ಪ್ರೊ| ಎ. ವಿ. ನಾವಡರಿಗೆ ಕೊ.ಅ. ಉಡುಪ ಪ್ರಶಸ್ತಿ
Team Udayavani, Jul 25, 2019, 5:06 AM IST
ಕಿನ್ನಿಗೋಳಿ: ಜ್ಞಾನ ಸೃಷ್ಟಿ ವಿತರಣೆ ಆಗುವುದು ವಿಶ್ವವಿದ್ಯಾನಿಲಯಗಳಲ್ಲಿ ಎಂಬುದು ಭ್ರಮೆ, ಕಿನ್ನಿಗೋಳಿ ಯುಗಪುರುಷದಂತಹ ಕೇಂದ್ರಗಳಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ, ಜ್ಞಾನ ಸೃಷ್ಟಿ ವಿತರಣೆ ಆಗುತ್ತಿದೆ ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವರಾಗಿದ್ದ ಪ್ರೊ| ಎ.ವಿ. ನಾವಡ ಅವರು ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆದ ಸಮಾ ರಂಭದಲ್ಲಿ ಅವರು ಯುಗಪುರುಷ ಸಂಸ್ಥಾಪಕ ದಿ| ಕೊ.ಅ. ಉಡುಪ ಪ್ರಶಸ್ತಿ,10 ಸಾವಿರ ರೂ. ನಗದು, ಗೌರವ ಫಲಕ, ಪ್ರಶಸ್ತಿ ಪತ್ರ ಸ್ವೀಕರಿಸಿ ಮಾತ ನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮದರ್ಶಿ ಹರಿಕೃಷ್ಣ ಪುನರೂರು ಸಾಹಿತ್ಯ ಪ್ರೋತ್ಸಾಹಿಸಲು ಯುಗ ಪುರುಷದಂತಹ ಪತ್ರಿಕೆಗಳು ವೇದಿಕೆ ಒದಗಿಸಿದ್ದರಿಂದ ಸಾಹಿತಿಗಳು ಬೆಳಕಿಗೆ ಬಂದಿದ್ದಾರೆ ಎಂದರು.
ಸುರತ್ಕಲ್ನ ದಿ ಒರಿಯೆಂಟಲ್ ಇನ್ಶೂರೆನ್ಸ್ ಕಂಪೆನಿಯ ಹಿರಿಯ ಶಾಖಾ ಪ್ರಬಂಧಕ ಯಾದವ ದೇವಾಡಿಗ ಅವರು ದಿ| ಕೊ.ಅ. ಉಡುಪರ ಸಂಸ್ಮರಣೆ ಮಾಡಿದರು.
ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಪಡುಬಿದ್ರಿ ಶ್ರೀ ಖಡೆYàಶ್ವರೀ ದೇವಳದ ಒಂದನೇ ಪಾತ್ರಿ ಪಿ.ಜಿ. ನಾರಾಯಣ ರಾವ್ ಅವರನ್ನು ಕಟೀಲು ದೇವಳದ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಸಮ್ಮಾನಿಸಿದರು.
ಬೆಂಗಳೂರು ಎಂ.ವಿ. ಭಟ್ (ಶ್ರೀ ಮಿತ್ತೂರು)ರವರ “ದುಡಿಮೆಯೇ ದೇವರು’ ಹಾಗೂ ದೇವೇಂದ್ರ ಅಮೀನ್ರವರ “ಮಾಯದ ಮಾಣಿಕ್ಯ’ ಕೃತಿಯನ್ನು ಈ ಸಂದರ್ಭ ಹಿರಿಯ ಸಾಹಿತಿ ಕೆ.ಜಿ. ಮಲ್ಯ ಅವರು ಅನಾವರಣಗೊಳಿಸಿದರು.ಜೋತಿಷಿ ರಂಗ ಐತಾಳ್, ಸಂತೋಷ್ಕುಮಾರ್ ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ, ಜಗದೀಶ್ಚಂದ್ರ ಅಂಚನ್, ಡಾ| ನಯನಾಭಿರಾಮ ಉಡುಪ, ಪದ್ಮನಾಭ ಉಡುಪ ಉಪಸ್ಥಿತರಿದ್ದರು.
ಯುಗಪುರುಷದ ಪ್ರಧಾನ ಸಂಪಾ ದಕ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು. ಅನುಷಾಕೊಡೆತ್ತೂರು ಹಾಗೂ ಗುರುಪ್ರಸಾದ್ ಭಟ್ ಸಮ್ಮಾನ ಪತ್ರ ವಾಚಿಸಿದರು. ಶರತ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ