ ಮುಳುಗಿದೆ.

ಸಮುದ್ರ ತೀರಾ ಪ್ರಕ್ಷುಬ್ಧ ಸ್ಥಿತಿಯಲ್ಲಿ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಹಡಗಿನ ರಂಧ್ರ ಮುಚ್ಚುವ ಯಾವುದೇ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿಲ್ಲ. ಹಡಗಿನ ಮಾಲಕರು ನಿಯೋಜಿಸಿರುವ ಸ್ಮಿತ್‌ ಸಾಲ್ವೇಜ್‌ ಏಜೆನ್ಸಿಯವರು ಮಂಗಳೂರಿಗೆ ಗುರುವಾರ ಆಗಮಿಸಿದ್ದು ಹಡಗಿನ ಪ್ರಾಥಮಿಕ ತಪಾಸಣೆ ನಡೆಸಿದ್ದಾರೆ. ಜಿಲ್ಲಾಡಳಿತದ ಪರವಾಗಿ ಮಂಗಳೂರು ಸಹಾಯಕ ಆಯುಕ್ತರು ಮತ್ತು ಕೋಸ್ಟ್‌ಗಾರ್ಡ್‌ ಡಿಐಜಿ ಏಜೆನ್ಸಿಯವರೊಂದಿಗೆ ಹಡಗು ಮುಳುಗಿರುವ ಜಾಗಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಹಡಗಿನಿಂದ ತೈಲ ಸೋರಿಕೆಯಾಗದಂತೆ ಅದರ ಸುತ್ತಲೂ ಆಯಿಲ್‌ ಬೂಮ್‌ಗಳನ್ನು ಅಳವಡಿಸಲಾಗಿದೆ. ಹಾಗಾಗಿ ತೈಲ ಸೋರಿಕೆಯ ಭೀತಿ ಇಲ್ಲ. ಆದರೂ ಅದರಲ್ಲಿರುವ ತೈಲ ಹಾಗೂ 8,000 ಟನ್‌ ಸೀrಲ್‌ ಕಾಯಿಲ್‌ಗ‌ಳನ್ನು ತೆರವು ಮಾಡುವ ವಿಧಾನದ ಬಗ್ಗೆ ಸ್ಮಿತ್‌ ಸಾಲ್ವೇಜ್‌ ಏಜೆನ್ಸಿಯವರು ಕಾರ್ಯ ತಂತ್ರ ರೂಪಿಸುವ ಸಾಧ್ಯತೆ ಇದೆ.

ಮಲೇಷ್ಯಾದಿಂದ ಲೆಬನಾನ್‌ಗೆ ಸರಕು ಸಾಗಿಸುತ್ತಿದ್ದ ಈ ನೌಕೆ ಮಂಗಳವಾರ ಸಮುದ್ರ ಮಧ್ಯೆ ಅಪಾಯಕ್ಕೆ ಸಿಲುಕಿತ್ತು.

ಕೋಸ್ಟ್‌ಗಾರ್ಡ್‌ ಸಿಬಂದಿ 15 ಮಂದಿಯನ್ನು ರಕ್ಷಿಸಿದ್ದರು. ಕಳೆದೆರಡು ದಿನಗಳಿಂದ ನಿಧಾನವಾಗಿ ಮುಳುಗುತ್ತಿದ್ದ ನೌಕೆ ಗುರುವಾರ ಪೂರ್ತಿ ಮುಳುಗಿದ್ದು, ಅದರ ಕ್ರೇನ್‌ಗಳು ಮಾತ್ರವೇ ಗೋಚರವಾಗುತ್ತಿವೆ.

ತೈಲ ಸೋರಿಕೆ ತಡೆಗೆ ಸೂಚನೆ :

ನೌಕೆ ಮುಳುಗಡೆಯಾಗಿರು ವುದರಿಂದ ಅದರಲ್ಲಿದ್ದ ಅಗಾಧ ಪ್ರಮಾಣದ ತೈಲ ಸೋರಿಕೆ ಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕೋಸ್ಟ್‌ ಗಾರ್ಡ್‌ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದೆ. ಹಡಗಿನಲ್ಲಿರುವ ಫ‌ರ್ನಸ್‌ ಆಯಿಲ್‌ ಮತ್ತು ಎಂಜಿನ್‌ ಆಯಿಲ್‌ ಹೊರತೆಗೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋಸ್ಟ್‌ ಗಾರ್ಡ್‌ ಡಿಐಜಿಗೆ ಸೂಚಿಸಲಾಯಿತು. ಈ ಹಡಗಿನ ಸುತ್ತ ಮೀನುಗಾರಿಕೆ ನಡೆಸದಂತೆ ಮೀನುಗಾರಿಕಾ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

ತೈಲ ಹೊರತೆಗೆಯುವ ಕಾರ್ಯಾಚರಣೆಗೆ ಎಂಆರ್‌ಪಿಎಲ್‌ ಮತ್ತು ಎನ್‌ಎಂಪಿಟಿ ಸಂಸ್ಥೆಯವರು ತಮ್ಮಲ್ಲಿರುವ ರಕ್ಷಣ ಸಾಮಗ್ರಿಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.  ಒಂದು ವೇಳೆ ತೈಲ ಸೋರಿಕೆಯಾಗಿ ಸಮುದ್ರ ದಡಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರುವಂತೆ ಹಾಗೂ ಯಾವುದೇ ಕಾರಣಕ್ಕೂ ಸೋರಿಕೆಯಾಗುವ ತೈಲ ನದಿಗೆ ಸೇರದಂತೆ ಎಚ್ಚರಿಕೆ ವಹಿಸಲು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಸ್ಟ್‌ ಗಾರ್ಡ್‌ ಡಿಐಜಿ ಅವರನ್ನು ಚೀಫ್ ಇನ್ಸಿಡೆಂಟ್‌ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ.

ಮುಳುಗಡೆಯಾದ ನೌಕೆಯಿಂದ ರಕ್ಷಿಸಲ್ಪಟ್ಟ 15 ಮಂದಿ ಸಿರಿಯಾ ಪ್ರಜೆಗಳನ್ನು ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ‌ ತಾತ್ಕಾಲಿಕ ಆಶ್ರಿತ ಕೇಂದ್ರಕ್ಕೆ ಕಳುಹಿಸಲಾಗುವುದು. ದಿಲ್ಲಿಯ ವಿದೇಶಾಂಗ ವಿಭಾಗದ‌ ಒಪ್ಪಿಗೆ ಬಳಿಕ ಅವರನ್ನು ಸಿರಿಯಾಕ್ಕೆ ಕಳುಹಿಸಲಾಗುತ್ತದೆ.

ತೈಲ ಸೋರಿಕೆ ತಡೆಗೆ ಬರಲಿದೆ ವಿಶೇಷ ನೌಕೆ :

ಮುಳುಗಿರುವ ಹಡಗಿನಿಂದ ಯಾವುದೇ ಮಾಲಿನ್ಯ ಉಂಟಾಗದಂತೆ ನೋಡಿಕೊಳ್ಳುವುದಕ್ಕಾಗಿ ಕೋಸ್ಟ್‌ಗಾರ್ಡ್‌ ತನ್ನ ವಿಶೇಷ ನೌಕೆ ಐಸಿಜಿಎಸ್‌ ಸಮುದ್ರ ಪಾವಕ್‌ನ್ನು ತರಿಸಲು ಮುಂದಾಗಿದೆ. ಪ್ರಸ್ತುತ ಹಡಗಿನ ಡರ್ಟಿ ವಾಟರ್‌ ಟ್ಯಾಂಕ್‌ನಿಂದ ಸಣ್ಣ ಪ್ರಮಾಣದಲ್ಲಷ್ಟೇ ತೈಲ ಹೊರಬಂದಿರುವುದಾಗಿ ತಿಳಿದು ಬಂದಿದೆ. ಹಡಗಿನಲ್ಲಿ 220 ಮೆಟ್ರಿಕ್‌ ಟನ್‌ ತೈಲ ಇರುವ ಹಿನ್ನೆಲೆಯಲ್ಲಿ ದೊಡ್ಡ ಮಾಲಿನ್ಯ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. 6 ನೌಕೆಗಳು, 2 ಡೋರ್ನಿಯರ್‌ ವಿಮಾನಗಳನ್ನು ಅಲ್ಲದೆ ಸ್ಥಳೀಯ 2 ದೋಣಿಗಳನ್ನು ತೈಲ ಚೆಲ್ಲುವಿಕೆ ಬಗ್ಗೆ ನಿಗಾ ವಹಿಸಲು ನಿಯೋಜನೆ ಮಾಡಲಾಗಿದೆ. ತೈಲ ಚೆಲ್ಲುವಿಕೆ ತಡೆ ಕಾರ್ಯಾಚರಣೆಗೆ ಬಳಸುವ ವಿಶೇಷ ನೌಕೆ ಸಮುದ್ರ ಪಾವಕ್‌ ಪೋರಬಂದರ್‌ನಿಂದ ಹೊರಟಿದ್ದು ಜೂ. 25ರಂದು ಮಂಗಳೂರು ತಲಪಲಿದೆ ಎಂದು ಕೋಸ್ಟ್‌ಗಾರ್ಡ್‌ ತಿಳಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.