ಪ್ರಿಯಾಂಕಾ ಪ್ರಕರಣ: ಪೊಲೀಸ್‌ ಆಯುಕ್ತರಿಗೆ ಮನವಿ


Team Udayavani, Dec 12, 2017, 10:38 AM IST

12-11.jpg

ಮೂಡಬಿದಿರೆ: ಸೋಮವಾರ ಅಳಿಯೂರಿನಲ್ಲಿ ಮದುವೆಯಾಗಲಿದ್ದ  ದರೆಗುಡ್ಡೆಯ ಯುವತಿ ಪ್ರಿಯಾಂಕಾ ಶನಿವಾರ ಬೆಳ್ಳಂಬೆಳಗ್ಗೆಯೇ ನಾಪತ್ತೆಯಾದ ನಿಗೂಢ ಪ್ರಕರಣದ ಬಗ್ಗೆ  ಶೀಘ್ರ ಕ್ರಮ ಜರಗಿಸಿ ಆಕೆಯನ್ನು ಪತ್ತೆ ಹಚ್ಚಿ ಕೊಡಬೇಕು ಮತ್ತು ಈ ಪ್ರಕರಣದ ಹಿಂದಿರುವ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಜರಗಿಸಬೇಕು ಎಂದು ಮೂಡಬಿದಿರೆಯ ಭಂಡಾರಿ ಸಮಾಜ ಸೇವಾ ಸಂಘದವರು ಅಧ್ಯಕ್ಷ  ಪ್ರಶಾಂತ್‌ ಭಂಡಾರಿ ನೇತೃತ್ವದಲ್ಲಿ  ಸೋಮವಾರ ಮಂಗಳೂರು ಪೊಲೀಸ್‌ ಕಮಿಶನರ್‌ ಸುರೇಶ್‌ ಟಿ. ಆರ್‌. ಅವರಿಗೆ ಮನವಿ ಸಲ್ಲಿಸಿದರು.

ಡಿ. 11ರಂದು ಅಳಿಯೂರು ಹೇಮಾ ಸಭಾಭವನದಲ್ಲಿ  ಭಂಡಾರಿ ಸಮಾಜ ಸೇವಾ ಸಂಘದ ಸದಸ್ಯೆ ವೀಣಾ ಭಂಡಾರಿ ಅವರ ಪುತ್ರಿ ಪ್ರಿಯಾಂಕಾ ಅವರ ಮದುವೆಗೆ ಏರ್ಪಾಡಾಗಿತ್ತು. ಆದರೆ ವಧು ನಾಪತ್ತೆಯಾಗಿರುವ ವಿಚಾರ ಶನಿವಾರ ಗೊತ್ತಾಗಿದ್ದು  ಈ ಬಗ್ಗೆ  ವೀಣಾ ಅವರು ಸಂಘಕ್ಕೆ  ಮತ್ತು ಮೂಡಬಿದಿರೆ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ  ವಿಚಾರಿಸಲಾಗಿ, ಫ‌ರಂಗಿಪೇಟೆಯ ಹೈದರ್‌ ಎಂಬ ವ್ಯಕ್ತಿ ವಧುವನ್ನು ಅಪಹರಿಸಿರುವ ಬಗ್ಗೆ  ಮಾಹಿತಿ ಲಭಿಸಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಲವ್‌ ಜೆಹಾದ್‌ ಶಂಕೆ
ಹಿಂದೂ ಹುಡುಗಿಯರನ್ನು ಅನ್ಯ ಧರ್ಮೀಯರು “ಲವ್‌ ಜೆಹಾದ್‌’ ಹೆಸರಿನಲ್ಲಿ  ಪ್ರೀತಿಸಿ ಮತಾಂತ ರಿಸುವ ಕಾರ್ಯ ವ್ಯಾಪಕ ವಾಗಿ ನಡೆಯುತ್ತಿರುವುದನ್ನು ಉಲ್ಲೇಖೀಸಿ ರುವ  ಅಧ್ಯಕ್ಷರು ಈ ಪ್ರಕರಣದಲ್ಲೂ  ಪ್ರಿಯಾಂಕಾಳನ್ನು  ಲವ್‌ ಜೆಹಾದ್‌ ಹೆಸರಿನಲ್ಲಿ  ಫರಂಗಿಪೇಟೆಯ ಹೈದರ್‌ ವಂಚಿಸಿರುವುದಾಗಿ ಆರೋಪಿಸಿದ್ದಾರೆ ಹಾಗೂ  ಕೃತ್ಯವೆಸಗಿದವರು ಹಾಗೂ ಸಹಕರಿಸಿದವರ ಮೇಲೆ ಕಾನೂನು ಕ್ರಮ ಜರಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಭಂಡಾರಿ ಸಮಾಜದ ನಿಯೋಗದಲ್ಲಿ  ಸ್ಥಾಪಕಾಧ್ಯಕ್ಷ ಎಂ. ಆರ್‌. ಭಂಡಾರಿ, ಹಾಲಿ ಉಪಾಧ್ಯಕ್ಷರಾದ ಪ್ರಕಾಶ್‌ ಭಂಡಾರಿ, ನೀಲಯ್ಯ ಭಂಡಾರಿ, ಸಂಧ್ಯಾ ಭಂಡಾರಿ, ಪ್ರ. ಕಾರ್ಯದರ್ಶಿ ಗುರುಪ್ರಸಾದ್‌ ಭಂಡಾರಿ, ನಿಕಟಪೂರ್ವ ಅಧ್ಯಕ್ಷ ಮಾಧವ ಭಂಡಾರಿ, ಮಾಜಿ ಅಧ್ಯಕ್ಷ ಸತೀಶ್‌ ಭಂಡಾರಿ, ಕೋಶಾಧಿಕಾರಿ ಯೋಗೇಶ್‌ ಭಂಡಾರಿ, ಮಾಜಿ ಅಧ್ಯಕ್ಷರಾದ ಸತೀಶ್‌ ಭಂಡಾರಿ, ರಮೇಶ್‌ ಭಂಡಾರಿ, ಸಂಘಟನಾ ಕಾರ್ಯದರ್ಶಿಗಳಾದ ಉಷಾ ಭಂಡಾರಿ, ಕೃಷ್ಣಾನಂದ ಭಂಡಾರಿ, ಸಂಘಟನಾ ಕಾರ್ಯದರ್ಶಿ ಕೃಷ್ಣಾನಂದ ಭಂಡಾರಿ, ಜತೆ ಕಾರ್ಯದರ್ಶಿ ಅಶೋಕ್‌ ಭಂಡಾರಿ, ಮಾನವ ಹಕ್ಕುಗಳ ಮಹಿಳಾ ವಿಭಾಗದ ರಾಜ್ಯ ಕಾರ್ಯದರ್ಶಿ ಉಷಾ ಭಂಡಾರಿ, ನವೀನ್‌ ಭಂಡಾರಿ, ಸುರೇಶ್‌ ಭಂಡಾರಿ ಮೊದಲಾದವರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.