ಸತ್ಯ ನಮ್ಮ ಹೃದಯದಲ್ಲಿರಬೇಕು, ಸತ್ಯದ ಭಾವದ ಜೊತೆ ಸೇವೆ ಮಾಡಬೇಕು: ಮೂಲ್ಕಿಯಲ್ಲಿ ಪ್ರಿಯಾಂಕ


Team Udayavani, May 7, 2023, 5:42 PM IST

Priyanka gandhi at mulky

ಮೂಲ್ಕಿ: ಸತ್ಯ ನಮ್ಮ ಹೃದಯದಲ್ಲಿರಬೇಕು, ಸತ್ಯದ ಭಾವದ ಜೊತೆ ಸೇವೆ ಮಾಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದರು.

ಅವರು ಇಂದು ಮಂಗಳೂರಿನ ಮೂಲ್ಕಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ 40% ಸರಕಾರದ ಆತಂಕವಿದೆ. ಜನರನ್ನು ಲೂಟಿ ಮಾಡುವ ಬಿಜೆಪಿ ಸರಕಾರದ ಬಗ್ಗೆ ಆತಂಕವಿದೆ ಎಂದರು.

ನಮಸ್ಕಾರ ತುಳುನಾಡು, ಮಾತೆರೆಗ್ಲ ಎನ್ನ ಸೊಲ್ಮೆಲು ಎಂದು ತುಳುವಿನಲ್ಲೇ ಮಾತು ಆರಂಭಿಸಿದ ಪ್ರಿಯಾಂಕ ಗಾಂಧಿ, ಇದು ದೈವ ಭೂಮಿ, ಧರ್ಮದ ಮಣ್ಣು, ಜೈನ ಧರ್ಮದ ಪವಿತ್ರ ಬೀಡು ಮೂಡಬಿದ್ರೆ, ಬಪ್ಪನಾಡು, ಕಟೀಲು ದುರ್ಗಾಪರಮೇಶ್ವರಿ ದೇವರ ಆಶೀರ್ವಾದ ಈ ಭೂಮಿಗಿದೆ. ಧರ್ಮದ ಊರಾಗಿರುವ ಇಲ್ಲಿಂದ ಒಂದು ಒಳ್ಳೆಯ ಸಂದೇಶ ದೇಶಕ್ಕೆ ಸಿಕ್ಕಿದೆ ಎಂದರು.

40% ಸರಕಾರ ಪ್ರತೀ ಸರಕಾರಿ ಹುದ್ದೆಗೂ ರೇಟ್ ಫಿಕ್ಸ್ ಮಾಡುತ್ತಿದೆ. ಇದು ಚುನಾವಣೆಯ ಸಮಯ, ಜಾಗರೂಕರಾಗಿರಬೇಕು. ಇಲ್ಲಿ 40% ಸರಕಾರದ ಆತಂಕವಿದೆ. ಜನರನ್ನು ಲೂಟಿ ಮಾಡುವ ಬಿಜೆಪಿ ಸರ್ಕಾರದ ಬಗ್ಗೆ ಆತಂಕವಿದೆ. 40% ಸರಕಾರ ಪ್ರತೀ ಸರಕಾರಿ ಹುದ್ದೆಗೂ ರೇಟ್ ಫಿಕ್ಸ್ ಮಾಡುತ್ತಿದೆ, ಇದರ ಆತಂಕವಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಚುನಾವಣೆ ಹೊತ್ತಿನಲ್ಲಿ ಬಂದು ಆತಂಕವಾದ ಮತ್ತು ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ಆದರೆ ಕರ್ನಾಟಕದಲ್ಲಿ ಇದೆಲ್ಲಾ ನಡೆಯುವುದಿಲ್ಲ. ಭಾಷಣ ತಯಾರು ಮಾಡುವ ಅಧಿಕಾರಿ ಉದ್ಯೋಗದ ಬಗ್ಗೆ ಹೇಳುತ್ತಾನೆ. ಆದರೆ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಯೇ ಆಗಿಲ್ಲ, ಮಾತನಾಡುವುದು ಹೇಗೆ? ಕೊನೆಗೆ ಆತಂಕವಾದ, ಸುರಕ್ಷತೆಯ ಭಾಷಣ ಮಾಡಿ ಹೋಗುತ್ತಾರೆ. ಇವತ್ತು ಇಡೀ ಕರ್ನಾಟಕದಲ್ಲಿ ಇದರ ಆತಂಕವಿದೆ ಎಂದರು.

ಕಾರ್ಪೋರೇಷನ್ ಬ್ಯಾಂಕ್, ವಿಜಯಾ ಬ್ಯಾಂಕ್‌, ಕೆನರಾ ಬ್ಯಾಂಕ್ ಎಲ್ಲವನ್ನೂ ವಿಲೀನ ಮಾಡಿದರು. ಇಂದಿರಾ ಗಾಂಧಿ ನವ ಮಂಗಳೂರು ಬಂದರು ಮಾಡಿದರು. ನೆಹರೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿದರು. ಆದರೆ ಎರಡನ್ನೂ ಅದಾನಿಗೆ ಮಾರಾಟ ಮಾಡಿದರು. ಇದೆಲ್ಲವನ್ನೂ ಒಂದಿಬ್ಬರು ಜನರಿಗೆ ಮಾರಾಟ ಮಾಡೋದು ಆತಂಕ ಅಲ್ವಾ ಎಂದು ಅವರು ಪ್ರಶ್ನಿಸಿದರು.

ನಂದಿನ ಹಾಲು ಚೆನ್ನಾಗಿಯೇ ಇದೆ, ಈಗ ಗುಜರಾತ್ ನ‌ ಅಮುಲ್ ಗೆ ವಿಲೀನ ಮಾಡಲು ಯತ್ನಿಸುತ್ತಿದ್ದಾರೆ ಎಂದ ಅವರು, ಕಾಂಗ್ರೆಸ್ ಕೆಲವು ಗ್ಯಾರಂಟಿಗಳನ್ನ ಕೊಟ್ಟಿದೆ, ನಮ್ಮ ಸರಕಾರ ಬೇರೆ ರಾಜ್ಯಗಳಲ್ಲಿ ಕೊಟ್ಟ ಗ್ಯಾರಂಟಿ ಈಡೇರಿಸಿದೆ. ಬಿಜೆಪಿಯವರು ಲೂಟಿಯಲ್ಲೇ ತೊಡಗಿದ್ದಾರೆ, ಜನರ ಸಮಸ್ಯೆ ಅವರಿಗೆ ಬೇಕಾಗಿಲ್ಲ. ಧರ್ಮ ಮತ್ತು ಆತಂಕವಾದದ ಬಗ್ಗೆ ಮಾತನಾಡೋದು ಬಿಟ್ಟರೆ ನಿಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.