ವಿದ್ಯಾರ್ಥಿಗಳ ಸಾಧನೆಗೆ ಆದ್ಯತೆ: ಡಾ| ಸುರೇಶ್‌


Team Udayavani, Apr 16, 2018, 11:04 AM IST

16-April-4.jpg

ಇನೋಳಿ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳ ಬದಲಾಗಿ ಮಾನ್ಯತೆಯನ್ನು ತುಲನೆ ಮಾಡಲಾಗುತ್ತಿದೆ. ವಾಸ್ತವವಾಗಿ ವಿದ್ಯಾರ್ಥಿಗಳ ಬುದ್ಧಿವಂತಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಅವರ ಭವಿಷ್ಯದ ಜತೆಗೆ ಶಿಕ್ಷಣ ಸಂಸ್ಥೆಯ ಹೆಸರು ಖ್ಯಾತಿ ಪಡೆಯುತ್ತದೆ ಎಂದು ಐಐಟಿ ಮುಂಬೈ ನಿರ್ದೇಶಕ ಡಾ| ಎ.ಕೆ. ಸುರೇಶ್‌ ಅಭಿಪ್ರಾಯಪಟ್ಟರು.

ಇನೋಳಿಯ ಬೇರೀಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಬೇರಿಸ್‌ ಎನ್ವಿರೋ ಆರ್ಕಿಟೆಕ್ಚರ್‌ ಡಿಸೈನ್‌ ಸ್ಕೂಲ್‌ ‘ಬಿಐಟಿ ಆ್ಯಂಡ್‌ ಬೀಡ್ಸ್‌ ಉತ್ಸವ- 2018’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆವಿಷ್ಕಾರಗಳತ್ತ ಮುಖ ಮಾಡಿ
ಎಂಜಿನಿಯರಿಂಗ್‌ ವಿಭಾಗ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ವಿಚಾರಗಳನ್ನು ಒಳಗೊಂಡ ಸಮಗ್ರ ವಿಷಯವಾಗಿದೆ. ತಾಂತ್ರಿಕ ಕೌಶಲಗಳ ಉಪಯೋಗದ ಜತೆಗೆ ಆವಿಷ್ಕಾರಗಳು ಎಂಜಿನಿಯರಿಂಗ್‌ ಪದವೀಧರರನ್ನು ಯಶಸ್ಸಿನ ಹಾದಿಯಲ್ಲಿ ನಡೆಸುತ್ತವೆ. ಈ ನಿಟ್ಟಿನಲ್ಲಿ ಬಿಐಟಿ ಶಿಕ್ಷಣ ಸಂಸ್ಥೆಯ ವಾತಾವರಣ ಪ್ರಕೃತಿ ಮಡಿಲಿನ ಜತೆಗಿನ ಒಡನಾಟ ಇರುವುದರಿಂದ ಶಿಕ್ಷಣಕ್ಕೆ ಪೂರಕವಾಗಿದ್ದು ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕಾಗಿದೆ ಎಂದರು. ಬೇರೀಸ್‌ ಅಕಾಡೆಮಿ ಆಫ್‌ ಲರ್ನಿಂಗ್‌ನ ಅಧ್ಯಕ್ಷ ಸೈಯದ್‌ ಮಹಮದ್‌ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇನ್ಪ್ಸಿರೇಜ್  ಸಾಫ್ಟ್‌ ವೇರ್‌ ಕನ್ಸಲ್ಟಿಂಗ್‌ ಪ್ರೈ.ಲಿ.ನ ನಿರ್ದೇಶಕಿ ಅನ್ನಪೂರ್ಣಾ, ಮಂಗಳೂರು ನವ
ಬಂದರು ಟ್ರಸ್ಟಿನ ಮೆಕ್ಯಾನಿಕಲ್‌ ಎಂಜಿನಿಯರ್‌ ಸತೀಶ್‌ ಹೊನ್ನಕಟ್ಟೆ ಮುಖ್ಯ ಅತಿಥಿಗಳಾಗಿದ್ದರು.

ಬೇರೀಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರಾಂಶುಪಾಲ ಡಾ| ಆ್ಯಂಟನಿ ಎ.ಜೆ., ಬೇರಿಸ್‌ ಎನ್ವಿರೋ ಆರ್ಕಿಟೆಕ್ಚರ್‌ ಡಿಸೈನ್‌ ಸ್ಕೂಲ್‌ನ ಪ್ರಾಂಶುಪಾಲ ಅಶೋಕ್‌ ಮೆಂಡೋನ್ಸ ವಾರ್ಷಿಕ ವರದಿ ಮಂಡಿಸಿದರು. ಬಿಐಟಿ ಸಿಎಸ್‌ಇ ವಿಭಾಗ ಮುಖ್ಯಸ್ಥ ಪ್ರೊ| ಮುಸ್ತಾಫ ಬಸ್ತಿಕೋಡಿ ಸ್ವಾಗತಿಸಿದರು. ಉರೂಸಾ ಖಾನ್‌ ನಿರೂಪಿಸಿದರು. ಅಬೂಬಕರ್‌ ಶಮೀಝ್ ವಂದಿಸಿದರು.

ಬಹುಮಾನ ವಿತರಣೆ
ಈ ಸಂದರ್ಭ ರ‍್ಯಾಂಕ್, ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ
ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.