ಶಿಮಂತೂರು ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿ


Team Udayavani, Aug 15, 2021, 3:00 AM IST

ಶಿಮಂತೂರು ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿ

ಶಿಮಂತೂರು ಅಭಿವೃದ್ಧಿ ಹೊಂದುತ್ತಿರುವ ಗ್ರಾಮ. ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಇಲ್ಲಿ ಅವಕಾಶವಿದೆ. ಇದಕ್ಕೆ ಸರಕಾರ ಯೋಜನೆ ರೂಪಿಸುವುದು ಅಗತ್ಯ. ಸಾರ್ವಜನಿಕ ಶ್ಮಶಾನ, ತ್ಯಾಜ್ಯ ಸಂಗ್ರಹ ಘಟಕ ನಿರ್ಮಾಣ ಮಾಡುವುದು ಅಗತ್ಯ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಮೂಲಕ ಪ್ರಯತ್ನಿಸಲಾಗಿದೆ.

ಮೂಲ್ಕಿ: ಶಿಮಂತೂರು ಗ್ರಾಮವು ಕೃಷಿ ಪ್ರಧಾನ ಪ್ರದೇಶ. ಇಲ್ಲಿ ನೀರಿನ ಒರತೆ ಪ್ರಮಾಣ ಉತ್ತಮವಾಗಿದೆ. ನೀರಿನ ಮೂಲಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವುದರಿಂದ ಈ ಗ್ರಾಮಕ್ಕೆ ಸರ್ವಕಾಲಕ್ಕೂ ನೀರು ಒದಗಿಸುವುದರ ಜತೆಗೆ ನೆರೆಯ ಗ್ರಾಮಗಳ ನೀರಿನ ಸಮಸ್ಯೆಯನ್ನೂ ಹೋಗಲಾಡಿಸಬಹುದು.

ಇಲ್ಲಿನ ಕೆಲವು ಸಣ್ಣಪುಟ್ಟ ಅಣೆಕಟ್ಟುಗಳು ಗ್ರಾಮಸ್ಥರ ನಿರ್ವಹಣೆಯಲ್ಲಿದೆ. ಬಹುಮುಖ್ಯವಾಗಿ ಒಂದೆರೆಡು ಕಿಂಡಿ ಅಣೆಕಟ್ಟುಗಳನ್ನು  ನಿರ್ಮಿಸಿ ನೀರನ್ನು ತಡೆದು ಸಂಗ್ರಹಿಸ ಬೇಕಾದ ಅನಿವಾರ್ಯವಿದೆ. ಮಾತ್ರವಲ್ಲ ಸರಕಾರದ ಅಧೀನದಲ್ಲಿರುವ ಸುಮಾರು ಮೂರೂವರೆ ಎಕರೆ ಪ್ರದೇಶ ವ್ಯಾಪ್ತಿಯ ಮಾಡ್ರದ ಗುತ್ತು ಕೆರೆಯನ್ನು ಕ್ರಮಬದ್ಧವಾಗಿ ನಿರ್ವಹಣೆ ಮಾಡಬೇಕಿದೆ. ಈ ಕೆರೆಯಲ್ಲಿ ನೀರಿನ ಒರತೆ ಅತೀ ಹೆಚ್ಚು ಇದ್ದು, ಸಮರ್ಪಕ ಯೋಜನೆಗಳ ಮೂಲಕ ಅದನ್ನು ಸಂಗ್ರಹಿಸಿ ಇಲ್ಲಿನ ಕೃಷಿ ಭೂಮಿಗಳಿಗೆ ಒದಗಿಸಬೇಕಿದೆ. ಸರಕಾರದ ಆಧೀನದಲ್ಲಿರುವ ಮಾಡ್ರದ ಗುತ್ತು ಕೆರೆಯ ವ್ಯಾಜ್ಯ ನ್ಯಾಯಾಲಯದಲ್ಲಿದೆ. ಈ ಸಮಸ್ಯೆಯನ್ನು ಪರಿಹರಿಸಿ ಸರಕಾರ ನೀರು ಸಂಗ್ರಹಕ್ಕೆ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಜನರಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಕೊಡಿಸುವ ಯೋಜನೆಯಲ್ಲಿ ತೊಡಗಿ ಸಿಕೊಳ್ಳುವುದು ಅತೀ ಅಗತ್ಯ.

ಊರಿನ ಹಿತಕ್ಕಾಗಿ ದುಡಿಯುವ ಉತ್ತಮ ಸೇವಾ ಮನೋಭಾವನೆ ಯುವಕರ ತಂಡಗಳು ಊರಿನಲ್ಲಿ ಇವೆ. ಅವರಿಗೆ ಸ್ವೋದ್ಯೋಗ ಕಲ್ಪಿಸುವ ಯೋಜನೆಗಳನ್ನು ದೊರೆಕಿಸಿಕೊಡಬೇಕಿದೆ.ಸ್ವೋದ್ಯೋಗ ತರಬೇತಿ ಕೇಂದ್ರ, ವಿವಿಧ ಯೋಜ ನೆಗಳ ಬಗ್ಗೆ ಮಾಹಿತಿ ನೀಡುವ ಕೇಂದ್ರಗಳು ಇಲ್ಲಿ ಆರಂಭವಾದರೆ ಗ್ರಾಮ ಮತ್ತಷ್ಟು ಅಭಿವೃದ್ಧಿ ಹೊಂದಬಹುದು.

ಇತರ ಸಮಸ್ಯೆಗಳೇನು? :

  • ಆರೋಗ್ಯ ಉಪಕೇಂದ್ರ, ಸಾರ್ವಜನಿಕ ಶ್ಮಶಾನ ಮತ್ತು ತ್ಯಾಜ್ಯ ನಿರ್ವಹಣ ಘಟಕಗಳ ಬೇಡಿಕೆ ಹಲವಾರು ವರ್ಷಗಳಿಂದ ಇದ್ದು ಶೀಘ್ರ ಆರಂಭವಾಗಬೇಕಿದೆ.
  • ಆಡು, ಹಂದಿ, ಕೋಳಿ, ಜಾನುವಾರು ಸಾಕಣೆ, ಹೈನುಗಾರಿಕೆಗೆ ಬೇಕಾದ ಎಲ್ಲ ಸೌಕರ್ಯಗಳು ಇಲ್ಲರುವುದರಿಂದ ಸರಕಾರದಿಂದ ಪ್ರೋತ್ಸಾಹ ದೊರಕಬೇಕಿದೆ. ಅಲ್ಲದೇ ಪಶುಆಸ್ಪತ್ರೆ ಆರಂಭವಾಗಬೇಕಿದೆ.
  • ಇಲ್ಲಿನ ಅತೀ ಪುರಾತನ ಆದಿಜನಾರ್ದನ ದೇವಸ್ಥಾನ ಇದೆ. ಮೂಲ್ಕಿ ಸಾವಂತರು ಅರಮನೆಯನ್ನು ಹೊಂದಿದ್ದರು. ಮಾಗಣೆಯ ಕಾರಣಿಕ ಪುರುಷರಾದ ಕಾಂತಾಬಾರೆ- ಬೂದಾ ಬಾರೆಯರು ಕೂಡ ಇದೇ ಗ್ರಾಮದವರು ಎಂಬುದಕ್ಕೆ ದಾಖಲೆಗಳಿವೆ. ಪ್ರವಾಸಿ ತಾಣವಾಗಿ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಅವಕಾಶ ಇದ್ದು, ಇದಕ್ಕೆ ಯೋಜನೆ ರೂಪಿಸಬೇಕಿದೆ.
  • ಸರಕಾರದ ಯೋಜನೆಯ ಮೂಲಕ ಕೆಂಚನಕೆರೆ ಬಳಿಯ ಅಂಗರಗುದ್ದೆ ಮತ್ತು ಕುಚ್ಚಿ ಗುಡ್ಡೆಯಲ್ಲಿ ಇಲ್ಲಿ ನೂರಾರು ಮನೆಗಳನ್ನು ನಿರ್ಮಿಸಲಾಗಿದ್ದು, ಇವರ ಮೂಲಸೌಕರ್ಯಗಳ ಬೇಡಿಕೆಯನ್ನು ಈಡೇರಿಸಬೇಕಿದೆ.

 

-ಎಂ. ಸರ್ವೋತ್ತಮ ಅಂಚನ್‌ ಮೂಲ್ಕಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.