ಖಾಸಗಿ ವಾಹನ ಸಂಚಾರ ಸಂಪೂರ್ಣ ಬಂದ್‌

ಕೋವಿಡ್‌- 19 ಮಣಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಬಿಗಿ ಕ್ರಮ

Team Udayavani, Apr 3, 2020, 12:17 PM IST

ಖಾಸಗಿ ವಾಹನ ಸಂಚಾರ ಸಂಪೂರ್ಣ ಬಂದ್‌

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾಡಳಿತವು ಎ. 14ರ ವರೆಗೆ ವಿಧಿಸಿರುವ ಸೆ. 144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧಗಳನ್ನು ಹೇರಿದೆ. ಶುಕ್ರವಾರದಿಂದ ಖಾಸಗಿ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಸಾರ್ವಜನಿಕರು ತಮ್ಮ ಸಮೀಪದ ಅಂಗಡಿಗ  ಳಿಂದಲೇ ಖರೀದಿಸಬೇಕು ಎಂದು ಸೂಚಿಸಲಾಗಿದೆ.

ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರ ವರೆಗಿನ ಸಮಯ ವನ್ನು ಬಹುತೇಕ ಜನರು ದುರುಪಯೋಗ ಮಾಡುತ್ತಿದ್ದು, ಅನಗತ್ಯ ತಿರುಗಾಟ ಅಧಿಕವಾಗುತ್ತಿದೆ. ಇದನ್ನು ಮನಗಂಡು ಜಿಲ್ಲಾಡಳಿತ ಖಾಸಗಿ ವಾಹನ ಸಂಚಾರವನ್ನೇ ನಿರ್ಬಂಧಿಸುವ ತೀರ್ಮಾನಕ್ಕೆ ಬಂದಿದೆ.

ಗುರುತಿನ ಚೀಟಿ ಹೊಂದಿದ ವೈದ್ಯಕೀಯ ಸಿಬಂದಿ ಮತ್ತು ವಾರ್ತಾ ಇಲಾಖೆಯ ಪಾಸ್‌ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಖಾಸಗಿ ವಾಹನಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವೈದ್ಯಕೀಯ ಸೇವೆಗಾಗಿ ಹಾಗೂ ಆ್ಯಂಬುಲೆನ್ಸ್‌ ಬಳಕೆಗಾಗಿ ಎಲ್ಲ ಸಾರ್ವಜನಿಕರು 108/ 1077 ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದು. 108 ಆ್ಯಂಬುಲೆನ್ಸ್‌ ಸೇವೆ ಲಭ್ಯವಿಲ್ಲದಿದ್ದಲ್ಲಿ ಮಾತ್ರವೇ ಸಾರ್ವಜನಿಕರು 1077 ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿದ್ದಲ್ಲಿ ಖಾಸಗಿ ವಾಹನಗಳಿಗೆ ವೈದ್ಯಕೀಯ ತುರ್ತು ಪಾಸ್‌ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಹಾರ ಪದಾರ್ಥಗಳನ್ನು ಕೊಂಡೊಯ್ಯಲು ಬಳಸುವ ಕಮರ್ಷಿಯಲ್‌ ತ್ರಿಚಕ್ರ, ಚತುಷcಕ್ರಗಳ ಲಘು ಸಾರಿಗೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಸಾರ್ವಜನಿಕರಿಗೆ ತುರ್ತಾಗಿ ಸಂಚರಿಸಬೇಕಾದ ಅಗತ್ಯವಿದ್ದರೆ, ಉಪವಿಭಾಗಾಧಿ ಕಾರಿ ಕಚೇರಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿಶೇಷ ಪಾಸ್‌ ಪಡೆದುಕೊಂಡು ಸಂಚರಿಸ ಬಹುದು ಎಂದು ನಗರ ಪೊಲೀಸ್‌ ಆಯುಕ್ತಡಾ| ಪಿ.ಎಸ್‌. ಹರ್ಷ ತಿಳಿಸಿದ್ದಾರೆ.

214ರಲ್ಲಿ 205 ನೆಗೆಟಿವ್‌
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 214 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 9 ಪಾಸಿಟಿವ್‌ ಬಂದಿದ್ದರೆ, ಉಳಿದ 205 ಪ್ರಕರಣ ನೆಗೆಟಿವ್‌ ಬಂದಿದೆ.
5,875 ಮಂದಿ ಗೃಹ ನಿಗಾವಣೆ ಯಲ್ಲಿದ್ದು, 300 ಮಂದಿ 28 ದಿನಗಳ ಗೃಹ ನಿಗಾವಣೆ ಪೂರೈಸಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 30 ಮಂದಿ ನಿಗಾದಲ್ಲಿದ್ದಾರೆ. 239 ಮಂದಿಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 223 ಮಾದರಿ

ಸ್ವೀಕೃತವಾಗಿದೆ. 16 ಮಂದಿಯ ಮಾದರಿಯನ್ನು ಗುರುವಾರ ಪರೀಕ್ಷೆಗೆ ಕಳುಹಿಸಲಾ ಗಿದೆ. 16 ಮಂದಿಯ ವರದಿ ಗುರುವಾರ ಆರೋಗ್ಯ ಇಲಾಖೆ ಕೈ ಸೇರಿದ್ದು, ಎಲ್ಲವೂ ನೆಗೆಟಿವ್‌ ಆಗಿದೆ. 3 ಮಂದಿ ಹೊಸದಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.

ಮಂಗಳೂರು ನಗರದಲ್ಲಿ 154 ವಾಹನಗಳು ವಶಕ್ಕೆ
ಮಂಗಳೂರು: ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಾವಶ್ಯಕ ವಾಗಿ ವಾಹನ ಚಲಾಯಿಸಿದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರಗಿಸಿದ್ದು, ನಗರದಲ್ಲಿ ಸಂಜೆ ವೇಳೆಗೆ 154 ಖಾಸಗಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ತಿಳಿಸಿದ್ದಾರೆ. ಎಲ್ಲರೂ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಸೆಂಟ್ರಲ್‌ ಮಾರುಕಟ್ಟೆಯ ಹಣ್ಣು ,ತರಕಾರಿ ಬೈಕಂಪಾಡಿಗೆ ಸ್ಥಳಾಂತರ
ನಗರದ ಸೆಂಟ್ರಲ್‌ ಮಾರುಕಟ್ಟೆಯ ಎಲ್ಲ ಹಣ್ಣು ಮತ್ತು ತರಕಾರಿ ಸಗಟು ವ್ಯಾಪಾರಿಗಳನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಚಿಲ್ಲರೆ ವ್ಯಾಪಾ ರಿಗಳನ್ನು ಹೊರತುಪಡಿಸಿ  ಸಾರ್ವಜನಿಕ ಪ್ರವೇಶವನ್ನೂ ನಿಬ ìಂಧಿಸಲಾಗಿದೆ. ಬಂದರಿನಲ್ಲಿ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. ಸಗಟು ವ್ಯಾಪಾರಸ್ಥರು ರಿಟೇಲ್‌ ವ್ಯಾಪಾರಸ್ಥರಿಗೆ ಮಾತ್ರವೇ ಮಾರಾಟ ಮಾಡಬೇಕು. ಬಂದರಿನಲ್ಲಿ ಬೆಳಗ್ಗೆ 7ರಿಂದ 12ರ ವರೆಗೆ ವಾಹನಗಳ ಸಾರಕು ಇಳಿಸಲು ಅವಕಾಶವಿದೆ.  ಮಧ್ಯಾಹ್ನ 1ರಿಂದ ಸಂಜೆ 7ರ ವರೆಗೆ ಸಗ ಟು ಮಾರಾಟಗಾರರು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶವಿದೆ ಎಂದು  ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.