ಒಳ ಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆ


Team Udayavani, Jan 10, 2018, 10:39 AM IST

10–Jan-5.jpg

ಸುರತ್ಕಲ್‌ : ಇಲ್ಲಿನ ಕುಳಾಯಿ, ಹೊನ್ನಕಟ್ಟೆ, ಹೊಸಬೆಟ್ಟು, ಬೈಕಂಪಾಡಿ ಮತ್ತಿತರೆಡೆ ಹೆದ್ದಾರಿ ಬದಿ ಒಳ ಚರಂಡಿ ವ್ಯವಸ್ಥೆ ಇಲ್ಲದೆ ಹೊಟೇಲು ಕೊಳಚೆ ನೀರು ಹರಿದು ದುರ್ವಾಸನೆ ಬರುತ್ತಿದೆ.

ಡಾಬಾಗಳ ಕಲುಷಿತ ನೀರು
ವಿವಿಧ ಫಲಾಹಾರ ಮಂದಿರ, ಡಾಬಾಗಳು ಕಲುಷಿತ ನೀರನ್ನು ಬಿಡಲು ಸರಿಯಾದ ವ್ಯವಸ್ಥೆ ಮಾಡಿಕೊಳ್ಳದಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಬಳಸಿದ ನೀರು ನೇರವಾಗಿ ಅಲ್ಲಲ್ಲಿ ಇರುವ ಮಳೆ ನೀರು ಹರಿಯುವ ತೋಡುಗಳಲ್ಲಿ ನಿಲ್ಲುವುದರಿಂದ ದುರ್ವಾಸನೆಗೆ ಕಾರಣವಾಗುತ್ತಿದೆ. ಮಾತ್ರವಲ್ಲ ಸೊಳ್ಳೆ ಉತ್ಪತ್ತಿ ತಾಣವಾಗಿ ಬದಲಾಗುತ್ತಿವೆ.

ಪಾದಚಾರಿಗಳಿಗೆ ಸಂಕಷ್ಟ
ಇನ್ನು ಕೆಲವೆಡೆ ಮಾಂಸಾಹಾರ ಕ್ಯಾಂಟೀನ್‌ಗಳಿಂದ ಬರುವ ಕಲುಷಿತ ನೀರಿನ ಅಸಾಧ್ಯ ವಾಸನೆಯಿಂದ ಪಾದಚಾರಿಗಳು ಮೂಗು ಮುಚ್ಚಿ ನಡೆಯುವಂತಾಗಿದೆ.

ಹೆದ್ದಾರಿ ಇಲಾಖೆ ಎಚ್ಚೆತ್ತುಕೊಳ್ಳಲಿ
ಈ ಭಾಗಗಳು ಹೆದ್ದಾರಿ ಇಲಾಖೆಗೆ ಸೇರಿರುವುದರಿಂದ ಮಹಾನಗರ ಪಾಲಿಕೆ ಏನೂ ಮಾಡುವಂತಿಲ್ಲ. ಪಾಲಿಕೆ ವ್ಯಾಪ್ತಿ
ಯಲ್ಲಿ ಒಳಚರಂಡಿ ವ್ಯವಸ್ಥೆ ಕೈಗೊಳ್ಳಲಾಗಿದೆ. ಹೀಗಾಗಿ ರಸ್ತೆ ಬದಿ ಇರುವ ವ್ಯಾಪಾರ ಕೇಂದ್ರದ ಮಾಲಕರು ಕಲುಷಿತ ನೀರು ಬಿಡಲು ತಮ್ಮದೇ ವ್ಯವಸ್ಥೆ ರೂಪಿಸಿಕೊಳ್ಳಬೇಕಾಗಿದೆ. ಆದರೆ ಅನಧಿಕೃತವಾಗಿ ಹೆದ್ದಾರಿ ಬದಿಯ ತೋಡಿಗೆ
ಬಿಡುವುದರಿಂದ ಈ ಸಮಸ್ಯೆ ಉದ್ಭವಿಸಿದೆ. 

ಕ್ರಮ ಕೈಗೊಳ್ಳಿ
ಪಾಲಿಕೆ ಆಡಳಿತಕ್ಕೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ತೆರಿಗೆ ಸಂಗ್ರಹದ ಬಗ್ಗೆ ಲೆಕ್ಕಾಚಾರ ಮಾಡುವ ಪಾಲಿಕೆ ಈ ಅವ್ಯವಸ್ಥೆಯನ್ನು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದು ಪಾದಚಾರಿಗಳು, ಸ್ಥಳೀಯರಿಗೆ
ಓಡಾಡುವ ವಾತಾವರಣ ನಿರ್ಮಿಸಬೇಕಾಗಿದೆ. ಇನ್ನಾದರೂ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳ ಬೇಕಿದೆ. 
ವಿಜಯ್‌ ಹೊಸಬೆಟ್ಟು,
   ಸ್ಥಳೀಯ ನಿವಾಸಿ

ಮಾಲಿನ್ಯ ಮಾಡುವಂತಿಲ್ಲ
ಹೆದ್ದಾರಿ ಬದಿ ಡಾಬ, ಹೊಟೇಲು ಮತ್ತಿತರ ತ್ಯಾಜ್ಯ ನೀರು ರಸ್ತೆ ಬದಿ ಬಿಡುವಂತಿಲ್ಲ. ಇದಕ್ಕೆ ಅಂಗಡಿ ಮಾಲಕರು ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಪರಿಸರ ಮಾಲಿನ್ಯ ಮಾಡುವಂತಿಲ್ಲ. ಹೆದ್ದಾರಿಯ ಹೊಸಬೆಟ್ಟು ಮತ್ತಿತರ ಪ್ರದೇಶಗಳ ತೋಡಿಗೆ ತ್ಯಾಜ್ಯ ನೀರು ಬಿಡುತ್ತಿರುವುದು ಅಪರಾಧ. ಇಲ್ಲದಿದ್ದಲ್ಲಿ ಪಾಲಿಕೆಯಿಂದ ಕ್ರಮ ಜರಗಿಸುವುದು
ಅನಿವಾರ್ಯವಾಗುತ್ತದೆ.
ಅಶೋಕ್‌ ಶೆಟ್ಟಿ,
  ಕಾರ್ಪೊರೇಟರ್‌

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.