ಖಾಸಗಿ ಬಸ್ ಮಾಲಕರಿಂದ ಉಳ್ತೂರಿನ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ
Team Udayavani, Jul 25, 2018, 2:50 AM IST
ತೆಕ್ಕಟ್ಟೆ: ಗ್ರಾಮೀಣ ಭಾಗಗಳಾದ ಉಳ್ತೂರು, ಕೆದೂರು, ಚಾರು ಕೊಟ್ಟಿಗೆ, ಬೇಳೂರು, ಶಾನಾಡಿ, ಹೆಸ್ಕಾತ್ತೂರು ಭಾಗಗಳಿಗೆ ಸಮರ್ಪಕವಾದ ಬಸ್ ಸಂಪರ್ಕಗಳಿಲ್ಲದೆ ಗ್ರಾಮೀಣ ಭಾಗದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ನಿತ್ಯ ಪರದಾಡಬೇಕಾದ ಪರಿಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಉದಯವಾಣಿ ‘ಗಗನ ಕುಸುಮವಾದ ಸರಕಾರಿ ಬಸ್ ಸೌಲಭ್ಯ’ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜು. 24ರಂದು ವರದಿ ಪ್ರಕಟವಾದ ಬೆನ್ನಲ್ಲೇ ಖಾಸಗಿ ಬಸ್ ಮಾಲಕರು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಅರಿತು ಬಸ್ ಸಂಚಾರದ ಮಾರ್ಗ ಬದಲಿಸಿ ಸಮಸ್ಯೆಗೆ ಸ್ಪಂದಿಸಿದ್ದಾರೆ.
ಬಸ್ ವೇಳಾಪಟ್ಟಿ
ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಳ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಿಂದ ಪ್ರತಿ ದಿನ ಬೆಳಗ್ಗೆ ಗಂಟೆ 8.45 ರಿಂದ ವಕ್ವಾಡಿ ಮಾರ್ಗವಾಗಿ ಕೋಟೇಶ್ವರ, ಕುಂದಾಪುರ ಬಸ್ ಸಂಚಾರ ನಡೆಸಲಿದೆ. ಮುಂದಿನ ದಿನಗಳಲ್ಲಿ ತೆಕ್ಕಟ್ಟೆ ಮಾರ್ಗವಾಗಿ ಕುಂದಾಪುರ ಸಂಪರ್ಕ ಕಲ್ಪಿಸುವ ಬಗ್ಗೆ ಖಾಸಗಿ ಬಸ್ ಮಾಲಕರು ಭರವಸೆಯನ್ನು ನೀಡಿದ್ದಾರೆ. ಈ ವರದಿಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
►ವಿಶೇಷ ವರದಿ►ಉಳ್ತೂರು: ಗಗನ ಕುಸುಮವಾದ ಸರಕಾರಿ ಬಸ್ ಸೌಲಭ್ಯ: https://bit.ly/2A254PB
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!