ಕೃಷಿಗೆ ಆದ್ಯತೆ ನೀಡಿ: ಮಹಮ್ಮದ್‌ ಮೋನು


Team Udayavani, Sep 19, 2017, 12:47 PM IST

19-mng–c5.jpg

ಅಂಬ್ಲಿಮೊಗರು:  ಕೃಷಿ ಸಂಸ್ಕೃತಿಯು ಅವನತ್ತಿಯತ್ತ ಸಾಗುತ್ತಿದ್ದು, ನಮ್ಮ ಆಚಾರ- ವಿಚಾರಗಳನ್ನು ಉಳಿಸುವುದರೊಂದಿಗೆ ಕೃಷಿಗೆ ಆದ್ಯತೆ ನೀಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ  ಕೃಷಿ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡಾಕೂಟಗಳು ಯುವ ಜನರಲ್ಲಿ ಕೃಷಿಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ತಾ.ಪಂ.ಅಧ್ಯಕ್ಷ ಮಹಮ್ಮದ್‌ ಮೋನು ಅಭಿಪ್ರಾಯಪಟ್ಟರು.

ಅಂಬ್ಲಿಮೊಗರು ಜನಸೇವಾ ಯುವಕ ಮಂಡಲ ಹಾಗೂ ಜಿಲ್ಲಾ ಪಂಚಾಯತ್‌ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಆಶ್ರಯದಲ್ಲಿ ಅಂಬ್ಲಿಮೊಗರು ದೋಟೆಮಾರು ಗದ್ದೆ ಯಲ್ಲಿ ನಡೆದ `ಬಲೇ ಕೆಸರ್‌ಡ್‌ ಗೊಬ್ಬುಗ’ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತುಳುನಾಡು ಅತಿಥಿ ಗೌರವ ವೈಶಿಷ್ಟ್ಯ ಹೊಂದಿದೆ. ಎಲ್ಲ ಧರ್ಮದ ಜನರು ಒಂದಾಗಿ ಬಾಳುವ ಈ ಪ್ರದೇಶದಲ್ಲಿ ಯುವಜನರು ಸಂಘಟನೆಗಳ ಮೂಲಕ ಸಾಮಾಜಿಕ ಸೇವೆಯೊಂದಿಗೆ ಎಲ್ಲರನ್ನು ಒಗ್ಗೂಡಿಸಿ ವಿಶೇಷ ಕ್ರೀಡೆ ಆಯೋಜಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಜಿ.ಪಂ.ಸದಸ್ಯೆ ಧನಲಕ್ಷ್ಮೀ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಅಂಬ್ಲಿಮೊಗರು ಪಡ್ಯಾರಮನೆ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಅಧ್ಯಕ್ಷ ದಿನೇಶ್‌ ಶೆಟ್ಟಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್‌ ಡಿ’ಸೋಜಾ, ಉದ್ಯಮಿ ಸತೀಶ್‌ ಮುಂಚೂರು, ರಾಣಿಪುರ ಚರ್ಚ್‌ ಪಾಲನಾ ಮಂಡಳಿ ಸದಸ್ಯ ನವೀನ್‌ ಡಿ’ಸೋಜಾ, ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ದಕ್ಷಿಣ ಭಾರತ ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ್‌ ಉಚ್ಚಿಲ್‌, ಕೆಥೋಲಿಕ್‌ ಸಭಾ ವಲಯಾಧ್ಯಕ್ಷ ಅರುಣ್‌ ಮೊಂತೆರೋ, ಅಂಬ್ಲಿಮೊಗರು ಗ್ರಾ.ಪಂ. ಅಧ್ಯಕ್ಷ ಮೊಹಮ್ಮದ್‌ ರಫೀಕ್‌, ಚಿತ್ರನಟ ಅರವಿಂದ ಬೋಳಾರ್‌, ಕೋಟ್ರಗುತ್ತು ಲಕ್ಷ್ಮೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮನಾಭ ರೈ, ಗ್ರಾ.ಪಂ. ಸದಸ್ಯ ದಯಾನಂದ ಶೆಟ್ಟಿ, ಯುವಕ ಮಂಡಲದ ಗೌರವ ಸಲಹೆಗಾರರಾದ ಸಂಜೀವ ಶೆಟ್ಟಿ, ಎ.ವಿಜಯ, ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ, ಜಯಪ್ರಕಾಶ್‌ ಶೆಟ್ಟಿ ಮುನ್ನೂರು ಉಪಸ್ಥಿತರಿದ್ದರು.

ಯುವಕ ಮಂಡಲದ ಮಾಜಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಪಡ್ಡಾಯಿಮನೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಅನಿಲ್‌ ಶೆಟ್ಟಿ ವಂದಿಸಿದರು. ಸದಸ್ಯರಾದ ಶ್ಯಾಮ್‌ ಸುಂದರ್‌, ಹರೀಶ್‌ ಅಂಬ್ಲಿಮೊಗರು ಹಾಗೂ ಲಕ್ಷ್ಮೀ ನಾರಾಯಣ ಹರೇಕಳ ನಿರೂಪಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.